AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿಯ 125ನೇ ಜನ್ಮದಿನದಂದು ಪ್ರಧಾನಿ ಮೋದಿ ಪಶ್ಚಿಮ ಬಂಗಾಳಕ್ಕೆ ಭೇಟಿ ಸಂಭವ

ಜನವರಿ 23ರಂದು ಸುಭಾಷ್ ಚಂದ್ರ ಬೋಸ್​ರ 125ನೇ ಜನ್ಮದಿನ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವ ಸಂಭವವಿದೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬಂದಂತೆ ನೇತಾಜಿಯವರ ಹೆಸರು ಪದೇ ಪದೇ ಪ್ರಸ್ತಾಪವಾಗುತ್ತಿದೆ.

ನೇತಾಜಿಯ 125ನೇ ಜನ್ಮದಿನದಂದು ಪ್ರಧಾನಿ ಮೋದಿ ಪಶ್ಚಿಮ ಬಂಗಾಳಕ್ಕೆ ಭೇಟಿ ಸಂಭವ
ನೇತಾಜಿ ಸುಭಾಷ್ ಚಂದ್ರ ಬೋಸ್ (ಸಂಗ್ರಹ ಚಿತ್ರ)
guruganesh bhat
| Edited By: |

Updated on: Jan 05, 2021 | 1:08 PM

Share

ದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಪ್ರಯುಕ್ತ ಜನವರಿ 23ರಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವ ಸಂಭವವಿದೆ. ನೇತಾಜಿಯವರ ಜನ್ಮದಿನವನ್ನು ಆಚರಿಸಲು ಕಳೆದ ವರ್ಷದ ಡಿಸೆಂಬರ್​ನಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸಿತ್ತು.

ಸುಭಾಷ್ ಚಂದ್ರ ಬೋಸ್ ಅವರು ಸ್ಥಾಪಿಸಿದ್ದ ಆಝಾದ್ ಹಿಂದ್ ಫೌಜ್ ಸಹಯೋಗದ ಈ ಸಮಿತಿಯು ಇತಿಹಾಸಕಾರರು, ಅವರ ಕುಟುಂಬದವರು, ಲೇಖಕರು, ಪರಿಣಿತರನ್ನೊಳಗೊಂಡಿತ್ತು. ಮುಂದಿನ 1 ವರ್ಷಾವಧಿ ನೇತಾಜಿಯವರ ಸ್ಮರಣೆಗೆ ಕೈಗೊಳ್ಳಬಹುದಾದ ಕೆಲಸಗಳನ್ನು ಈ ಸಮಿತಿಯು ಸೂಚಿಸಲಿದೆ.

2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೇತಾಜಿಯವರ ಸಾಧನೆಗಳನ್ನು ಬಿಂಬಿಸುವ ಹಲವು ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಸುಭಾಷ್ ಚಂದ್ರ ಬೋಸ್​​ರಿಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು ಕೆಂಪುಕೋಟೆಯಲ್ಲಿ ಪ್ರತ್ಯೇಕ ಮ್ಯೂಸಿಯಂ ಕಲ್ಪಿಸಿ ಸಾರ್ವಜನಿಕರಿಗೆ ಲಭ್ಯವಾಗಿಸಿದೆ.

ಅಲ್ಲದೇ, ನೇತಾಜಿಯವರ ಸ್ಮರಣಾರ್ಥ ಅಂಡಮಾನ್ ನಿಕೋಬಾರ್​ನ ರೋಸ್,ನೀಲ್ ಮತ್ತು ಹಾವ್ಲಾಕ್ ದ್ವೀಪಗಳಿಗೆ ಅನುಕ್ರಮವಾಗಿ ಸುಭಾಷ್ ಚಂದ್ರ ಬೋಸ್ ದ್ವೀಪ, ಶಹೀದ್ ದ್ವೀಪ ಮತ್ತು ಸ್ವರಾಜ್ ದ್ವೀಪಗಳೆಂದು ಮರು ನಾಮಕರಣ ಮಾಡಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸುಭಾಷ್ ಚಂದ್ರ ಬೋಸ್​ ಅವರು ರಾಜ್ಯದಲ್ಲಿ ಪದೇ ಪದೇ ಪ್ರಸ್ತಾಪಿಸಲ್ಪಡುತ್ತಿದ್ದಾರೆ. ನಿನ್ನೆಯಷ್ಟೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸುಭಾಷ್ ಚಂದ್ರ ಬೋಸ್​ರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.

‘ದೇಶ ಭಕ್ತರ ದಿನ’ವಾಗಿ ನೇತಾಜಿ ಜನ್ಮದಿನ ಆಚರಿಸೋಣ; ಅಂದು ರಾಷ್ಟ್ರೀಯ ರಜಾನೂ ಘೋಷಿಸಿ: ಕೇಂದ್ರಕ್ಕೆ ಮಮತೆಯ ಪತ್ರ!

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್