AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌದ್ಧ ಧಾರ್ಮಿಕ ಸಾಹಿತ್ಯ ಸಂರಕ್ಷಣೆಗೆ ಗ್ರಂಥಾಲಯ ರಚನೆ: ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವ

‘ಗೌತಮ ಬುದ್ಧ ಮತ್ತು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಸಾಹಿತ್ಯ ಕೃತಿಗಳನ್ನು ವಿವಿಧ ದೇಶಗಳಿಂದ ಡಿಜಿಟಲ್ ಪ್ರತಿಗಳ ರೂಪದಲ್ಲಿ ಸಂಗ್ರಹಿಸಲಾಗುವುದು. ನಂತರ ಅವುಗಳನ್ನು ಅಗತ್ಯವಿರುವ ಭಾಷೆಗಳಿಗೆ ಅನುವಾದ ಮಾಡಿ, ವಿದ್ವಾಂಸರಿಗೆ ಹಾಗೂ ಬೌದ್ಧ ಭಿಕ್ಕುಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು’.

ಬೌದ್ಧ ಧಾರ್ಮಿಕ ಸಾಹಿತ್ಯ ಸಂರಕ್ಷಣೆಗೆ ಗ್ರಂಥಾಲಯ ರಚನೆ: ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವ
ಭಾರತ-ಜಪಾನ್ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ganapathi bhat

Updated on:Apr 06, 2022 | 11:25 PM

ದೆಹಲಿ: ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಕೃತಿಗಳನ್ನು ಸಂಗ್ರಹಿಸಿ, ಗ್ರಂಥಾಲಯದಲ್ಲಿ ಕಾಪಾಡುವ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರಸ್ತಾಪಿಸಿದರು. ವರ್ಚುವಲ್ ಕಾನ್ಫರೆನ್ಸ್​ ಮೂಲಕ ನಡೆದ ಭಾರತ-ಜಪಾನ್ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂತಹ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಭಾರತ ಉತ್ಸುಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಗೌತಮ ಬುದ್ಧ ಮತ್ತು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಸಾಹಿತ್ಯ ಕೃತಿಗಳನ್ನು ವಿವಿಧ ದೇಶಗಳಿಂದ ಡಿಜಿಟಲ್ ಪ್ರತಿಗಳ ರೂಪದಲ್ಲಿ ಸಂಗ್ರಹಿಸಲಾಗುವುದು. ನಂತರ ಅವುಗಳನ್ನು ಅಗತ್ಯವಿರುವ ಭಾಷೆಗಳಿಗೆ ಅನುವಾದ ಮಾಡಿ, ವಿದ್ವಾಂಸರಿಗೆ ಹಾಗೂ ಬೌದ್ಧ ಭಿಕ್ಕುಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು ಎಂದು ಯೋಜನೆಯ ಉದ್ದೇಶ ತಿಳಿಸಿದರು.

ಆಧುನಿಕ ಜಗತ್ತಿನ ಸವಾಲುಗಳನ್ನು ಎದುರಿಸಲು ಬುದ್ಧನ ಸಂದೇಶಗಳು ನಮಗೆ ಹೇಗೆ ಮಾರ್ಗದರ್ಶನ ನೀಡಬಹುದು ಎಂಬ ಬಗ್ಗೆ ಸಂಶೋಧನಾ ನಿಯೋಗವು ಪರಿಶೀಲನೆ ನಡೆಸಬೇಕು ಎಂದು ಮೋದಿ ಅಭಿಪ್ರಾಯಪಟ್ಟರು. ಉಭಯ ದೇಶಗಳ ಪ್ರಾಚೀನ ಧಾರ್ಮಿಕ ಮತ್ತು ಆದ್ಯಾತ್ಮಿಕ ವಿಚಾರಗಳು ಮತ್ತು ಅವುಗಳನ್ನು ಮುನ್ನಡೆಸುವ ಬಗ್ಗೆ ಮಾತುಕತೆ ನಡೆಯಿತು.

ಮಾತು ಮತ್ತು ಚರ್ಚೆಗಳನ್ನು ಒಳಗೊಂಡಿದ್ದ ಸಂವಾದ ಕಾರ್ಯಕ್ರಮವು ತನ್ನ ಆಶಯಕ್ಕೆ ಬದ್ಧವಾಗಿ ನಡೆಯಿತು. ಭಾರತ-ಜಪಾನ್ ಸಂವಾದ ಕಾರ್ಯಕ್ರಮಕ್ಕೆ ಸದಾ ಬೆಂಬಲ ನೀಡುವ ಜಪಾನ್​ಗೆ ಪ್ರಧಾನಿ ಮೋದಿ ಧನ್ಯವಾದಗಳನ್ನು ತಿಳಿಸಿದರು. ಈ ಸಂವಾದವು ಒಳಿತಿನ ಆಶಯಗಳು, ಏಕತೆ, ಸಹಾನುಭೂತಿಯನ್ನು ವಿಶ್ವದೆಲ್ಲಡೆ ಪಸರಿಸಬೇಕು ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತ-ಜಪಾನ್ ಮೊದಲ ಸಂವಾದ ಕಾರ್ಯಕ್ರಮ 2015ರಲ್ಲಿ ಬೌದ್ಧಗಯಾದಲ್ಲಿ ನಡೆದಿತ್ತು. ವಿದ್ವಾಂಸರು, ಧಾರ್ಮಿಕ ಮುಖಂಡರು, ರಾಜಕೀಯ ವ್ಯಕ್ತಿಗಳು, ಅಧ್ಯಯನಕಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು (ಡಿ.21) ನಡೆದದ್ದು 6ನೇ ಸಂವಾದ ಕಾರ್ಯಕ್ರಮವಾಗಿದೆ.

ಐತಿಹಾಸಿಕ ಗುರುದ್ವಾರ ರಕಬ್ ಗಂಜ್ ಸಾಹಿಬ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Published On - 2:54 pm, Mon, 21 December 20

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!
ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!