AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Space Association: ಇಂದು ಭಾರತೀಯ ಬಾಹ್ಯಾಕಾಶ ಸಂಘವನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಭಾರತೀಯ ಬಾಹ್ಯಾಕಾಶ ಸಂಘವೆಂಬುದು, ಬಾಹ್ಯಾಕಾಶ ಮತ್ತು ಉಪಗ್ರಹ ಕಂಪನಿಗಳ ಒಂದು ಪ್ರಧಾನ ಉದ್ದಿಮೆಯಾಗಲಿದೆ. ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ಸಾಮೂಹಿಕ ಶಕ್ತಿಯಾಗಲು ಬಯಸುವ ಕಂಪನಿಗಳನ್ನು ಇದು ಒಳ್ಳಗೊಳ್ಳಲಿದೆ.

Indian Space Association: ಇಂದು ಭಾರತೀಯ ಬಾಹ್ಯಾಕಾಶ ಸಂಘವನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on:Oct 11, 2021 | 9:46 AM

ಪ್ರಧಾನಿ ನರೇಂದ್ರ ಮೋದಿಯವರು ಇಂದು ಭಾರತೀಯ ಬಾಹ್ಯಾಕಾಶ ಸಂಘ (ISpA-Indian Space Association)ವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಉದ್ಘಾಟನೆ ಸಮಾರಂಭ ಬೆಳಗ್ಗೆ 11 ಗಂಟೆಗೆ ವರ್ಚ್ಯುವಲ್​ ಆಗಿ ನಡೆಯಲಿದೆ. ಅದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಬಾಹ್ಯಾಕಾಶ ಉದ್ಯಮದ ಪ್ರತಿನಿಧಿಗಳೊಟ್ಟಿಗೆ ಸಂವಾದ ನಡೆಸುವರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ಅಕ್ಟೋಬರ್​ 11ರಂದು ಬೆಳಗ್ಗೆ 11ಗಂಟೆಗೆ ಭಾರತೀಯ ಬಾಹ್ಯಾಕಾಶ ಸಂಘವನ್ನು ಉದ್ಘಾಟನೆ ಮಾಡಲಿದ್ದೇನೆ. ಈ ಕ್ಷೇತ್ರದ ಪ್ರಮುಖ ಪಾಲುದಾರರೊಂದಿಗೆ ಸಂವಾದ ನಡೆಸಲು ಖಂಡಿತ ಖುಷಿಯಿದೆ ಎಂದಿದ್ದಾರೆ. 

ಭಾರತೀಯ ಬಾಹ್ಯಾಕಾಶ ಸಂಘವೆಂಬುದು, ಬಾಹ್ಯಾಕಾಶ ಮತ್ತು ಉಪಗ್ರಹ ಕಂಪನಿಗಳ ಒಂದು ಪ್ರಧಾನ ಉದ್ದಿಮೆಯಾಗಲಿದೆ. ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ಸಾಮೂಹಿಕ ಶಕ್ತಿಯಾಗಲು ಬಯಸುವ ಕಂಪನಿಗಳನ್ನು ಇದು ಒಳ್ಳಗೊಳ್ಳಲಿದೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಇದು ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಸರ್ಕಾರ ಮತ್ತು ಅದರ ಏಜೆನ್ಸಿಗಳನ್ನು ಸೇರಿ, ಎಲ್ಲ ಪಾಲುದಾರರನ್ನೂ ಒಳಗೊಳ್ಳುತ್ತದೆ ಮತ್ತು ರೂಪಿತ ನೀತಿಗಳ ಪರ ವಕಾಲತ್ತು ಕೆಲಸ ಕೈಗೊಳ್ಳುತ್ತದೆ ಎಂದು ತಿಳಿಸಿದೆ.

ಈ ಐಎಸ್​ಪಿಎ ಸಂಸ್ಥಾಪಕ ಸದಸ್ಯರಾಗಿ ಲಾರ್ಸನ್ ಮತ್ತು ಟ್ಯೂಬ್ರೊ, ನೆಲ್ಕೊ (ಟಾಟಾ ಗ್ರೂಪ್), ಒನ್ ವೆಬ್, ಭಾರತಿ ಏರ್‌ಟೆಲ್, ಮ್ಯಾಪ್‌ಮಿಂಡಿಯಾ, ವಾಲ್‌ಚಂದನಗರ್ ಇಂಡಸ್ಟ್ರೀಸ್ ಮತ್ತು ಅನಂತ್ ಟೆಕ್ನಾಲಜಿ ಲಿಮಿಟೆಡ್. ಇತರ ಪ್ರಮುಖ ಸದಸ್ಯರಲ್ಲಿ ಗೋದ್ರೆಜ್, ಹ್ಯೂಸ್ ಇಂಡಿಯಾ, ಅಜಿಸ್ಟಾ-ಬಿಎಸ್‌ಟಿ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್, ಬಿಇಎಲ್, ಸೆಂಟಮ್ ಎಲೆಕ್ಟ್ರಾನಿಕ್ಸ್ ಮತ್ತು ಮ್ಯಾಕ್ಸರ್ ಇಂಡಿಯಾಗಳು ಸೇರ್ಪಡೆಯಾಗಿವೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಲಾಕಪ್ ಚಿಲಕ ತೆಗೆದು ಅತ್ಯಾಚಾರ ಆರೋಪಿ ಪರಾರಿ! ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಘಟನೆ

Viral Video: ಆಸ್ಪತ್ರೆಯಲ್ಲಿ ತನ್ನ ನೆಚ್ಚಿನ ಹಾಡು ಕೇಳಿ ನೃತ್ಯ ಮಾಡಿದ ಪುಟ್ಟ ಮಗು; ನೆಟ್ಟಿಗರ ಹೃದಯ ಗೆದ್ದ ವಿಡಿಯೋ ನೋಡಿ

Published On - 9:31 am, Mon, 11 October 21

ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ