AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನ್‌ಯಾನ್ ಮಿಷನ್‌ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ ಮೋದಿ

Gaganyaan Mission: ಇತ್ತೀಚಿನ ಚಂದ್ರಯಾನ-3 ಮತ್ತು ಆದಿತ್ಯ L1 ಮಿಷನ್‌ಗಳು ಸೇರಿದಂತೆ ಭಾರತೀಯ ಬಾಹ್ಯಾಕಾಶ ಉಪಕ್ರಮಗಳ ಯಶಸ್ಸಿನ ನಂತರ 2035 ರ ವೇಳೆಗೆ 'ಭಾರತೀಯ ಅಂತರಿಕ್ಷಾ ನಿಲ್ದಾಣ' (ಭಾರತೀಯ ಬಾಹ್ಯಾಕಾಶ ನಿಲ್ದಾಣ) ಸ್ಥಾಪನೆ ಸೇರಿದಂತೆ 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನಿಗೆ ಕಳುಹಿಸುವುದು- ಹೀಗೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನಿಟ್ಟುಕೊಳ್ಳಬೇಕು ಎಂದು ಮೋದಿ ಹೇಳಿದ್ದಾರೆ.

ಗಗನ್‌ಯಾನ್ ಮಿಷನ್‌ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Oct 17, 2023 | 4:45 PM

Share

ದೆಹಲಿ ಅಕ್ಟೋಬರ್ 17: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಭಾರತದ ಗಗನ್‌ಯಾನ್ ಮಿಷನ್‌ನ (Gaganyaan Mission)  ಪ್ರಗತಿಯನ್ನು ನಿರ್ಣಯಿಸಲು ಮತ್ತು ಭಾರತದ ಬಾಹ್ಯಾಕಾಶ ಪರಿಶೋಧನಾ ಪ್ರಯತ್ನಗಳನ್ನು ಪರಿಶೀಲಿಸಲು ಇಂದು (ಮಂಗಳವಾರ)ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಾಹ್ಯಾಕಾಶ ಇಲಾಖೆಯು ಗಗನ್​​ಯಾನ್ ಮಿಷನ್‌ನ ಸಮಗ್ರ ಅವಲೋಕನವನ್ನು ಪ್ರಸ್ತುತಪಡಿಸಿದೆ. ಇವು ಇದುವರೆಗೆ ಅಭಿವೃದ್ಧಿಪಡಿಸಿದ ಉಡಾವಣಾ ವಾಹನಗಳು ಮತ್ತು ಸಿಸ್ಟಮ್ ಅರ್ಹತೆಯಂತಹ ವಿವಿಧ ತಂತ್ರಜ್ಞಾನಗಳನ್ನು ಒಳಗೊಂಡಿದೆ. ಮಾನವ ರೇಟೆಡ್ ಲಾಂಚ್ ವೆಹಿಕಲ್ (HLVM3) ನ 3 ಸಿಬ್ಬಂದಿರಹಿತ ಕಾರ್ಯಾಚರಣೆಗಳು ಸೇರಿದಂತೆ ಸುಮಾರು 20 ಪ್ರಮುಖ ಪರೀಕ್ಷೆಗಳನ್ನು ಯೋಜಿಸಲಾಗಿದೆ. ಕ್ರೂ ಎಸ್ಕೇಪ್ ಸಿಸ್ಟಮ್ ಟೆಸ್ಟ್ ವೆಹಿಕಲ್‌ನ ಮೊದಲ ಪ್ರದರ್ಶನ ಹಾರಾಟವನ್ನು ಅಕ್ಟೋಬರ್ 21 ರಂದು ನಿಗದಿಪಡಿಸಲಾಗಿದೆ. ಸಭೆಯು ಮಿಷನ್‌ನ ಸನ್ನದ್ಧತೆಯನ್ನು ಪರಿಶೀಲಿಸಿದ್ದು ,2025 ರಲ್ಲಿ ಅದರ ಉಡಾವಣೆಯನ್ನು ದೃಢೀಕರಿಸಿತು.

ಇತ್ತೀಚಿನ ಚಂದ್ರಯಾನ-3 ಮತ್ತು ಆದಿತ್ಯ L1 ಮಿಷನ್‌ಗಳು ಸೇರಿದಂತೆ ಭಾರತೀಯ ಬಾಹ್ಯಾಕಾಶ ಉಪಕ್ರಮಗಳ ಯಶಸ್ಸಿನ ನಂತರ 2035 ರ ವೇಳೆಗೆ ‘ಭಾರತೀಯ ಅಂತರಿಕ್ಷಾ ನಿಲ್ದಾಣ’ (ಭಾರತೀಯ ಬಾಹ್ಯಾಕಾಶ ನಿಲ್ದಾಣ) ಸ್ಥಾಪನೆ ಸೇರಿದಂತೆ 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನಿಗೆ ಕಳುಹಿಸುವುದು- ಹೀಗೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನಿಟ್ಟುಕೊಳ್ಳಬೇಕು ಎಂದು ಮೋದಿ ಹೇಳಿದ್ದಾರೆ. ಈ ಕನಸನ್ನು ನನಸು ಮಾಡಲು ಬಾಹ್ಯಾಕಾಶ ಇಲಾಖೆಯು ಚಂದ್ರನ ಅನ್ವೇಷಣೆಗಾಗಿ ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸುತ್ತದೆ.

ಇದನ್ನೂ ಓದಿ: Gaganyaan: ಅಕ್ಟೋಬರ್ 21ಕ್ಕೆ ಗಗನಯಾನ ಮಿಷನ್‌ ಸಿಬ್ಬಂದಿ ಮಾಡ್ಯೂಲ್‌ನ ಮೊದಲ ಹಾರಾಟ ಪರೀಕ್ಷೆ: ಇಸ್ರೋ

ಇದು ಚಂದ್ರಯಾನ ಕಾರ್ಯಾಚರಣೆಗಳ ಸರಣಿ, ಮುಂದಿನ ಪೀಳಿಗೆಯ ಉಡಾವಣಾ ವಾಹನದ (NGLV) ಅಭಿವೃದ್ಧಿ, ಹೊಸ ಉಡಾವಣಾ ಪ್ಯಾಡ್‌ನ ನಿರ್ಮಾಣ, ಮಾನವ ಕೇಂದ್ರಿತ ಪ್ರಯೋಗಾಲಯಗಳು ಮತ್ತು ಸಂಬಂಧಿತ ತಂತ್ರಜ್ಞಾನಗಳನ್ನು ಒಳಗೊಂಡಿರುತ್ತದೆ.

ವೀನಸ್ ಆರ್ಬಿಟರ್ ಮಿಷನ್ ಮತ್ತು ಮಾರ್ಸ್ ಲ್ಯಾಂಡರ್ ಅನ್ನು ಒಳಗೊಂಡಿರುವ ಅಂತರಗ್ರಹ ಕಾರ್ಯಾಚರಣೆಗಳ ಕಡೆಗೆ ಕೆಲಸ ಮಾಡಲು ಭಾರತೀಯ ವಿಜ್ಞಾನಿಗಳಿಗೆ ಪ್ರಧಾನಿ ಕರೆ ನೀಡಿದ್ದಾರೆ.

ಭಾರತದ ಸಾಮರ್ಥ್ಯಗಳಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಬಾಹ್ಯಾಕಾಶ ಪರಿಶೋಧನೆಯಲ್ಲಿ ಹೊಸ ಮಟ್ಟಕ್ಕೇರುತ್ತದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Tue, 17 October 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!