AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Election 2021| ಅಸ್ಸಾಂ ಜನರಿಗೆ ಬೇಕಿರುವುದು ಶಾಂತಿ.. ಹಾಗಾಗಿ ಅವರ ಆದ್ಯತೆ ಎನ್​ಡಿಎ ಒಕ್ಕೂಟಕ್ಕೆ: ಪ್ರಧಾನಿ ಮೋದಿ

ಅಸ್ಸಾಂ ಒಪ್ಪಂದವನ್ನು ಅನುಷ್ಠಾನಕ್ಕೆ ತರಲು ಕೇಂದ್ರ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದೆ. ಆ ನಿಟ್ಟಿನಲ್ಲಿ ಇದ್ದ ಹಲವು ಸಮಸ್ಯೆಗಳನ್ನು ನಿವಾರಿಸಲಾಗಿದೆ. ಉಳಿದವುಗಳನ್ನೂ ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ನರೇಂದ್ರ ಮೋದಿ ಹೇಳಿದರು.

Assam Election 2021| ಅಸ್ಸಾಂ ಜನರಿಗೆ ಬೇಕಿರುವುದು ಶಾಂತಿ.. ಹಾಗಾಗಿ ಅವರ ಆದ್ಯತೆ ಎನ್​ಡಿಎ ಒಕ್ಕೂಟಕ್ಕೆ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on: Apr 03, 2021 | 4:15 PM

Share

ಅಸ್ಸಾಂ ಜನರು ಅಭಿವೃದ್ಧಿ, ಶಾಂತಿ, ಐಕ್ಯತೆ, ಸ್ಥಿರತೆಯನ್ನು ಬಯಸುತ್ತಿದ್ದಾರೆ. ಅವರಿಗೆ ಹಿಂಸೆ ಬೇಕಾಗಿಲ್ಲ. ಹೀಗಾಗಿ ಅವರು ಖಂಡಿತ ಎನ್​ಡಿಎ ಒಕ್ಕೂಟದ ಸರ್ಕಾರವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂದು ತಮುಲ್​​ಪುರದಲ್ಲಿ ಚನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಮೋದಿ, ಬಿಜೆಪಿ ಸರ್ಕಾರ ಯಾವುದೇ ತಾರತಮ್ಯ ಇಲ್ಲದೆ, ಪ್ರತಿಯೊಬ್ಬರಿಗಾಗಿ ಕೆಲಸ ಮಾಡುತ್ತಿದೆ. ಆದರೆ ಕೆಲವರು ಮತಕ್ಕಾಗಿ ದೇಶವನ್ನು ಒಡೆಯುತ್ತಿದ್ದಾರೆ. ದುರದೃಷ್ಟವೆಂದರೆ ಅದನ್ನೇ ಜಾತ್ಯತೀತತೆ ಎಂದೂ ಕರೆಯಲಾಗುತ್ತದೆ. ಬಿಜೆಪಿಗೆ ಕೋಮುವಾದಿ ಪಕ್ಷ ಎಂಬ ಹಣೆಪಟ್ಟಿ ಸಿಕ್ಕಿದೆ. ಈ ಜಾತ್ಯತೀತತೆ, ಕೋಮುವಾದಗಳೆಂಬ ಆಟ ದೇಶಕ್ಕೆ ಮಾರಕವಾಗುತ್ತಿದೆ ಎಂದು ಹೇಳಿದರು.

ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮತ ಹಾಕುತ್ತಿರುವವರಿಗೆ ಕಿವಿ ಮಾತೊಂದನ್ನು ಹೇಳಿದರು. ಈ ಬಾರಿ ಭಾರತ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದೆ. ಈ ಹೊತ್ತಲ್ಲಿ ನೀವು ಚಲಾಯಿಸುವ ಮತ, 100ನೇ ವರ್ಷದ ಸ್ವಾತಂತ್ರ್ಯೋತ್ಸವದ ವೇಳೆ ಅಸ್ಸಾಂನ ಅಭಿವೃದ್ಧಿಯನ್ನು ನಿರ್ಧಿಸುತ್ತದೆ. ಬಿಜೆಪಿಯ ರೆಸಲ್ಯೂಶನ್​ ಪತ್ರದಲ್ಲಿ ಅಸ್ಸಾಂ ಅಭಿವೃದ್ಧಿಗೆ ಸ್ಪಷ್ಟವಾದ ಮಾರ್ಗಸೂಚಿ ಇದೆ ಎಂದು ಮೋದಿ ಹೇಳಿದರು.

ಅಸ್ಸಾಂ ಒಪ್ಪಂದವನ್ನು ಅನುಷ್ಠಾನಕ್ಕೆ ತರಲು ಕೇಂದ್ರ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದೆ. ಆ ನಿಟ್ಟಿನಲ್ಲಿ ಇದ್ದ ಹಲವು ಸಮಸ್ಯೆಗಳನ್ನು ನಿವಾರಿಸಲಾಗಿದೆ. ಉಳಿದವುಗಳನ್ನೂ ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಹೇಳಿದ ಮೋದಿ, ಕಾಂಗ್ರೆಸ್​ನ ಮೈತ್ರಿ ಪಕ್ಷವಾದ ಎಐಯುಡಿಎಫ್​ ಸಂಸ್ಥಾಪಕ ಮತ್ತು ಸಂಸದ ಬದ್ರುದ್ದೀನ್​ ಅಜ್ಮಲ್ ಪುತ್ರ, ಅಬ್ದುರ್​ ರಹೀಂ ಮಾತಿಗೆ ಖಡಕ್​ ತಿರುಗೇಟು ನೀಡಿದರು. ಶುಕ್ರವಾರ ಮಾತನಾಡಿದ್ದ ಅಬ್ದುರ್​ ರಹೀಮ್​, ಈ ಬಾರಿ ಅಸ್ಸಾಂನಲ್ಲಿ ದಾಡಿ, ಲುಂಗಿ, ಟೋಪಿವಾಲಾಗಳು ಸರ್ಕಾರ ರಚನೆ ಮಾಡಲಿದ್ದಾರೆ ಎಂದು ಹೇಳಿದರು. ಇಂದು ಅದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಧಾನಿ, ಅಬ್ದುರ್​, ಅಸ್ಸಾಂ ಜನರಿಗೆ ಬಹುದೊಡ್ಡ ಅವಮಾನ ಮಾಡಿದ್ದಾರೆ. ಅಸ್ಸಾಂನ ಗೌರವ, ಘನತೆಗೆ ಅವಮಾನ ಮಾಡಿದ್ದನ್ನು ನಾನು ಸಹಿಸುವುದಿಲ್ಲ. ಈ ಧೋರಣೆಗೆ ಅಸ್ಸಾಮಿಗರು ಖಂಡಿತ ಕಟು ತಿರುಗೇಟು ನೀಡುತ್ತಾರೆ ಎಂದು ಹೇಳಿದರು. ಹಾಗೇ, ಅಸ್ಸಾಂನ ಉಗ್ರರಿಗೆ ಬಂದು ಶರಣಾಗುವಂತೆ ಕರೆ ಕೊಟ್ಟರು. ನೀವೂ ಮುಖ್ಯವಾಹಿನಿಗೆ ಬನ್ನಿ, ಆತ್ಮ ನಿರ್ಭರ ಅಸ್ಸಾಂ ನಿರ್ಮಾಣಕ್ಕಾಗಿ ದುಡಿಯಿರಿ ಎಂದರು.

ಇದನ್ನೂ ಓದಿ: Tamil Nadu Election 2021: ತಮಿಳುನಾಡಿನಲ್ಲಿ ಅಮಿತ್​ ಶಾ ಪ್ರಚಾರ; ಅಭಿವೃದ್ಧಿ ನಮ್ಮಿಂದ ಮಾತ್ರ ಸಾಧ್ಯವೆಂದ ಗೃಹ ಸಚಿವ

IPL 2021: ಡೆಲ್ಲಿ ಕ್ಯಾಪಿಟಲ್ಸ್​ಗೆ ಆಘಾತ! ಕೊರೊನಾಗೆ ತುತ್ತಾದ ಅಕ್ಷರ್​ ಪಟೇಲ್​.. ಆತಂಕದಲ್ಲಿ ಧವನ್, ಪಂತ್

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ