AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ತಲ್ಲಣ: ಸಶಕ್ತ ಗುಂಪುಗಳ ಕಾರ್ಯ ನಿರ್ವಹಣೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪರಿಶೀಲಿಸಿದ ಪ್ರಧಾನಿ ಮೋದಿ

ಸರಬರಾಜು ಕೊಂಡಿ ಮತ್ತು ಸಾರಿಗೆ ನಿರ್ವಹಣೆ ವ್ಯವಸ್ಥೆಯ ಸಮಸ್ಯೆಗಳಿಗೆ ನೆರವಾಗುವ ಸಶಕ್ತ ಗುಂಪು ಸಾಂಕ್ರಾಮಿಕ ಪಿಡುಗನ್ನು ನಿಯಂತ್ರಿಸುವ ಕ್ರಮಗಳಿಗೆ ಸಂಬಂಧಪಟ್ಟಂತೆ ಹಲವಾರು ಸಲಹೆಗಳ ಬಗ್ಗೆ ಪ್ರಾತ್ಯಕ್ಷಿತೆ ನೀಡಿತು.

ಕೊವಿಡ್ ತಲ್ಲಣ: ಸಶಕ್ತ ಗುಂಪುಗಳ ಕಾರ್ಯ ನಿರ್ವಹಣೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪರಿಶೀಲಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:May 04, 2021 | 4:54 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರದಂದು ಬೇರೆ ಬೇರೆ ಸಶಕ್ತ ಗುಂಪುಗಳ ಕಾರ್ಯ ನಿರ್ವಹಣೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪರಿಶೀಲನೆ ನಡೆಸಿದರು. ಆರ್ಥಿಕ ಮತ್ತು ಕಲ್ಯಾಣ ಮೇಲಿನ ಸಶಕ್ತ ಗುಂಪು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ವಿಸ್ತರಿಸುವುದು, ಒಂದು ದೇಶ ಒಂದು ರೇಷನ್ ಕಾರ್ಡ್ ಯೋಜನೆ ಅನೇಕರಿಗೆ ನೆರವಾಗಿರುವ ವಿಷಯವನ್ನು ಒಳಗೊಂಡಂತೆ ಜನರಿಗೆ ಸಹಾಯ ಒದಗಿಸುವ ದಿಶೆಯಲ್ಲಿ ತೆಗೆದುಕೊಂಡ ನಾನಾ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿತೆ ನೀಡಿತು. ಮುಂಚೂಣಿಯ ಆರೋಗ್ಯ ಕಾರ್ಯಕರ್ತರಿಗೆ ವಿಮೆ ಯೋಜನೆಯನ್ನು ಆರು ತಿಂಗಳ ಅವಧಿಗೆ ವಿಸ್ತರಿಸಿರುವುದನ್ನು ಪ್ರಧಾನ ಮಂತ್ರಿಗಳ ಗಮನಕ್ಕೆ ತರಲಾಯಿತು. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಸಮನ್ವಯತೆಯೊಂದಿಗೆ ಆಹಾರ ಧಾನ್ಯಗಳು ಬಡ ಕುಟುಂಬಗಳಿಗೆ ಉಚಿತವಾಗಿ ಯಾವುದೇ ಸಮಸ್ಯೆಗಳಿಲ್ಲದೆ ವಿತರಣೆಯಾಗುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಪ್ರಧಾನಿ ಮಂತ್ರಿ ನಿರ್ದೇಶನ ನೀಡಿದರು, ಹಾಗೆಯೇ ಮೃತ ವ್ಯಕ್ತಿಯ ಕುಟುಂಬಕ್ಕೆ ಪೆಂಡಿಂಗ್​ನಲ್ಲಿರುವ ವಿಮಾ ಮೊತ್ತ ತ್ವರಿತವಾಗಿ ತಲುಪಲು ಕ್ರಮಗಳನ್ನು ತೆಗೆದುಕೊಂಡರೆ ಆಯಾ ಕುಟುಬದ ಸದಸ್ಯರಿಗೆ ಸಕಾಲದಲ್ಲಿ ಹಣಕಾಸಿನ ನೆರವು ಸಿಕ್ಕಂತಾಗುತ್ತದೆ ಎಂದು ಪ್ರಧಾನಿಗಳು ಸಭೆಯಲ್ಲಿ ಹೇಳಿದರು.

ಸರಬರಾಜು ಕೊಂಡಿ ಮತ್ತು ಸಾರಿಗೆ ನಿರ್ವಹಣೆ ವ್ಯವಸ್ಥೆಯ ಸಮಸ್ಯೆಗಳಿಗೆ ನೆರವಾಗುವ ಸಶಕ್ತ ಗುಂಪು ಸಾಂಕ್ರಾಮಿಕ ಪಿಡುಗನ್ನು ನಿಯಂತ್ರಿಸುವ ಕ್ರಮಗಳಿಗೆ ಸಂಬಂಧಪಟ್ಟಂತೆ ಹಲವಾರು ಸಲಹೆಗಳ ಬಗ್ಗೆ ಪ್ರಾತ್ಯಕ್ಷಿತೆ ನೀಡಿತು. ಸರಬರಾಜು ಸರಪಣಿ ಗೆ ಅಡಚಣೆಯಾಗದ ಹಾಗೆ ಆಹಾರ ಪದಾರ್ಥಗಳ ಸಾಗಾಣಿಕೆ ಜಾರಿಯಲ್ಲಿಡಲು ಸಮಗ್ರವಾದ ಯೋಜನೆ ರೂಪಿಸಿಕೊಳ್ಳುವಂತೆ ಪ್ರಧಾನಿ ಮೋದಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಖಾಸಗಿ ವಲಯ, ಎನ್​​ಜಿಒ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸುವ ಸಶಕ್ತ ಗುಂಪು ಸರ್ಕಾರವು ಖಾಸಗಿ ವಲಯ, ಎನ್​​ಜಿಒ ಮತ್ತು ಅಂತರರಾಷ್ಟ್ರೀಯ ಸಂಸ್ಥೆ ಸಹಭಾಗಿತ್ವದಲ್ಲಿ ಹೇಗೆ ಕೆಲಸ ಮಾಡುತ್ತದೆ ಎನ್ನುವುದನ್ನು ಪ್ರಧಾನ ಮಂತ್ರಿಗಳಿಗೆ ವಿವರಿಸಿತು. ನಾಗರಿಕ ಸಮುದಾಯಗಳ ಸ್ವಯಂ ಸೇವಕರನ್ನು ಪರಿಣಿತಿಯ ಅಗತ್ಯವಿರದ ಕೆಲಸಗಳಿಗೆ ಬಳಸಿಕೊಂಡು ಆರೋಗ್ಯ ವಲಯದ ಮೇಲಿರುವ ಒತ್ತಡವನ್ನು ಕಡಿಮೆ ಮಾಡಲು ಅಧಿಕಾರಿಗಳಿಗೆ ಪ್ರಧಾನಿ ಹೇಳಿದರು. ಸೋಂಕಿತರು, ಅವರ ಸಂಬಂಧಿಕರು ಮತ್ತು ಅರೋಗ್ಯ ಕಾರ್ಯಕರ್ತರ ನಡುವೆ ಸಂಪರ್ಕದ ಲೈನುಗಳನ್ನು ಸ್ಥಾಪಿಸಲು ಎನ್​ಜಿಒಗಳ ಸಹಾಯ ಪಡೆದುಕೊಳ್ಳುವ ಕುರಿತು ಚರ್ಚೆ ನಡೆಯಿತು. ಹೋಮ್ ಕ್ವಾರಂಟೈನ್​ನಲ್ಲಿರುವ ರೋಗಿಗಳೊಂದಿಗೆ ಸಂಪರ್ಕ ಜಾರಿಯಲ್ಲಿಡುವುದಕ್ಕೆ ಕಾಲ್​ ಸೆಂಟರ್​ಗಳನ್ನು ನಿಭಾಯಿಸಲು ಮಾಜಿ ಯೋಧರ ಮನವೊಲಿಸಬೇಕು ಎನ್ನುವುದನ್ನು ಸಹ ಚರ್ಚಿಸಲಾಯಿತು.

ಇದನ್ನೂ ಓದಿ: PM Modi Announcement: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ, ಲಾಕ್​ಡೌನ್ ಎಂಬುದು ರಾಜ್ಯಗಳ ಕೊನೆ ಆಯ್ಕೆಯಾಗಲಿ: ಮೋದಿ

Published On - 12:58 am, Sat, 1 May 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ