AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮುಖ್ಯ ಅತಿಥಿ

ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿರುವ ಎಎಂಯುನ ಉಪಕುಲಪತಿ ತಾರಿಕ್​ ಮನ್ಸೂರ್, ಅಲಿಗಢ ಮುಸ್ಲಿಂ ವಿಶ್ವ ವಿದ್ಯಾಲಯ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸುತ್ತಿದೆ ಎಂದಿದ್ದಾರೆ.

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮುಖ್ಯ ಅತಿಥಿ
ಪ್ರಧಾನಿ ಮೋದಿ
ರಾಜೇಶ್ ದುಗ್ಗುಮನೆ
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on:Dec 19, 2020 | 10:43 PM

Share

ಅಲಿಗಢ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿರುವ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ. ಅಲಿಗಢ ವಿಶ್ವವಿದ್ಯಾಲಯಕ್ಕೆ ಪ್ರಧಾನಿಯೊಬ್ಬರು ಅತಿಥಿಯಾಗಿ ತೆರಳುತ್ತಿರುವುದು ಐದು ದಶಕಗಳಲ್ಲಿ ಇದೇ ಮೊದಲು.

ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ವಿಶೇಷ ಅಂಚೆ ಸ್ಟಾಂಪ್​ಗಳನ್ನು ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಕೂಡ ವಿಡಿಯೋ ಕಾನ್ಫರೆನ್ಸ್​ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.

ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿರುವ ಎಎಂಯುನ ಉಪಕುಲಪತಿ ತಾರಿಕ್​ ಮನ್ಸೂರ್, ಅಲಿಗಢ ಮುಸ್ಲಿಂ ವಿಶ್ವ ವಿದ್ಯಾಲಯ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸುತ್ತಿದೆ. ಅವರು ನಮ್ಮ ಆಮಂತ್ರಣವನ್ನು ಸ್ವೀಕರಿಸಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಖುಷಿ ಇದೆ ಎಂದಿದ್ದಾರೆ.

ಪ್ರಧಾನಿ ಜವಾಹರ್​ಲಾಲ್​ ನೆಹರು ಎಎಂಯುಗೆ ನಾಲ್ಕು ಬಾರಿ ಭೇಟಿ ನೀಡಿದ್ದರು. 1948,1955,1960,1963 ರಂದು ಅಲಿಗಢ ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. 1964 ಲಾಲ್​ ಬಹದ್ದೂರ್​ ಶಾಸ್ತ್ರಿ ಅಲಿಗಢ ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭೇಟಿ ನೀಡಿದ್ದರು. ಇದಾದ ನಂತರದಲ್ಲಿ ದೇಶದ ಯಾವುದೇ ಪ್ರಧಾನಿ ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಅತಿಥಿಯಾಗಿ ಹೋಗಿಲ್ಲ.

ಹೊಸ ಸಂಸತ್​ ಭವನಕ್ಕೆ ಶಂಕುಸ್ಥಾಪನೆ: ಕನ್ನಡ ನಾಡಿನ ಅನುಭವ ಮಂಟಪ ನೆನೆದ ಪ್ರಧಾನಿ ನರೇಂದ್ರ ಮೋದಿ

Published On - 9:58 pm, Sat, 19 December 20

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್