AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗ್ಲಾಸ್ಗೋದಿಂದ ಭಾರತಕ್ಕೆ ಹೊರಟ ಪ್ರಧಾನಿ ಮೋದಿಗೆ ಸಾಂಪ್ರದಾಯಿಕ ವಿದಾಯ; ತಾವೂ ಡ್ರಮ್​ ಬಾರಿಸಿ, ಮಕ್ಕಳೊಂದಿಗೆ ಖುಷಿಪಟ್ಟ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಭಾರತಕ್ಕೆ ವಾಪಸಾಗಲೆಂದು ಗ್ಲಾಸ್ಗೋದಿಂದ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಂತೆ ಲಯಬದ್ಧವಾದ ಡೋಲು ವಾದನ, ಉತ್ಸಾಹ ಭರಿತ ಘೋಷಣೆಗಳಿಂದ ಅವರನ್ನು ಅಲ್ಲಿ ಸ್ವಾಗತಿಸಲಾಯಿತು.

Video: ಗ್ಲಾಸ್ಗೋದಿಂದ ಭಾರತಕ್ಕೆ ಹೊರಟ ಪ್ರಧಾನಿ ಮೋದಿಗೆ ಸಾಂಪ್ರದಾಯಿಕ ವಿದಾಯ; ತಾವೂ ಡ್ರಮ್​ ಬಾರಿಸಿ, ಮಕ್ಕಳೊಂದಿಗೆ ಖುಷಿಪಟ್ಟ ಮೋದಿ
ಯುಕೆಯಿಂದ ಹೊರಡುವ ಮೊದಲು ಭಾರತೀಯ ಸಮುದಾಯದೊಂದಿಗೆ ಮಾತನಾಡಿದ ಪ್ರಧಾನಿ ಮೋದಿ
TV9 Web
| Edited By: |

Updated on: Nov 03, 2021 | 8:58 AM

Share

ಗ್ಲಾಸ್ಗೋ: ಕೋಪ್ 26 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸ್ಕಾಟ್ಲೆಂಡ್​​ನ ಗ್ಲಾಸ್ಗೋಕ್ಕೆ ತೆರಳಿರುವ  ಪ್ರಧಾನಿ ನರೇಂದ್ರ ಮೋದಿ ನಿನ್ನೆ ಅಲ್ಲಿಂದ ಹೊರಟಿದ್ದಾರೆ. ಅವರು ಅಲ್ಲಿಂದ ಹೊರಟ ಹೊತ್ತಲ್ಲಿ ಅಲ್ಲಿರುವ ಭಾರತೀಯ ಸಮುದಾಯದವರು ಡ್ರಮ್​ ಬಾರಿಸಿ ಬೀಳ್ಕೊಡುಗೆ ಮಾಡಿದ್ದಾರೆ. ಅವರೊಂದಿಗೆ ಪ್ರಧಾನಿ ಮೋದಿ ಕೂಡ ಡ್ರಮ್​ ಬಾರಿಸಿದ್ದಾರೆ. ಹಾಗೇ, ಭಾರತೀಯ ಸಮುದಾಯದವರೊಟ್ಟಿಗೆ ಸಂವಾದವನ್ನೂ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಭಾರತಕ್ಕೆ ವಾಪಸಾಗಲೆಂದು ಗ್ಲಾಸ್ಗೋದಿಂದ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಂತೆ ಲಯಬದ್ಧವಾದ ಡೋಲು ವಾದನ, ಉತ್ಸಾಹ ಭರಿತ ಘೋಷಣೆಗಳಿಂದ ಅವರನ್ನು ಅಲ್ಲಿ ಸ್ವಾಗತಿಸಲಾಯಿತು. ಅಲ್ಲಿ ಭರ್ಜರಿ ಜನರು ನೆರೆದಿದ್ದರು. ಭಾರತೀಯ ಸಂಪ್ರದಾಯದ ಉಡುಗೆ, ಪೇಟಗಳನ್ನು ಧರಿಸಿ ಬಂದಿದ್ದರು. ಪ್ರಧಾನಿ ಮೋದಿಯವರೊಟ್ಟಿಗೆ ಮಾತುಕತೆ ನಡೆಸಿದ ಅವರು, ಸಾಂಪ್ರದಾಯಿಕವಾಗಿಯೇ ನರೇಂದ್ರ ಮೋದಿಯವರಿಗೆ ವಿದಾಯ ಹೇಳಿದರು.

ಅಲ್ಲಿ ನೆರೆದಿದ್ದವರ ಕೈ ಕುಲುಕಿದ ಪ್ರಧಾನಿ ಮೋದಿ ಭಾರತೀಯರಿಗೆ ಶುಭಕೋರಿದರು. ತಾವೂ ಕೂಡ ಮೂರ್ನಾಲ್ಕು ಬಾರಿ ಡ್ರಮ್​ ಬಾರಿಸಿ ಸಂತೋಷ ವ್ಯಕ್ತಪಡಿಸಿದರು. ಪುಟ್ಟ ಮಕ್ಕಳ ತಲೆಯ ಮೇಲೆ ಪ್ರೀತಿಯಿಂದ ತಟ್ಟಿದರು..ಅವರ ಕೈಯನ್ನೂ ಹಿಡಿದುಕೊಂಡರು.

ರೋಮ್​​ನ ಜಿ20 ಶೃಂಗಸಭೆ ಬಳಿಕ ಯುಕೆಗೆ ತೆರಳಿದ್ದ ಪ್ರಧಾನಿ ಮೋದಿ ವಿಶ್ವಸಂಸ್ಥೆ ಹವಾಮಾನ ಬದಲಾವಣೆ ಶೃಂಗಸಭೆ(ಯುಎನ್​ ಕೋಪ್​ 26)ಯಲ್ಲಿ  ಪಾಲ್ಗೊಂಡರು.  ಅಲ್ಲಿ ಅವರು ಭಾರತದ 5 ಬದ್ಧತೆಗಳನ್ನ ಘೋಷಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ 2070ರ ಹೊತ್ತಿಗೆ ಭಾರತವನ್ನು ಸಂಪೂರ್ಣವಾಗಿ ಇಂಗಾಲ ಮುಕ್ತ ದೇಶವನ್ನಾಗಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Puneeth Rajkumar: ಇಂದಿನಿಂದ ಅಪ್ಪು ದರ್ಶನಕ್ಕೆ ಅವಕಾಶ; ನವೆಂಬರ್ 16ಕ್ಕೆ ನಡೆಯಲಿದೆ ಪುನೀತ್ ನಮನ ಕಾರ್ಯಕ್ರಮ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ