AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌದ್ಧ ಧಾರ್ಮಿಕ ಸಾಹಿತ್ಯ ಸಂರಕ್ಷಣೆಗೆ ಗ್ರಂಥಾಲಯ ರಚನೆ: ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವ

‘ಗೌತಮ ಬುದ್ಧ ಮತ್ತು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಸಾಹಿತ್ಯ ಕೃತಿಗಳನ್ನು ವಿವಿಧ ದೇಶಗಳಿಂದ ಡಿಜಿಟಲ್ ಪ್ರತಿಗಳ ರೂಪದಲ್ಲಿ ಸಂಗ್ರಹಿಸಲಾಗುವುದು. ನಂತರ ಅವುಗಳನ್ನು ಅಗತ್ಯವಿರುವ ಭಾಷೆಗಳಿಗೆ ಅನುವಾದ ಮಾಡಿ, ವಿದ್ವಾಂಸರಿಗೆ ಹಾಗೂ ಬೌದ್ಧ ಭಿಕ್ಕುಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು’.

ಬೌದ್ಧ ಧಾರ್ಮಿಕ ಸಾಹಿತ್ಯ ಸಂರಕ್ಷಣೆಗೆ ಗ್ರಂಥಾಲಯ ರಚನೆ: ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವ
ಭಾರತ-ಜಪಾನ್ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Apr 06, 2022 | 11:25 PM

Share

ದೆಹಲಿ: ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಕೃತಿಗಳನ್ನು ಸಂಗ್ರಹಿಸಿ, ಗ್ರಂಥಾಲಯದಲ್ಲಿ ಕಾಪಾಡುವ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರಸ್ತಾಪಿಸಿದರು. ವರ್ಚುವಲ್ ಕಾನ್ಫರೆನ್ಸ್​ ಮೂಲಕ ನಡೆದ ಭಾರತ-ಜಪಾನ್ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂತಹ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಭಾರತ ಉತ್ಸುಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಗೌತಮ ಬುದ್ಧ ಮತ್ತು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಸಾಹಿತ್ಯ ಕೃತಿಗಳನ್ನು ವಿವಿಧ ದೇಶಗಳಿಂದ ಡಿಜಿಟಲ್ ಪ್ರತಿಗಳ ರೂಪದಲ್ಲಿ ಸಂಗ್ರಹಿಸಲಾಗುವುದು. ನಂತರ ಅವುಗಳನ್ನು ಅಗತ್ಯವಿರುವ ಭಾಷೆಗಳಿಗೆ ಅನುವಾದ ಮಾಡಿ, ವಿದ್ವಾಂಸರಿಗೆ ಹಾಗೂ ಬೌದ್ಧ ಭಿಕ್ಕುಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು ಎಂದು ಯೋಜನೆಯ ಉದ್ದೇಶ ತಿಳಿಸಿದರು.

ಆಧುನಿಕ ಜಗತ್ತಿನ ಸವಾಲುಗಳನ್ನು ಎದುರಿಸಲು ಬುದ್ಧನ ಸಂದೇಶಗಳು ನಮಗೆ ಹೇಗೆ ಮಾರ್ಗದರ್ಶನ ನೀಡಬಹುದು ಎಂಬ ಬಗ್ಗೆ ಸಂಶೋಧನಾ ನಿಯೋಗವು ಪರಿಶೀಲನೆ ನಡೆಸಬೇಕು ಎಂದು ಮೋದಿ ಅಭಿಪ್ರಾಯಪಟ್ಟರು. ಉಭಯ ದೇಶಗಳ ಪ್ರಾಚೀನ ಧಾರ್ಮಿಕ ಮತ್ತು ಆದ್ಯಾತ್ಮಿಕ ವಿಚಾರಗಳು ಮತ್ತು ಅವುಗಳನ್ನು ಮುನ್ನಡೆಸುವ ಬಗ್ಗೆ ಮಾತುಕತೆ ನಡೆಯಿತು.

ಮಾತು ಮತ್ತು ಚರ್ಚೆಗಳನ್ನು ಒಳಗೊಂಡಿದ್ದ ಸಂವಾದ ಕಾರ್ಯಕ್ರಮವು ತನ್ನ ಆಶಯಕ್ಕೆ ಬದ್ಧವಾಗಿ ನಡೆಯಿತು. ಭಾರತ-ಜಪಾನ್ ಸಂವಾದ ಕಾರ್ಯಕ್ರಮಕ್ಕೆ ಸದಾ ಬೆಂಬಲ ನೀಡುವ ಜಪಾನ್​ಗೆ ಪ್ರಧಾನಿ ಮೋದಿ ಧನ್ಯವಾದಗಳನ್ನು ತಿಳಿಸಿದರು. ಈ ಸಂವಾದವು ಒಳಿತಿನ ಆಶಯಗಳು, ಏಕತೆ, ಸಹಾನುಭೂತಿಯನ್ನು ವಿಶ್ವದೆಲ್ಲಡೆ ಪಸರಿಸಬೇಕು ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತ-ಜಪಾನ್ ಮೊದಲ ಸಂವಾದ ಕಾರ್ಯಕ್ರಮ 2015ರಲ್ಲಿ ಬೌದ್ಧಗಯಾದಲ್ಲಿ ನಡೆದಿತ್ತು. ವಿದ್ವಾಂಸರು, ಧಾರ್ಮಿಕ ಮುಖಂಡರು, ರಾಜಕೀಯ ವ್ಯಕ್ತಿಗಳು, ಅಧ್ಯಯನಕಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು (ಡಿ.21) ನಡೆದದ್ದು 6ನೇ ಸಂವಾದ ಕಾರ್ಯಕ್ರಮವಾಗಿದೆ.

ಐತಿಹಾಸಿಕ ಗುರುದ್ವಾರ ರಕಬ್ ಗಂಜ್ ಸಾಹಿಬ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Published On - 2:54 pm, Mon, 21 December 20

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ