AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ 24ಕ್ಕೆ ಮನ್​ ಕೀ ಬಾತ್​; ಸಾರ್ವಜನಿಕರಿಂದ ಅನಿಸಿಕೆ ಆಹ್ವಾನಿಸಿದ ಪ್ರಧಾನಿ ಮೋದಿ

Mann Ki Baat: ಪ್ರಧಾನಿ ನರೇಂದ್ರ ಮೋದಿ ಈ ಬಾರಿ ತಮ್ಮ ಮನ್​ ಕೀ ಬಾತ್​​ನಲ್ಲಿ ಯಾವ ವಿಚಾರವನ್ನು ಮಾತಿಗೆ ಎತ್ತಿಕೊಳ್ಳಬಹುದು ಎಂಬುದು ಕುತೂಹಲ ಹುಟ್ಟಿಸಿದೆ. 

ಅಕ್ಟೋಬರ್​ 24ಕ್ಕೆ ಮನ್​ ಕೀ ಬಾತ್​; ಸಾರ್ವಜನಿಕರಿಂದ ಅನಿಸಿಕೆ ಆಹ್ವಾನಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 16, 2021 | 11:31 PM

Share

ದೆಹಲಿ: ಅಕ್ಟೋಬರ್​ 24ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್​​ನ 82ನೇ ಆವೃತ್ತಿಯಲ್ಲಿ ಮಾತನಾಡಲಿದ್ದಾರೆ. ಈ 82ನೇ ಎಪಿಸೋಡ್​​ನ ಮನ್​ ಕೀ ಬಾತ್​​ಗಾಗಿ ವಿಚಾರಗಳು,  ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳೂ ಈ ಮನ್​ ಕೀ ಬಾತ್​ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇದರಲ್ಲಿ ಅವರು ರಾಜಕೀಯ ಹೊರತಾಗಿ ಬೇರೆ ವಿಶೇಷ ವಿಷಯಗಳ ಬಗ್ಗೆ ಉಲ್ಲೇಖ ಮಾಡುತ್ತಾರೆ. ಕಳೆದ ಮನ್​ ಕೀ ಬಾತ್​​ನಲ್ಲಿ ನದಿಗಳ ಮಹತ್ವ ತಿಳಿಸಿದ್ದರು. ನದಿಗಳ ದಿನದ ನೆನಪು ಮಾಡಿಕೊಟ್ಟಿದ್ದರು. ಹಾಗೇ ಟ್ವೀಟ್ ಮಾಡಿ, ಈ ತಿಂಗಳ ಮನ್​ ಕೀ ಬಾತ್​​ಗಾಗಿ ಅನಿಸಿಕೆ ಹಂಚಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದ್ದಾರೆ. 

ದೇಶದಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ಭರ್ಜರಿಯಾಗಿ ಸಾಗುತ್ತಿದೆ. ಮುಂದಿನ ವಾರ 100 ಕೋಟಿ ಗಡಿಯನ್ನೂ ದಾಟಿ ದಾಖಲೆ ನಿರ್ಮಿಸಲಿದೆ. ಇದರ ಮಧ್ಯೆ ದೇಶದಲ್ಲಿ ಕೊರೊನಾ ಸೋಂಕಿನ ಪ್ರಸರಣವೂ ತುಸು ಕಡಿಮೆಯಾಗಿದ್ದು, ಕೊವಿಡ್​ 19 ಶಿಷ್ಟಾಚಾರಗಳ ಪಾಲನೆಯಲ್ಲೂ ಸಡಿಲತೆ ಕಂಡುಬಂದಿದೆ. ಹೀಗೆ ಸುಮಾರು ವಿಷಯಗಳಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಬಾರಿ ತಮ್ಮ ಮನ್​ ಕೀ ಬಾತ್​​ನಲ್ಲಿ ಯಾವ ವಿಚಾರವನ್ನು ಮಾತಿಗೆ ಎತ್ತಿಕೊಳ್ಳಬಹುದು ಎಂಬುದು ಕುತೂಹಲ ಹುಟ್ಟಿಸಿದೆ.

ಈ ಬಗ್ಗೆ ಪ್ರಧಾನಮಂತ್ರಿ ಕಚೇರಿ ಕೂಡ ಹೇಳಿಕೆ ಬಿಡುಗಡೆ ಮಾಡಿದೆ. ನರೇಂದ್ರ ಮೋದಿಯವರು ಇದೇ ಭಾನುವಾರ ಅಂದರೆ ಅಕ್ಟೋಬರ್​ 24ರಂದು 82ನೇ ಎಪಿಸೋಡ್​​ನ ಮನ್​ ಕೀ ಬಾತ್​ ನಡೆಸಿಕೊಡಲಿದ್ದಾರೆ. ಅದಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರೂ ತಮ್ಮ ಅನಿಸಿಕೆ, ಅಭಿಪ್ರಾಯ, ವಿಚಾರಗಳನ್ನು ನಮೋ ಆ್ಯಪ್​, ಮೈ ಗವ್​ (NaMo App and My Gov)ಮೂಲಕ ಹಂಚಿಕೊಳ್ಳಬಹುದು. ಇಲ್ಲದೆ ಇದ್ದರೆ ತಮ್ಮ ಅನಿಸಿಕೆಯನ್ನು ರೆಕಾರ್ಡ್​ ಮಾಡಿ 1800-11-7800ಕ್ಕೆ ಕಳಿಸಬಹುದು ಎಂದು ಹೇಳಿದೆ.

ಇದನ್ನೂ ಓದಿ: Covid 19 Vaccination Anthem: ಕೊವಿಡ್​ 19 ಲಸಿಕೆ ಗೀತೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ; ಕೈಲಾಶ್​ ಖೇರ್​ ಗಾಯನ

ಐಪಿಎಲ್‌ನಲ್ಲಿ ಮಿಂಚಿದ ವೆಂಕಟೇಶ್ ಅಯ್ಯರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ತೊಡಕಾಗಿರುವ 3 ಅಂಶಗಳಿವು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ