AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಆದ ಗಾಯವನ್ನೆಂದೂ ಭಾರತ ಮರೆಯದು: ಸಂವಿಧಾನ ದಿನದಂದು ಮುಂಬೈ ದಾಳಿ ನೆನಪಿಸಿಕೊಂಡ ಪ್ರಧಾನಿ

2008ರ ಈ ದಿನ ಮುಂಬೈ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸರು, ಯೋಧರು, ದೇಶ-ವಿದೇಶದ ನಾಗರಿಕರು ಮೃತಪಟ್ಟಿದ್ದರು. ಅವರಿಗೆ ನಾನಿಂದು ಗೌರವ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು.

ಅಂದು ಆದ ಗಾಯವನ್ನೆಂದೂ ಭಾರತ ಮರೆಯದು: ಸಂವಿಧಾನ ದಿನದಂದು ಮುಂಬೈ ದಾಳಿ ನೆನಪಿಸಿಕೊಂಡ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ
Lakshmi Hegde
| Edited By: |

Updated on:Nov 26, 2020 | 4:24 PM

Share

ದೆಹಲಿ: 2008ರ ಈ ದಿನ ಮುಂಬೈ ಮೇಲೆ ಪಾಕಿಸ್ತಾನದ ಉಗ್ರರು ನಡೆಸಿದ ದಾಳಿಯನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸಂವಿಧಾನ ದಿನದ ನಿಮಿತ್ತ ಗುಜರಾತ್​ನ ಕೇವಾಡಿಯಾದಲ್ಲಿ ಆಯೋಜಿಸಿರುವ ಎರಡು ದಿನಗಳ ಸ್ಟೀಕರ್​ಗಳ ಸಮಾವೇಶವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, 2008ರ ಈ ದಿನ ಮುಂಬೈ ಮೇಲೆ ಪಾಕಿಸ್ತಾನದ ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸರು, ಯೋಧರು, ದೇಶ-ವಿದೇಶದ ನಾಗರಿಕರು ಮೃತರಾಗಿದ್ದಾರೆ. ಅವರಿಗೆ ನಾನಿಂದು ಗೌರವ ಸಲ್ಲಿಸುತ್ತೇನೆ ಎಂದರು.

ಆ ಗಾಯವನ್ನು ಭಾರತ ಎಂದಿಗೂ ಮರೆಯುವುದಿಲ್ಲ. ನಾವಿಂದು ಹೊಸ ನೀತಿ-ಯೋಜನೆಗಳೊಂದಿಗೆ ಉಗ್ರರ ವಿರುದ್ಧ ಹೋರಾಡುತ್ತಿದ್ದೇವೆ. ಉಗ್ರರ ವಿರುದ್ಧ ಹೋರಾಡುತ್ತಿರುವ ಭದ್ರತಾ ಪಡೆಗಳಿಗೆ ನಾನು ತಲೆಬಾಗಿ ನಮಿಸುತ್ತೇನೆ ಎಂದು ಹೇಳಿದರು.

ನಮ್ಮ ಸಂವಿಧಾನವು ಹಲವು ವೈಶಿಷ್ಟ್ಯಗಳಿಂದ ಕೂಡಿದೆ. ಅದರಲ್ಲೂ ಕರ್ತವ್ಯಗಳಿಗೆ ಇರುವ ಪ್ರಾಮುಖ್ಯತೆ ವಿಶೇಷವಾದದ್ದು. ಗಾಂಧೀಜಿಯವರು ಕರ್ತವ್ಯಗಳಿಗೆ ಜಾಸ್ತಿ ಒತ್ತು ಕಕೊಟ್ಟಿದ್ದರು. ಹಕ್ಕು ಮತ್ತು ಕರ್ತವ್ಯಗಳು ಒಂದಕ್ಕೊಂದು ಹೇಗೆ ತಳುಕು ಹಾಕಿಕೊಂಡಿವೆ ಎಂಬುದನ್ನು ಸೂಕ್ಷ್ಮವಾಗಿ ತಿಳಿಸಿದ್ದರು. ಯಾರು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತಾರ, .ಅವರ ಹಕ್ಕುಗಳು ತನ್ನಿಂದ ತಾನೇ ಸಂರಕ್ಷಿಸಲ್ಪಡುತ್ತವೆ ಎಂಬುದು ಗಾಂಧೀಜಿಯವರ ಅಭಿಪ್ರಾಯವಾಗಿತ್ತು ಎಂದು ಮೋದಿ ತಿಳಿಸಿದರು.

ತುರ್ತು ಪರಿಸ್ಥಿತಿ ನೆನಪಿಸಿಕೊಂಡ ಪ್ರಧಾನಿ ಸಂವಿಧಾನದ ಪ್ರಮುಖ ಮೂರು ಭಾಗಗಳಾದ ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗದ ಪಾತ್ರಗಳನ್ನು ಸಂವಿಧಾನದಲ್ಲಿಯೇ ಸವಿಸ್ತಾರವಾಗಿ ವಿವರಿಸಲಾಗಿದೆ. ಅಧಿಕಾರ ಪ್ರತ್ಯೇಕತೆಯ ಘನತೆಯನ್ನು ಕುಗ್ಗಿಸುವ ಪ್ರಯತ್ನಗಳು 70ರ ದಶಕದಲ್ಲಿ ನಡೆದಿರುವುದನ್ನು ನಾವು ನೋಡಿದ್ದೇವೆ. ಆದರೆ ಸಂವಿಧಾನದಿಂದ ಈ ದೇಶ ಎಲ್ಲದಕ್ಕೂ ಉತ್ತರ ಕಂಡುಕೊಂಡಿದೆ ಎಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ನೆನಪಿಸಿಕೊಂಡರು. ಹಾಗೇ ದೇಶದ ಪ್ರತಿ ವ್ಯಕ್ತಿಯೂ ಸಂವಿಧಾನವನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬೇಕು ಎಂದರು.

ನಾವು, ಭಾರತದ ಜನರು ಈ ಸಂವಿಧಾನವನ್ನು ನಮಗೆ ನಾವೇ ಸಮರ್ಪಿಸಿಕೊಂಡಿದ್ದೇವೆ. ಆದ್ದರಿಂದ, ಇದರ ಅಡಿಯಲ್ಲಿ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರ, ಕಾನೂನುಗಳು ಪ್ರತಿಯೊಬ್ಬ ನಾಗರಿಕನಿಗೂ ನೇರ ಸಂಪರ್ಕ ಹೊಂದಿದೆ ಎಂದು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಬಲಪಡಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.

Published On - 3:23 pm, Thu, 26 November 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ