Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Space Association: ‘ಬಾಹ್ಯಾಕಾಶ ಕ್ಷೇತ್ರಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತದೆ‘-ಪ್ರಧಾನಿ ಮೋದಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಸಾಮರ್ಥ್ಯ ಹೊಂದಿರುವ ಕೆಲವೇಕೆಲವು ರಾಷ್ಟ್ರಗಳಲ್ಲಿ ಭಾರತವೂ ಒಂದು. ನಾವು ಬಾಹ್ಯಾಕಾಶ ತಂತ್ರಜ್ಞಾನದ ಎಲ್ಲ ಅಂಶಗಳನ್ನೂ ಒಳಗೊಂಡಿದ್ದೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

Indian Space Association: ‘ಬಾಹ್ಯಾಕಾಶ ಕ್ಷೇತ್ರಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತದೆ‘-ಪ್ರಧಾನಿ ಮೋದಿ
ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Oct 11, 2021 | 1:21 PM

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಭಾರತೀಯ ಬಾಹ್ಯಾಕಾಶ ಸಂಘ (ISpA)ವನ್ನು ವರ್ಚ್ಯುವಲ್​ ಆಗಿ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಅವರು, ಇನ್ನು ಮುಂದೆ ಸರ್ಕಾರ ಬಾಹ್ಯಾಕಾಶ ಕ್ಷೇತ್ರದ ನಿರ್ವಾಹಕನಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಆದರೆ ಖಂಡಿತವಾಗಿಯೂ ಈ ಕ್ಷೇತ್ರಕ್ಕೆ ನಿರಂತರವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತದೆ ಎಂದು ಹೇಳಿದ್ದಾರೆ. ಹಾಗೇ, ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯಗಳ ಭಾಗವಹಿಸುವಿಕೆಯನ್ನು ಸರಳಗೊಳಿಸಲು ಸರ್ಕಾರ ಇನ್​-ಸ್ಪೇಸ್​​ (IN-SPACe) ರಚಿಸಿದೆ. ಈ ಇನ್​-ಸ್ಪೇಸ್ ಬಾಹ್ಯಾಕಾಶ ಸಂಬಂಧಿತ ಎಲ್ಲ ಕಾರ್ಯಕ್ರಮಗಳಿಗೂ​​  ಏಕ-ಗವಾಕ್ಷಿ ಸ್ವತಂತ್ರ ಏಜೆನ್ಸಿಯಾಗಿ ಕೆಲಸ ಮಾಡುತ್ತದೆ. ಖಾಸಗಿ ವಲಯದ ಯೋಜನೆಗಳನ್ನು ಮತ್ತಷ್ಟು ವೇಗಗೊಳಿಸುತ್ತದೆ ಎಂದು ಹೇಳಿದ್ದಾರೆ.  

ಇಂದು ಸರ್ಕಾರ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಅಧಿಕಾರವನ್ನು ಹಂಚಿಕೊಳ್ಳುತ್ತಿದೆ ಮತ್ತು ಖಾಸಗಿ ವಲಯಕ್ಕೆ ಲಾಂಚ್​ ಪ್ಯಾಡ್​​ಗಳನ್ನು ಒದಗಿಸುತ್ತಿದೆ. ಇಸ್ರೋ ಕೂಡ ತನ್ನಲ್ಲಿರುವ ವ್ಯವಸ್ಥೆಗಳನ್ನು ಖಾಸಗಿ ವಲಯದವರು ಬಳಸಿಕೊಳ್ಳಲು ತೆರೆದಿಡುತ್ತಿದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಬಾಹ್ಯಾಕಾಶ ಕ್ಷೇತ್ರ ರೈತರಿಗೆ, ಮೀನುಗಾರರಿಗೆ ತುಂಬ ಅನುಕೂಲ ಮಾಡಿಕೊಡುತ್ತಿದೆ. ಯಾಕೆಂದರೆ ಹವಾಮಾನ ಮುನ್ಸೂಚನೆ ನೀಡುತ್ತದೆ. ಪ್ರಾಕೃತಿಕ ವಿಕೋಪಗಳ ಮುನ್ಸೂಚನೆಯಲ್ಲೂ ಪ್ರಮುಖ ಪಾತ್ರ ವಹಿಸಿದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

ನಮ್ಮ ನೋಟ, ಗುರಿ ಆತ್ಮ ನಿರ್ಭರ ಭಾರತದತ್ತ ನೆಟ್ಟಿದೆ. ಹೀಗಾಗಿ ದೇಶದಲ್ಲೀಗ ಕ್ರಿಯಾತ್ಮಕ ಸುಧಾರಣೆಗಳು ಆಗುತ್ತಿವೆ. ಆತ್ಮನಿರ್ಭರತೆ ಕೇವಲ ನಮ್ಮ ದೃಷ್ಟಿಯಲ್ಲ, ಭಾರತವನ್ನು ಜಾಗತಿಕ ಉತ್ಪಾದನೆ ಮತ್ತು ಜಾಗತಿಕ ನಾವೀನ್ಯತೆಯ ಕೇಂದ್ರವನ್ನಾಗಿ ಮಾಡುವ ಉತ್ತಮ ಚಿಂತನೆಯಾಗಿದೆ. ಹಾಗೇ, ಸಮಗ್ರ ಯೋಜಿತ ಆರ್ಥಿಕ ಕಾರ್ಯತಂತ್ರವಾಗಿದೆ ಎಂದು ಹೇಳಿದ ನರೇಂದ್ರ ಮೋದಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಸಾಮರ್ಥ್ಯ ಹೊಂದಿರುವ ಕೆಲವೇಕೆಲವು ರಾಷ್ಟ್ರಗಳಲ್ಲಿ ಭಾರತವೂ ಒಂದು. ನಾವು ಬಾಹ್ಯಾಕಾಶ ತಂತ್ರಜ್ಞಾನದ ಉಪಗ್ರಹಗಳು, ಉಡಾವಣಾ ವಾಹಕಗಳ ಅಪ್ಲಿಕೇಶನ್​ಗಳು, ಅಂತರ್​ಗ್ರಹ ಯೋಜನೆಗಳು ಸೇರಿ ಬಹುತೇಕ ಅಂಶಗಳನ್ನು ಒಳಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಘವೆಂಬುದು, ಬಾಹ್ಯಾಕಾಶ ಮತ್ತು ಉಪಗ್ರಹ ಕಂಪನಿಗಳ ಒಂದು ಪ್ರಧಾನ ಉದ್ದಿಮೆಯಾಗಲಿದೆ. ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ಸಾಮೂಹಿಕ ಶಕ್ತಿಯಾಗಲು ಬಯಸುವ ಕಂಪನಿಗಳನ್ನು ಇದು ಒಳ್ಳಗೊಳ್ಳಲಿದೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಇದು ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಸರ್ಕಾರ ಮತ್ತು ಅದರ ಏಜೆನ್ಸಿಗಳನ್ನು ಸೇರಿ, ಎಲ್ಲ ಪಾಲುದಾರರನ್ನೂ ಒಳಗೊಳ್ಳುತ್ತದೆ ಮತ್ತು ರೂಪಿತ ನೀತಿಗಳ ಪರ ವಕಾಲತ್ತು ಕೆಲಸ ಕೈಗೊಳ್ಳುತ್ತದೆ ಎಂದು ತಿಳಿಸಿದೆ.

ಈ ಐಎಸ್​ಪಿಎ ಸಂಸ್ಥಾಪಕ ಸದಸ್ಯರಾಗಿ ಲಾರ್ಸನ್ ಮತ್ತು ಟ್ಯೂಬ್ರೊ, ನೆಲ್ಕೊ (ಟಾಟಾ ಗ್ರೂಪ್), ಒನ್ ವೆಬ್, ಭಾರತಿ ಏರ್‌ಟೆಲ್, ಮ್ಯಾಪ್‌ಮಿಂಡಿಯಾ, ವಾಲ್‌ಚಂದನಗರ್ ಇಂಡಸ್ಟ್ರೀಸ್ ಮತ್ತು ಅನಂತ್ ಟೆಕ್ನಾಲಜಿ ಲಿಮಿಟೆಡ್. ಇತರ ಪ್ರಮುಖ ಸದಸ್ಯರಲ್ಲಿ ಗೋದ್ರೆಜ್, ಹ್ಯೂಸ್ ಇಂಡಿಯಾ, ಅಜಿಸ್ಟಾ-ಬಿಎಸ್‌ಟಿ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್, ಬಿಇಎಲ್, ಸೆಂಟಮ್ ಎಲೆಕ್ಟ್ರಾನಿಕ್ಸ್ ಮತ್ತು ಮ್ಯಾಕ್ಸರ್ ಇಂಡಿಯಾಗಳು ಸೇರ್ಪಡೆಯಾಗಿವೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ‘ಮನೆಯಲ್ಲಿ ಹಣವೇ ಇಲ್ಲದಿರುವಾಗ ಲಾಕ್ ಮಾಡುವ ಅಗತ್ಯವೇನಿತ್ತು?’: ಮಧ್ಯಪ್ರದೇಶದ ಅಧಿಕಾರಿಗೆ ಪತ್ರ ಬರೆದಿಟ್ಟು ಹೋದ ಕಳ್ಳರು

ಎರಡೂ ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೆ ಕೆಲಸ ಇಲ್ಲ: ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ

Published On - 12:54 pm, Mon, 11 October 21

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!