AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚೆನ್ನೈಗೆ ಹೋಗಿದ್ದ ನರೇಂದ್ರ ಮೋದಿ ಮ್ಯಾಚ್ ನೋಡಿದ್ರಾ? ಸ್ಟೇಡಿಯಂ ಫೋಟೊ ಟ್ವೀಟ್​​​ ಮಾಡಿದ ಪ್ರಧಾನಿ

ಇಂದು ಮೋದಿ ಅವರು ತಮಿಳುನಾಡಿಗೆ ತೆರಳಿದ್ದಾರೆ. ಈ ವೇಳೆ ನಾನಾ ರೀತಿಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.

ಇಂದು ಚೆನ್ನೈಗೆ ಹೋಗಿದ್ದ ನರೇಂದ್ರ ಮೋದಿ ಮ್ಯಾಚ್ ನೋಡಿದ್ರಾ? ಸ್ಟೇಡಿಯಂ ಫೋಟೊ ಟ್ವೀಟ್​​​ ಮಾಡಿದ ಪ್ರಧಾನಿ
ಮೋದಿ ಹಾಕಿರುವ ಚೆನ್ನೈ ಸ್ಟೇಡಿಯಂ
ರಾಜೇಶ್ ದುಗ್ಗುಮನೆ
|

Updated on: Feb 14, 2021 | 8:12 PM

Share

ಪ್ರಧಾನಿ ನರೇಂದ್ರ ಅವರು ಇಂದು ಚೆನ್ನೈಗೆ ಭೇಟಿ ನೀಡಿದ್ದರು. ನಾನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಅಚ್ಚರಿ ಎಂಬಂತೆ, ಭಾರತ-ಇಂಗ್ಲೆಂಡ್​ ಟೆಸ್ಟ್​ ನಡೆಯುತ್ತಿರುವ ಚೆನ್ನೈ ಎಂ.ಎ. ಚಿದಂಬರಂ ಸ್ಟೇಡಿಯಂನ ಫೋಟೊ ಹಾಕಿಕೊಂಡಿದ್ದಾರೆ. ಹಾಗಾದರೆ, ಅವರೇನಾದರೂ ಕ್ರಿಕೆಟ್​ ಮ್ಯಾಚ್​ ನೋಡೋಕೆ ಹೋಗಿದ್ದರಾ? ಇಲ್ಲ. ವಿಮಾನದಲ್ಲಿ ಸಾಗುವಾಗ ತೆಗೆದ ಸ್ಟೇಡಿಯಂ ಚಿತ್ರವನ್ನು ಮೋದಿ ಪೋಸ್ಟ್​ ಮಾಡಿದ್ದಾರೆ ಅಷ್ಟೇ.

ಇಂದು ಮೋದಿ ಅವರು ತಮಿಳುನಾಡಿಗೆ ತೆರಳಿದ್ದಾರೆ. ಈ ವೇಳೆ ನಾನಾ ರೀತಿಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಚೆನ್ನೈಗೆ ತೆರಳುವಾಗ ವಿಮಾನದಿಂದ ಚಿದಂಬರಂ ಸ್ಟೇಡಿಯಂನ ಚಿತ್ರವನ್ನು ಕ್ಲಿಕ್ಕಿಸಿರುವ ಮೋದಿ ಟ್ವಿಟ್ಟರ್​ನಲ್ಲಿ ಹಾಕಿಕೊಂಡಿದ್ದಾರೆ. ಚೆನ್ನೈನಲ್ಲಿ ನಡೆದ ಆಸಕ್ತಿದಾಯಕ ಟೆಸ್ಟ್ ಪಂದ್ಯದ ನೋಟ ಎಂದು ಮೋದಿ ಕ್ರೀಡಾಂಗಣದ ಚಿತ್ರದೊಂದಿಗೆ ಬರೆದಿದ್ದಾರೆ.

ಕಳೆದ ಬಾರಿ ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದರು. ಈ ತಿಂಗಳು ಕ್ರಿಕೆಟ್​ನಿಂದ ನಾವು ಒಳ್ಳೆಯ ಸುದ್ದಿ ಪಡೆದಿದ್ದೇವೆ. ನಮ್ಮ ಕ್ರಿಕೆಟ್ ತಂಡವು ಆರಂಭಿಕ ತೊಂದರೆ ಅನುಭವಿಸಿತ್ತು. ನಂತರ ಉತ್ತಮ ಕಂಬ್ಯಾಕ್​ ಮಾಡಿ ಆಸ್ಟ್ರೇಲಿಯಾದಲ್ಲಿ ಸರಣಿಯನ್ನು ಗೆದ್ದಿತು. ತಂಡದ ಪರಿಶ್ರಮ ಪ್ರೇರೆಪಿಸುವಂತಿದೆ ಎಂದಿದ್ದರು.

ಇದನ್ನೂ ಓದಿ: Rishab Pant: ಆಹಾ ಅದೆಂತಹ ಅದ್ಭುತ ಕ್ಯಾಚ್​!: ಟ್ರೋಲಿಗರಿಗೆ ಉತ್ತರ ನೀಡುತ್ತಲೇ ಇದ್ದಾರೆ ರಿಷಬ್​ ಪಂತ್​

ಎರಡನೇ ಟೆಸ್ಟ್​ನಲ್ಲಿ ಮೊದಲು ಬ್ಯಾಟಿಂಗ್​ ಆಯ್ದುಕೊಂಡ ಟೀಂ ಇಂಡಿಯಾ 329ರನ್​ ಗಳಿಸಿತ್ತು. ಇದನ್ನು ಬೆನ್ನುಹತ್ತಿದ ಇಂಗ್ಲೆಂಡ್​ ಕೇವಲ 161ರನ್​​ಗಳಿಗೆ ಆಲ್​ಔಟ್​ ಆಗಿತ್ತು. ಸದ್ಯ, ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ, 54 ರನ್​ಗಳಿಗೆ ಒಂದು ವಿಕೆಟ್​ ಕಳೆದುಕೊಂಡಿದೆ. ಈ ಮೂಲಕ 249 ರನ್​​ಗಳ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ಓದಿ: PM Modi in Tamil Nadu: ಅರ್ಜುನ್ ಟ್ಯಾಂಕ್ ಸೇನೆಗೆ ಹಸ್ತಾಂತರ; ತಮಿಳುನಾಡು ರೈತರ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ