AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚೆನ್ನೈಗೆ ಹೋಗಿದ್ದ ನರೇಂದ್ರ ಮೋದಿ ಮ್ಯಾಚ್ ನೋಡಿದ್ರಾ? ಸ್ಟೇಡಿಯಂ ಫೋಟೊ ಟ್ವೀಟ್​​​ ಮಾಡಿದ ಪ್ರಧಾನಿ

ಇಂದು ಮೋದಿ ಅವರು ತಮಿಳುನಾಡಿಗೆ ತೆರಳಿದ್ದಾರೆ. ಈ ವೇಳೆ ನಾನಾ ರೀತಿಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.

ಇಂದು ಚೆನ್ನೈಗೆ ಹೋಗಿದ್ದ ನರೇಂದ್ರ ಮೋದಿ ಮ್ಯಾಚ್ ನೋಡಿದ್ರಾ? ಸ್ಟೇಡಿಯಂ ಫೋಟೊ ಟ್ವೀಟ್​​​ ಮಾಡಿದ ಪ್ರಧಾನಿ
ಮೋದಿ ಹಾಕಿರುವ ಚೆನ್ನೈ ಸ್ಟೇಡಿಯಂ
ರಾಜೇಶ್ ದುಗ್ಗುಮನೆ
|

Updated on: Feb 14, 2021 | 8:12 PM

Share

ಪ್ರಧಾನಿ ನರೇಂದ್ರ ಅವರು ಇಂದು ಚೆನ್ನೈಗೆ ಭೇಟಿ ನೀಡಿದ್ದರು. ನಾನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಅಚ್ಚರಿ ಎಂಬಂತೆ, ಭಾರತ-ಇಂಗ್ಲೆಂಡ್​ ಟೆಸ್ಟ್​ ನಡೆಯುತ್ತಿರುವ ಚೆನ್ನೈ ಎಂ.ಎ. ಚಿದಂಬರಂ ಸ್ಟೇಡಿಯಂನ ಫೋಟೊ ಹಾಕಿಕೊಂಡಿದ್ದಾರೆ. ಹಾಗಾದರೆ, ಅವರೇನಾದರೂ ಕ್ರಿಕೆಟ್​ ಮ್ಯಾಚ್​ ನೋಡೋಕೆ ಹೋಗಿದ್ದರಾ? ಇಲ್ಲ. ವಿಮಾನದಲ್ಲಿ ಸಾಗುವಾಗ ತೆಗೆದ ಸ್ಟೇಡಿಯಂ ಚಿತ್ರವನ್ನು ಮೋದಿ ಪೋಸ್ಟ್​ ಮಾಡಿದ್ದಾರೆ ಅಷ್ಟೇ.

ಇಂದು ಮೋದಿ ಅವರು ತಮಿಳುನಾಡಿಗೆ ತೆರಳಿದ್ದಾರೆ. ಈ ವೇಳೆ ನಾನಾ ರೀತಿಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಚೆನ್ನೈಗೆ ತೆರಳುವಾಗ ವಿಮಾನದಿಂದ ಚಿದಂಬರಂ ಸ್ಟೇಡಿಯಂನ ಚಿತ್ರವನ್ನು ಕ್ಲಿಕ್ಕಿಸಿರುವ ಮೋದಿ ಟ್ವಿಟ್ಟರ್​ನಲ್ಲಿ ಹಾಕಿಕೊಂಡಿದ್ದಾರೆ. ಚೆನ್ನೈನಲ್ಲಿ ನಡೆದ ಆಸಕ್ತಿದಾಯಕ ಟೆಸ್ಟ್ ಪಂದ್ಯದ ನೋಟ ಎಂದು ಮೋದಿ ಕ್ರೀಡಾಂಗಣದ ಚಿತ್ರದೊಂದಿಗೆ ಬರೆದಿದ್ದಾರೆ.

ಕಳೆದ ಬಾರಿ ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದರು. ಈ ತಿಂಗಳು ಕ್ರಿಕೆಟ್​ನಿಂದ ನಾವು ಒಳ್ಳೆಯ ಸುದ್ದಿ ಪಡೆದಿದ್ದೇವೆ. ನಮ್ಮ ಕ್ರಿಕೆಟ್ ತಂಡವು ಆರಂಭಿಕ ತೊಂದರೆ ಅನುಭವಿಸಿತ್ತು. ನಂತರ ಉತ್ತಮ ಕಂಬ್ಯಾಕ್​ ಮಾಡಿ ಆಸ್ಟ್ರೇಲಿಯಾದಲ್ಲಿ ಸರಣಿಯನ್ನು ಗೆದ್ದಿತು. ತಂಡದ ಪರಿಶ್ರಮ ಪ್ರೇರೆಪಿಸುವಂತಿದೆ ಎಂದಿದ್ದರು.

ಇದನ್ನೂ ಓದಿ: Rishab Pant: ಆಹಾ ಅದೆಂತಹ ಅದ್ಭುತ ಕ್ಯಾಚ್​!: ಟ್ರೋಲಿಗರಿಗೆ ಉತ್ತರ ನೀಡುತ್ತಲೇ ಇದ್ದಾರೆ ರಿಷಬ್​ ಪಂತ್​

ಎರಡನೇ ಟೆಸ್ಟ್​ನಲ್ಲಿ ಮೊದಲು ಬ್ಯಾಟಿಂಗ್​ ಆಯ್ದುಕೊಂಡ ಟೀಂ ಇಂಡಿಯಾ 329ರನ್​ ಗಳಿಸಿತ್ತು. ಇದನ್ನು ಬೆನ್ನುಹತ್ತಿದ ಇಂಗ್ಲೆಂಡ್​ ಕೇವಲ 161ರನ್​​ಗಳಿಗೆ ಆಲ್​ಔಟ್​ ಆಗಿತ್ತು. ಸದ್ಯ, ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ, 54 ರನ್​ಗಳಿಗೆ ಒಂದು ವಿಕೆಟ್​ ಕಳೆದುಕೊಂಡಿದೆ. ಈ ಮೂಲಕ 249 ರನ್​​ಗಳ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ಓದಿ: PM Modi in Tamil Nadu: ಅರ್ಜುನ್ ಟ್ಯಾಂಕ್ ಸೇನೆಗೆ ಹಸ್ತಾಂತರ; ತಮಿಳುನಾಡು ರೈತರ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ