AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ 24ಕ್ಕೆ ಮನ್​ ಕೀ ಬಾತ್​; ಸಾರ್ವಜನಿಕರಿಂದ ಅನಿಸಿಕೆ ಆಹ್ವಾನಿಸಿದ ಪ್ರಧಾನಿ ಮೋದಿ

Mann Ki Baat: ಪ್ರಧಾನಿ ನರೇಂದ್ರ ಮೋದಿ ಈ ಬಾರಿ ತಮ್ಮ ಮನ್​ ಕೀ ಬಾತ್​​ನಲ್ಲಿ ಯಾವ ವಿಚಾರವನ್ನು ಮಾತಿಗೆ ಎತ್ತಿಕೊಳ್ಳಬಹುದು ಎಂಬುದು ಕುತೂಹಲ ಹುಟ್ಟಿಸಿದೆ. 

ಅಕ್ಟೋಬರ್​ 24ಕ್ಕೆ ಮನ್​ ಕೀ ಬಾತ್​; ಸಾರ್ವಜನಿಕರಿಂದ ಅನಿಸಿಕೆ ಆಹ್ವಾನಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 16, 2021 | 11:31 PM

Share

ದೆಹಲಿ: ಅಕ್ಟೋಬರ್​ 24ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್​​ನ 82ನೇ ಆವೃತ್ತಿಯಲ್ಲಿ ಮಾತನಾಡಲಿದ್ದಾರೆ. ಈ 82ನೇ ಎಪಿಸೋಡ್​​ನ ಮನ್​ ಕೀ ಬಾತ್​​ಗಾಗಿ ವಿಚಾರಗಳು,  ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳೂ ಈ ಮನ್​ ಕೀ ಬಾತ್​ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇದರಲ್ಲಿ ಅವರು ರಾಜಕೀಯ ಹೊರತಾಗಿ ಬೇರೆ ವಿಶೇಷ ವಿಷಯಗಳ ಬಗ್ಗೆ ಉಲ್ಲೇಖ ಮಾಡುತ್ತಾರೆ. ಕಳೆದ ಮನ್​ ಕೀ ಬಾತ್​​ನಲ್ಲಿ ನದಿಗಳ ಮಹತ್ವ ತಿಳಿಸಿದ್ದರು. ನದಿಗಳ ದಿನದ ನೆನಪು ಮಾಡಿಕೊಟ್ಟಿದ್ದರು. ಹಾಗೇ ಟ್ವೀಟ್ ಮಾಡಿ, ಈ ತಿಂಗಳ ಮನ್​ ಕೀ ಬಾತ್​​ಗಾಗಿ ಅನಿಸಿಕೆ ಹಂಚಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದ್ದಾರೆ. 

ದೇಶದಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ಭರ್ಜರಿಯಾಗಿ ಸಾಗುತ್ತಿದೆ. ಮುಂದಿನ ವಾರ 100 ಕೋಟಿ ಗಡಿಯನ್ನೂ ದಾಟಿ ದಾಖಲೆ ನಿರ್ಮಿಸಲಿದೆ. ಇದರ ಮಧ್ಯೆ ದೇಶದಲ್ಲಿ ಕೊರೊನಾ ಸೋಂಕಿನ ಪ್ರಸರಣವೂ ತುಸು ಕಡಿಮೆಯಾಗಿದ್ದು, ಕೊವಿಡ್​ 19 ಶಿಷ್ಟಾಚಾರಗಳ ಪಾಲನೆಯಲ್ಲೂ ಸಡಿಲತೆ ಕಂಡುಬಂದಿದೆ. ಹೀಗೆ ಸುಮಾರು ವಿಷಯಗಳಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಬಾರಿ ತಮ್ಮ ಮನ್​ ಕೀ ಬಾತ್​​ನಲ್ಲಿ ಯಾವ ವಿಚಾರವನ್ನು ಮಾತಿಗೆ ಎತ್ತಿಕೊಳ್ಳಬಹುದು ಎಂಬುದು ಕುತೂಹಲ ಹುಟ್ಟಿಸಿದೆ.

ಈ ಬಗ್ಗೆ ಪ್ರಧಾನಮಂತ್ರಿ ಕಚೇರಿ ಕೂಡ ಹೇಳಿಕೆ ಬಿಡುಗಡೆ ಮಾಡಿದೆ. ನರೇಂದ್ರ ಮೋದಿಯವರು ಇದೇ ಭಾನುವಾರ ಅಂದರೆ ಅಕ್ಟೋಬರ್​ 24ರಂದು 82ನೇ ಎಪಿಸೋಡ್​​ನ ಮನ್​ ಕೀ ಬಾತ್​ ನಡೆಸಿಕೊಡಲಿದ್ದಾರೆ. ಅದಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರೂ ತಮ್ಮ ಅನಿಸಿಕೆ, ಅಭಿಪ್ರಾಯ, ವಿಚಾರಗಳನ್ನು ನಮೋ ಆ್ಯಪ್​, ಮೈ ಗವ್​ (NaMo App and My Gov)ಮೂಲಕ ಹಂಚಿಕೊಳ್ಳಬಹುದು. ಇಲ್ಲದೆ ಇದ್ದರೆ ತಮ್ಮ ಅನಿಸಿಕೆಯನ್ನು ರೆಕಾರ್ಡ್​ ಮಾಡಿ 1800-11-7800ಕ್ಕೆ ಕಳಿಸಬಹುದು ಎಂದು ಹೇಳಿದೆ.

ಇದನ್ನೂ ಓದಿ: Covid 19 Vaccination Anthem: ಕೊವಿಡ್​ 19 ಲಸಿಕೆ ಗೀತೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ; ಕೈಲಾಶ್​ ಖೇರ್​ ಗಾಯನ

ಐಪಿಎಲ್‌ನಲ್ಲಿ ಮಿಂಚಿದ ವೆಂಕಟೇಶ್ ಅಯ್ಯರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ತೊಡಕಾಗಿರುವ 3 ಅಂಶಗಳಿವು

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ