AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಆದ ಗಾಯವನ್ನೆಂದೂ ಭಾರತ ಮರೆಯದು: ಸಂವಿಧಾನ ದಿನದಂದು ಮುಂಬೈ ದಾಳಿ ನೆನಪಿಸಿಕೊಂಡ ಪ್ರಧಾನಿ

2008ರ ಈ ದಿನ ಮುಂಬೈ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸರು, ಯೋಧರು, ದೇಶ-ವಿದೇಶದ ನಾಗರಿಕರು ಮೃತಪಟ್ಟಿದ್ದರು. ಅವರಿಗೆ ನಾನಿಂದು ಗೌರವ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು.

ಅಂದು ಆದ ಗಾಯವನ್ನೆಂದೂ ಭಾರತ ಮರೆಯದು: ಸಂವಿಧಾನ ದಿನದಂದು ಮುಂಬೈ ದಾಳಿ ನೆನಪಿಸಿಕೊಂಡ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 26, 2020 | 4:24 PM

Share

ದೆಹಲಿ: 2008ರ ಈ ದಿನ ಮುಂಬೈ ಮೇಲೆ ಪಾಕಿಸ್ತಾನದ ಉಗ್ರರು ನಡೆಸಿದ ದಾಳಿಯನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸಂವಿಧಾನ ದಿನದ ನಿಮಿತ್ತ ಗುಜರಾತ್​ನ ಕೇವಾಡಿಯಾದಲ್ಲಿ ಆಯೋಜಿಸಿರುವ ಎರಡು ದಿನಗಳ ಸ್ಟೀಕರ್​ಗಳ ಸಮಾವೇಶವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, 2008ರ ಈ ದಿನ ಮುಂಬೈ ಮೇಲೆ ಪಾಕಿಸ್ತಾನದ ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸರು, ಯೋಧರು, ದೇಶ-ವಿದೇಶದ ನಾಗರಿಕರು ಮೃತರಾಗಿದ್ದಾರೆ. ಅವರಿಗೆ ನಾನಿಂದು ಗೌರವ ಸಲ್ಲಿಸುತ್ತೇನೆ ಎಂದರು.

ಆ ಗಾಯವನ್ನು ಭಾರತ ಎಂದಿಗೂ ಮರೆಯುವುದಿಲ್ಲ. ನಾವಿಂದು ಹೊಸ ನೀತಿ-ಯೋಜನೆಗಳೊಂದಿಗೆ ಉಗ್ರರ ವಿರುದ್ಧ ಹೋರಾಡುತ್ತಿದ್ದೇವೆ. ಉಗ್ರರ ವಿರುದ್ಧ ಹೋರಾಡುತ್ತಿರುವ ಭದ್ರತಾ ಪಡೆಗಳಿಗೆ ನಾನು ತಲೆಬಾಗಿ ನಮಿಸುತ್ತೇನೆ ಎಂದು ಹೇಳಿದರು.

ನಮ್ಮ ಸಂವಿಧಾನವು ಹಲವು ವೈಶಿಷ್ಟ್ಯಗಳಿಂದ ಕೂಡಿದೆ. ಅದರಲ್ಲೂ ಕರ್ತವ್ಯಗಳಿಗೆ ಇರುವ ಪ್ರಾಮುಖ್ಯತೆ ವಿಶೇಷವಾದದ್ದು. ಗಾಂಧೀಜಿಯವರು ಕರ್ತವ್ಯಗಳಿಗೆ ಜಾಸ್ತಿ ಒತ್ತು ಕಕೊಟ್ಟಿದ್ದರು. ಹಕ್ಕು ಮತ್ತು ಕರ್ತವ್ಯಗಳು ಒಂದಕ್ಕೊಂದು ಹೇಗೆ ತಳುಕು ಹಾಕಿಕೊಂಡಿವೆ ಎಂಬುದನ್ನು ಸೂಕ್ಷ್ಮವಾಗಿ ತಿಳಿಸಿದ್ದರು. ಯಾರು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತಾರ, .ಅವರ ಹಕ್ಕುಗಳು ತನ್ನಿಂದ ತಾನೇ ಸಂರಕ್ಷಿಸಲ್ಪಡುತ್ತವೆ ಎಂಬುದು ಗಾಂಧೀಜಿಯವರ ಅಭಿಪ್ರಾಯವಾಗಿತ್ತು ಎಂದು ಮೋದಿ ತಿಳಿಸಿದರು.

ತುರ್ತು ಪರಿಸ್ಥಿತಿ ನೆನಪಿಸಿಕೊಂಡ ಪ್ರಧಾನಿ ಸಂವಿಧಾನದ ಪ್ರಮುಖ ಮೂರು ಭಾಗಗಳಾದ ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗದ ಪಾತ್ರಗಳನ್ನು ಸಂವಿಧಾನದಲ್ಲಿಯೇ ಸವಿಸ್ತಾರವಾಗಿ ವಿವರಿಸಲಾಗಿದೆ. ಅಧಿಕಾರ ಪ್ರತ್ಯೇಕತೆಯ ಘನತೆಯನ್ನು ಕುಗ್ಗಿಸುವ ಪ್ರಯತ್ನಗಳು 70ರ ದಶಕದಲ್ಲಿ ನಡೆದಿರುವುದನ್ನು ನಾವು ನೋಡಿದ್ದೇವೆ. ಆದರೆ ಸಂವಿಧಾನದಿಂದ ಈ ದೇಶ ಎಲ್ಲದಕ್ಕೂ ಉತ್ತರ ಕಂಡುಕೊಂಡಿದೆ ಎಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ನೆನಪಿಸಿಕೊಂಡರು. ಹಾಗೇ ದೇಶದ ಪ್ರತಿ ವ್ಯಕ್ತಿಯೂ ಸಂವಿಧಾನವನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬೇಕು ಎಂದರು.

ನಾವು, ಭಾರತದ ಜನರು ಈ ಸಂವಿಧಾನವನ್ನು ನಮಗೆ ನಾವೇ ಸಮರ್ಪಿಸಿಕೊಂಡಿದ್ದೇವೆ. ಆದ್ದರಿಂದ, ಇದರ ಅಡಿಯಲ್ಲಿ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರ, ಕಾನೂನುಗಳು ಪ್ರತಿಯೊಬ್ಬ ನಾಗರಿಕನಿಗೂ ನೇರ ಸಂಪರ್ಕ ಹೊಂದಿದೆ ಎಂದು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಬಲಪಡಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.

Published On - 3:23 pm, Thu, 26 November 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!