AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನಲ್ಲಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆ; ಅಜಿತ್​ ದೋವಲ್​, ಅಮಿತ್​ ಶಾ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

ಭಾನುವಾರ ತಡರಾತ್ರಿ ಜಮ್ಮು ಏರ್​ಫೋರ್ಸ್​ ಸ್ಟೇಶನ್​​ನಲ್ಲಿ ಅವಳಿ ಸ್ಫೋಟ ಉಂಟಾಗಿತ್ತು. ಅದಾದ ಮೇಲೆ ಒಂದರ ಬೆನ್ನಿಗೆ ಒಂದರಂತೆ ಮೂರು ಡ್ರೋನ್​ಗಳು ಹಾರಾಟ ನಡೆಸಿದ್ದವು.

ಜಮ್ಮುವಿನಲ್ಲಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆ; ಅಜಿತ್​ ದೋವಲ್​, ಅಮಿತ್​ ಶಾ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 29, 2021 | 5:40 PM

Share

ದೆಹಲಿ: ಜಮ್ಮು ಏರ್​ಫೋರ್ಸ್​ ಸ್ಟೇಶನ್​ನಲ್ಲಿ ಅವಳಿ ಸ್ಫೋಟ, ಮೂರುದಿನಗಳಿಂದಲೂ ಹಾರಾಡುತ್ತಿರುವ ಡ್ರೋನ್​​ಗಳು..ಹೀಗೆ ಜಮ್ಮುವಿನಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇಂದು ಸಂಜೆ 4 ಗಂಟೆಯಿಂದ ಸಭೆ ನಡೆದಿದ್ದು, ಡ್ರೋನ್​ ಮೂಲಕ ಐಇಡಿ ದಾಳಿ ಮಾಡಿದ್ದು, ಜಮ್ಮುವಿನಲ್ಲಿನ ಸದ್ಯದ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ 2019ರಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಅಲ್ಲಿನ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿವೆ. ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಪಟ್ಟು ಹಿಡಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಸಲು ಸಜ್ಜಾಗಿದೆ. ಅದರ ಸಂಬಂಧ ಚರ್ಚಿಸಲು ಜೂ.24ರಂದು ಪ್ರಧಾನಿ ಮೋದಿ ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದರು. ಈ ಸಭೆ ಗುರುವಾರ ನಡೆದಿತ್ತು. ಭಾನುವಾರ ಮಧ್ಯರಾತ್ರಿಯಿಂದ ಉಗ್ರರ ಹಾವಳಿ ಹೆಚ್ಚಾಗಿದೆ. ಅಂದರೆ ಭಾರತ ಜಮ್ಮು-ಕಾಶ್ಮೀರದಲ್ಲಿ ತುಸುವೇ ಹೆಜ್ಜೆ ಮುಂದಿಟ್ಟರೂ, ಮತ್ತೆ ಶಾಂತಿಕದಡಲು ದುಷ್ಕರ್ಮಿಗಳು ಮುಂದಾಗುತ್ತಾರೆ.

ಭಾನುವಾರ ತಡರಾತ್ರಿ ಜಮ್ಮು ಏರ್​ಫೋರ್ಸ್​ ಸ್ಟೇಶನ್​​ನಲ್ಲಿ ಅವಳಿ ಸ್ಫೋಟ ಉಂಟಾಗಿತ್ತು. ಅದಾದ ಮೇಲೆ ಒಂದರ ಬೆನ್ನಿಗೆ ಒಂದರಂತೆ ಮೂರು ಡ್ರೋನ್​ಗಳು ಹಾರಾಟ ನಡೆಸಿದ್ದವು. ಜಮ್ಮುವಿನ ಮಾಜಿ ಪೊಲೀಸ್​ ಅಧಿಕಾರಿಯೊಬ್ಬರನ್ನು ಮನೆಗೇ ನುಗ್ಗಿ ಉಗ್ರರು ಹತ್ಯೆಗೈದಿದ್ದಾರೆ. ಕೊವಿಡ್​ 19 ಸಾಂಕ್ರಾಮಿಕ ಶುರುವಾದ ನಂತರ ತುಸು ಕಡಿಮೆಯಾಗಿದ್ದ ಉಗ್ರರ ಹೀನಕೃತ್ಯಗಳು, ಒಳನುಸುಳುವಿಕೆ ಇದೀಗ ಮತ್ತೆ ಶುರುವಾಗಿದೆ. ಹಾಗಾಗಿ ಮೋದಿಯವರು ಭದ್ರತೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಉನ್ನತ ಸಭೆ ಕರೆದಿದ್ದಾರೆ.

ಇದನ್ನೂ ಓದಿ:   ಬಿಜೆಪಿ ನಾಯಕರಿಂದ ಕಾರಿನ ಮೇಲೆ ದಾಳಿ, ನಿರ್ಮಾಣ ಹಂತದಲ್ಲಿರುವ ಶಾಲೆ ಮೇಲೆ ಧ್ವಂಸ: ಮನೀಶ್ ಸಿಸೋಡಿಯಾ ಆರೋಪ

(Prime Minister Narendra Modi Meets Amit Shah, Rajnath Singh and Ajit Doval to discuss about Jammu)

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ