AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನಲ್ಲಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆ; ಅಜಿತ್​ ದೋವಲ್​, ಅಮಿತ್​ ಶಾ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

ಭಾನುವಾರ ತಡರಾತ್ರಿ ಜಮ್ಮು ಏರ್​ಫೋರ್ಸ್​ ಸ್ಟೇಶನ್​​ನಲ್ಲಿ ಅವಳಿ ಸ್ಫೋಟ ಉಂಟಾಗಿತ್ತು. ಅದಾದ ಮೇಲೆ ಒಂದರ ಬೆನ್ನಿಗೆ ಒಂದರಂತೆ ಮೂರು ಡ್ರೋನ್​ಗಳು ಹಾರಾಟ ನಡೆಸಿದ್ದವು.

ಜಮ್ಮುವಿನಲ್ಲಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆ; ಅಜಿತ್​ ದೋವಲ್​, ಅಮಿತ್​ ಶಾ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Lakshmi Hegde

Updated on: Jun 29, 2021 | 5:40 PM

ದೆಹಲಿ: ಜಮ್ಮು ಏರ್​ಫೋರ್ಸ್​ ಸ್ಟೇಶನ್​ನಲ್ಲಿ ಅವಳಿ ಸ್ಫೋಟ, ಮೂರುದಿನಗಳಿಂದಲೂ ಹಾರಾಡುತ್ತಿರುವ ಡ್ರೋನ್​​ಗಳು..ಹೀಗೆ ಜಮ್ಮುವಿನಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇಂದು ಸಂಜೆ 4 ಗಂಟೆಯಿಂದ ಸಭೆ ನಡೆದಿದ್ದು, ಡ್ರೋನ್​ ಮೂಲಕ ಐಇಡಿ ದಾಳಿ ಮಾಡಿದ್ದು, ಜಮ್ಮುವಿನಲ್ಲಿನ ಸದ್ಯದ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ 2019ರಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಅಲ್ಲಿನ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿವೆ. ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಪಟ್ಟು ಹಿಡಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಸಲು ಸಜ್ಜಾಗಿದೆ. ಅದರ ಸಂಬಂಧ ಚರ್ಚಿಸಲು ಜೂ.24ರಂದು ಪ್ರಧಾನಿ ಮೋದಿ ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದರು. ಈ ಸಭೆ ಗುರುವಾರ ನಡೆದಿತ್ತು. ಭಾನುವಾರ ಮಧ್ಯರಾತ್ರಿಯಿಂದ ಉಗ್ರರ ಹಾವಳಿ ಹೆಚ್ಚಾಗಿದೆ. ಅಂದರೆ ಭಾರತ ಜಮ್ಮು-ಕಾಶ್ಮೀರದಲ್ಲಿ ತುಸುವೇ ಹೆಜ್ಜೆ ಮುಂದಿಟ್ಟರೂ, ಮತ್ತೆ ಶಾಂತಿಕದಡಲು ದುಷ್ಕರ್ಮಿಗಳು ಮುಂದಾಗುತ್ತಾರೆ.

ಭಾನುವಾರ ತಡರಾತ್ರಿ ಜಮ್ಮು ಏರ್​ಫೋರ್ಸ್​ ಸ್ಟೇಶನ್​​ನಲ್ಲಿ ಅವಳಿ ಸ್ಫೋಟ ಉಂಟಾಗಿತ್ತು. ಅದಾದ ಮೇಲೆ ಒಂದರ ಬೆನ್ನಿಗೆ ಒಂದರಂತೆ ಮೂರು ಡ್ರೋನ್​ಗಳು ಹಾರಾಟ ನಡೆಸಿದ್ದವು. ಜಮ್ಮುವಿನ ಮಾಜಿ ಪೊಲೀಸ್​ ಅಧಿಕಾರಿಯೊಬ್ಬರನ್ನು ಮನೆಗೇ ನುಗ್ಗಿ ಉಗ್ರರು ಹತ್ಯೆಗೈದಿದ್ದಾರೆ. ಕೊವಿಡ್​ 19 ಸಾಂಕ್ರಾಮಿಕ ಶುರುವಾದ ನಂತರ ತುಸು ಕಡಿಮೆಯಾಗಿದ್ದ ಉಗ್ರರ ಹೀನಕೃತ್ಯಗಳು, ಒಳನುಸುಳುವಿಕೆ ಇದೀಗ ಮತ್ತೆ ಶುರುವಾಗಿದೆ. ಹಾಗಾಗಿ ಮೋದಿಯವರು ಭದ್ರತೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಉನ್ನತ ಸಭೆ ಕರೆದಿದ್ದಾರೆ.

ಇದನ್ನೂ ಓದಿ:   ಬಿಜೆಪಿ ನಾಯಕರಿಂದ ಕಾರಿನ ಮೇಲೆ ದಾಳಿ, ನಿರ್ಮಾಣ ಹಂತದಲ್ಲಿರುವ ಶಾಲೆ ಮೇಲೆ ಧ್ವಂಸ: ಮನೀಶ್ ಸಿಸೋಡಿಯಾ ಆರೋಪ

(Prime Minister Narendra Modi Meets Amit Shah, Rajnath Singh and Ajit Doval to discuss about Jammu)

Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ