AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ 24ಕ್ಕೆ ಮನ್​ ಕೀ ಬಾತ್​; ಸಾರ್ವಜನಿಕರಿಂದ ಅನಿಸಿಕೆ ಆಹ್ವಾನಿಸಿದ ಪ್ರಧಾನಿ ಮೋದಿ

Mann Ki Baat: ಪ್ರಧಾನಿ ನರೇಂದ್ರ ಮೋದಿ ಈ ಬಾರಿ ತಮ್ಮ ಮನ್​ ಕೀ ಬಾತ್​​ನಲ್ಲಿ ಯಾವ ವಿಚಾರವನ್ನು ಮಾತಿಗೆ ಎತ್ತಿಕೊಳ್ಳಬಹುದು ಎಂಬುದು ಕುತೂಹಲ ಹುಟ್ಟಿಸಿದೆ. 

ಅಕ್ಟೋಬರ್​ 24ಕ್ಕೆ ಮನ್​ ಕೀ ಬಾತ್​; ಸಾರ್ವಜನಿಕರಿಂದ ಅನಿಸಿಕೆ ಆಹ್ವಾನಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 16, 2021 | 11:31 PM

Share

ದೆಹಲಿ: ಅಕ್ಟೋಬರ್​ 24ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್​​ನ 82ನೇ ಆವೃತ್ತಿಯಲ್ಲಿ ಮಾತನಾಡಲಿದ್ದಾರೆ. ಈ 82ನೇ ಎಪಿಸೋಡ್​​ನ ಮನ್​ ಕೀ ಬಾತ್​​ಗಾಗಿ ವಿಚಾರಗಳು,  ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳೂ ಈ ಮನ್​ ಕೀ ಬಾತ್​ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇದರಲ್ಲಿ ಅವರು ರಾಜಕೀಯ ಹೊರತಾಗಿ ಬೇರೆ ವಿಶೇಷ ವಿಷಯಗಳ ಬಗ್ಗೆ ಉಲ್ಲೇಖ ಮಾಡುತ್ತಾರೆ. ಕಳೆದ ಮನ್​ ಕೀ ಬಾತ್​​ನಲ್ಲಿ ನದಿಗಳ ಮಹತ್ವ ತಿಳಿಸಿದ್ದರು. ನದಿಗಳ ದಿನದ ನೆನಪು ಮಾಡಿಕೊಟ್ಟಿದ್ದರು. ಹಾಗೇ ಟ್ವೀಟ್ ಮಾಡಿ, ಈ ತಿಂಗಳ ಮನ್​ ಕೀ ಬಾತ್​​ಗಾಗಿ ಅನಿಸಿಕೆ ಹಂಚಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದ್ದಾರೆ. 

ದೇಶದಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ಭರ್ಜರಿಯಾಗಿ ಸಾಗುತ್ತಿದೆ. ಮುಂದಿನ ವಾರ 100 ಕೋಟಿ ಗಡಿಯನ್ನೂ ದಾಟಿ ದಾಖಲೆ ನಿರ್ಮಿಸಲಿದೆ. ಇದರ ಮಧ್ಯೆ ದೇಶದಲ್ಲಿ ಕೊರೊನಾ ಸೋಂಕಿನ ಪ್ರಸರಣವೂ ತುಸು ಕಡಿಮೆಯಾಗಿದ್ದು, ಕೊವಿಡ್​ 19 ಶಿಷ್ಟಾಚಾರಗಳ ಪಾಲನೆಯಲ್ಲೂ ಸಡಿಲತೆ ಕಂಡುಬಂದಿದೆ. ಹೀಗೆ ಸುಮಾರು ವಿಷಯಗಳಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಬಾರಿ ತಮ್ಮ ಮನ್​ ಕೀ ಬಾತ್​​ನಲ್ಲಿ ಯಾವ ವಿಚಾರವನ್ನು ಮಾತಿಗೆ ಎತ್ತಿಕೊಳ್ಳಬಹುದು ಎಂಬುದು ಕುತೂಹಲ ಹುಟ್ಟಿಸಿದೆ.

ಈ ಬಗ್ಗೆ ಪ್ರಧಾನಮಂತ್ರಿ ಕಚೇರಿ ಕೂಡ ಹೇಳಿಕೆ ಬಿಡುಗಡೆ ಮಾಡಿದೆ. ನರೇಂದ್ರ ಮೋದಿಯವರು ಇದೇ ಭಾನುವಾರ ಅಂದರೆ ಅಕ್ಟೋಬರ್​ 24ರಂದು 82ನೇ ಎಪಿಸೋಡ್​​ನ ಮನ್​ ಕೀ ಬಾತ್​ ನಡೆಸಿಕೊಡಲಿದ್ದಾರೆ. ಅದಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರೂ ತಮ್ಮ ಅನಿಸಿಕೆ, ಅಭಿಪ್ರಾಯ, ವಿಚಾರಗಳನ್ನು ನಮೋ ಆ್ಯಪ್​, ಮೈ ಗವ್​ (NaMo App and My Gov)ಮೂಲಕ ಹಂಚಿಕೊಳ್ಳಬಹುದು. ಇಲ್ಲದೆ ಇದ್ದರೆ ತಮ್ಮ ಅನಿಸಿಕೆಯನ್ನು ರೆಕಾರ್ಡ್​ ಮಾಡಿ 1800-11-7800ಕ್ಕೆ ಕಳಿಸಬಹುದು ಎಂದು ಹೇಳಿದೆ.

ಇದನ್ನೂ ಓದಿ: Covid 19 Vaccination Anthem: ಕೊವಿಡ್​ 19 ಲಸಿಕೆ ಗೀತೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ; ಕೈಲಾಶ್​ ಖೇರ್​ ಗಾಯನ

ಐಪಿಎಲ್‌ನಲ್ಲಿ ಮಿಂಚಿದ ವೆಂಕಟೇಶ್ ಅಯ್ಯರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ತೊಡಕಾಗಿರುವ 3 ಅಂಶಗಳಿವು

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ