AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನಲ್ಲಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆ; ಅಜಿತ್​ ದೋವಲ್​, ಅಮಿತ್​ ಶಾ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

ಭಾನುವಾರ ತಡರಾತ್ರಿ ಜಮ್ಮು ಏರ್​ಫೋರ್ಸ್​ ಸ್ಟೇಶನ್​​ನಲ್ಲಿ ಅವಳಿ ಸ್ಫೋಟ ಉಂಟಾಗಿತ್ತು. ಅದಾದ ಮೇಲೆ ಒಂದರ ಬೆನ್ನಿಗೆ ಒಂದರಂತೆ ಮೂರು ಡ್ರೋನ್​ಗಳು ಹಾರಾಟ ನಡೆಸಿದ್ದವು.

ಜಮ್ಮುವಿನಲ್ಲಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆ; ಅಜಿತ್​ ದೋವಲ್​, ಅಮಿತ್​ ಶಾ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 29, 2021 | 5:40 PM

Share

ದೆಹಲಿ: ಜಮ್ಮು ಏರ್​ಫೋರ್ಸ್​ ಸ್ಟೇಶನ್​ನಲ್ಲಿ ಅವಳಿ ಸ್ಫೋಟ, ಮೂರುದಿನಗಳಿಂದಲೂ ಹಾರಾಡುತ್ತಿರುವ ಡ್ರೋನ್​​ಗಳು..ಹೀಗೆ ಜಮ್ಮುವಿನಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇಂದು ಸಂಜೆ 4 ಗಂಟೆಯಿಂದ ಸಭೆ ನಡೆದಿದ್ದು, ಡ್ರೋನ್​ ಮೂಲಕ ಐಇಡಿ ದಾಳಿ ಮಾಡಿದ್ದು, ಜಮ್ಮುವಿನಲ್ಲಿನ ಸದ್ಯದ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ 2019ರಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಅಲ್ಲಿನ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿವೆ. ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಪಟ್ಟು ಹಿಡಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಸಲು ಸಜ್ಜಾಗಿದೆ. ಅದರ ಸಂಬಂಧ ಚರ್ಚಿಸಲು ಜೂ.24ರಂದು ಪ್ರಧಾನಿ ಮೋದಿ ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದರು. ಈ ಸಭೆ ಗುರುವಾರ ನಡೆದಿತ್ತು. ಭಾನುವಾರ ಮಧ್ಯರಾತ್ರಿಯಿಂದ ಉಗ್ರರ ಹಾವಳಿ ಹೆಚ್ಚಾಗಿದೆ. ಅಂದರೆ ಭಾರತ ಜಮ್ಮು-ಕಾಶ್ಮೀರದಲ್ಲಿ ತುಸುವೇ ಹೆಜ್ಜೆ ಮುಂದಿಟ್ಟರೂ, ಮತ್ತೆ ಶಾಂತಿಕದಡಲು ದುಷ್ಕರ್ಮಿಗಳು ಮುಂದಾಗುತ್ತಾರೆ.

ಭಾನುವಾರ ತಡರಾತ್ರಿ ಜಮ್ಮು ಏರ್​ಫೋರ್ಸ್​ ಸ್ಟೇಶನ್​​ನಲ್ಲಿ ಅವಳಿ ಸ್ಫೋಟ ಉಂಟಾಗಿತ್ತು. ಅದಾದ ಮೇಲೆ ಒಂದರ ಬೆನ್ನಿಗೆ ಒಂದರಂತೆ ಮೂರು ಡ್ರೋನ್​ಗಳು ಹಾರಾಟ ನಡೆಸಿದ್ದವು. ಜಮ್ಮುವಿನ ಮಾಜಿ ಪೊಲೀಸ್​ ಅಧಿಕಾರಿಯೊಬ್ಬರನ್ನು ಮನೆಗೇ ನುಗ್ಗಿ ಉಗ್ರರು ಹತ್ಯೆಗೈದಿದ್ದಾರೆ. ಕೊವಿಡ್​ 19 ಸಾಂಕ್ರಾಮಿಕ ಶುರುವಾದ ನಂತರ ತುಸು ಕಡಿಮೆಯಾಗಿದ್ದ ಉಗ್ರರ ಹೀನಕೃತ್ಯಗಳು, ಒಳನುಸುಳುವಿಕೆ ಇದೀಗ ಮತ್ತೆ ಶುರುವಾಗಿದೆ. ಹಾಗಾಗಿ ಮೋದಿಯವರು ಭದ್ರತೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಉನ್ನತ ಸಭೆ ಕರೆದಿದ್ದಾರೆ.

ಇದನ್ನೂ ಓದಿ:   ಬಿಜೆಪಿ ನಾಯಕರಿಂದ ಕಾರಿನ ಮೇಲೆ ದಾಳಿ, ನಿರ್ಮಾಣ ಹಂತದಲ್ಲಿರುವ ಶಾಲೆ ಮೇಲೆ ಧ್ವಂಸ: ಮನೀಶ್ ಸಿಸೋಡಿಯಾ ಆರೋಪ

(Prime Minister Narendra Modi Meets Amit Shah, Rajnath Singh and Ajit Doval to discuss about Jammu)

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​