AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚೆನ್ನೈಗೆ ಹೋಗಿದ್ದ ನರೇಂದ್ರ ಮೋದಿ ಮ್ಯಾಚ್ ನೋಡಿದ್ರಾ? ಸ್ಟೇಡಿಯಂ ಫೋಟೊ ಟ್ವೀಟ್​​​ ಮಾಡಿದ ಪ್ರಧಾನಿ

ಇಂದು ಮೋದಿ ಅವರು ತಮಿಳುನಾಡಿಗೆ ತೆರಳಿದ್ದಾರೆ. ಈ ವೇಳೆ ನಾನಾ ರೀತಿಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.

ಇಂದು ಚೆನ್ನೈಗೆ ಹೋಗಿದ್ದ ನರೇಂದ್ರ ಮೋದಿ ಮ್ಯಾಚ್ ನೋಡಿದ್ರಾ? ಸ್ಟೇಡಿಯಂ ಫೋಟೊ ಟ್ವೀಟ್​​​ ಮಾಡಿದ ಪ್ರಧಾನಿ
ಮೋದಿ ಹಾಕಿರುವ ಚೆನ್ನೈ ಸ್ಟೇಡಿಯಂ
ರಾಜೇಶ್ ದುಗ್ಗುಮನೆ
|

Updated on: Feb 14, 2021 | 8:12 PM

Share

ಪ್ರಧಾನಿ ನರೇಂದ್ರ ಅವರು ಇಂದು ಚೆನ್ನೈಗೆ ಭೇಟಿ ನೀಡಿದ್ದರು. ನಾನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಅಚ್ಚರಿ ಎಂಬಂತೆ, ಭಾರತ-ಇಂಗ್ಲೆಂಡ್​ ಟೆಸ್ಟ್​ ನಡೆಯುತ್ತಿರುವ ಚೆನ್ನೈ ಎಂ.ಎ. ಚಿದಂಬರಂ ಸ್ಟೇಡಿಯಂನ ಫೋಟೊ ಹಾಕಿಕೊಂಡಿದ್ದಾರೆ. ಹಾಗಾದರೆ, ಅವರೇನಾದರೂ ಕ್ರಿಕೆಟ್​ ಮ್ಯಾಚ್​ ನೋಡೋಕೆ ಹೋಗಿದ್ದರಾ? ಇಲ್ಲ. ವಿಮಾನದಲ್ಲಿ ಸಾಗುವಾಗ ತೆಗೆದ ಸ್ಟೇಡಿಯಂ ಚಿತ್ರವನ್ನು ಮೋದಿ ಪೋಸ್ಟ್​ ಮಾಡಿದ್ದಾರೆ ಅಷ್ಟೇ.

ಇಂದು ಮೋದಿ ಅವರು ತಮಿಳುನಾಡಿಗೆ ತೆರಳಿದ್ದಾರೆ. ಈ ವೇಳೆ ನಾನಾ ರೀತಿಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಚೆನ್ನೈಗೆ ತೆರಳುವಾಗ ವಿಮಾನದಿಂದ ಚಿದಂಬರಂ ಸ್ಟೇಡಿಯಂನ ಚಿತ್ರವನ್ನು ಕ್ಲಿಕ್ಕಿಸಿರುವ ಮೋದಿ ಟ್ವಿಟ್ಟರ್​ನಲ್ಲಿ ಹಾಕಿಕೊಂಡಿದ್ದಾರೆ. ಚೆನ್ನೈನಲ್ಲಿ ನಡೆದ ಆಸಕ್ತಿದಾಯಕ ಟೆಸ್ಟ್ ಪಂದ್ಯದ ನೋಟ ಎಂದು ಮೋದಿ ಕ್ರೀಡಾಂಗಣದ ಚಿತ್ರದೊಂದಿಗೆ ಬರೆದಿದ್ದಾರೆ.

ಕಳೆದ ಬಾರಿ ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದರು. ಈ ತಿಂಗಳು ಕ್ರಿಕೆಟ್​ನಿಂದ ನಾವು ಒಳ್ಳೆಯ ಸುದ್ದಿ ಪಡೆದಿದ್ದೇವೆ. ನಮ್ಮ ಕ್ರಿಕೆಟ್ ತಂಡವು ಆರಂಭಿಕ ತೊಂದರೆ ಅನುಭವಿಸಿತ್ತು. ನಂತರ ಉತ್ತಮ ಕಂಬ್ಯಾಕ್​ ಮಾಡಿ ಆಸ್ಟ್ರೇಲಿಯಾದಲ್ಲಿ ಸರಣಿಯನ್ನು ಗೆದ್ದಿತು. ತಂಡದ ಪರಿಶ್ರಮ ಪ್ರೇರೆಪಿಸುವಂತಿದೆ ಎಂದಿದ್ದರು.

ಇದನ್ನೂ ಓದಿ: Rishab Pant: ಆಹಾ ಅದೆಂತಹ ಅದ್ಭುತ ಕ್ಯಾಚ್​!: ಟ್ರೋಲಿಗರಿಗೆ ಉತ್ತರ ನೀಡುತ್ತಲೇ ಇದ್ದಾರೆ ರಿಷಬ್​ ಪಂತ್​

ಎರಡನೇ ಟೆಸ್ಟ್​ನಲ್ಲಿ ಮೊದಲು ಬ್ಯಾಟಿಂಗ್​ ಆಯ್ದುಕೊಂಡ ಟೀಂ ಇಂಡಿಯಾ 329ರನ್​ ಗಳಿಸಿತ್ತು. ಇದನ್ನು ಬೆನ್ನುಹತ್ತಿದ ಇಂಗ್ಲೆಂಡ್​ ಕೇವಲ 161ರನ್​​ಗಳಿಗೆ ಆಲ್​ಔಟ್​ ಆಗಿತ್ತು. ಸದ್ಯ, ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ, 54 ರನ್​ಗಳಿಗೆ ಒಂದು ವಿಕೆಟ್​ ಕಳೆದುಕೊಂಡಿದೆ. ಈ ಮೂಲಕ 249 ರನ್​​ಗಳ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ಓದಿ: PM Modi in Tamil Nadu: ಅರ್ಜುನ್ ಟ್ಯಾಂಕ್ ಸೇನೆಗೆ ಹಸ್ತಾಂತರ; ತಮಿಳುನಾಡು ರೈತರ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

Follow Us
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ