AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಗುಜರಾತ್‌ಗೆ ಭೇಟಿ: ಪಾವಗಡ ಬೆಟ್ಟ ಮತ್ತು ಕಾಳಿಕಾ ಮಾತೆ ದೇವಾಲಯದ ವಿಶೇಷತೆಗಳು ಏನೇನು?

ಮೇಲಿನ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಕಾಳಿಕಾ ಮಾತೆಯ ದೇವಾಲಯದ ಇಂದು ಹೇಗಿದೆ ಮತ್ತು ಈ ಹಿಂದೆ ಹೇಗಿತ್ತು ಎಂಬುದರ ಸ್ಥೂಲ ಚಿತ್ರಣ ಇದರಲ್ಲಿದೆ. ಪಾವಗಡ ಬೆಟ್ಟ ಪ್ರದೇಶವು ಪಂಚಮಹಲ್ ಜಿಲ್ಲೆಯ ವ್ಯಾಪ್ತಿಗೆ ಬರುವ ಪುರಸಭಾ ವ್ಯಾಪ್ತಿಗೆ ಬರುತ್ತದೆ.

ಪ್ರಧಾನಿ ಮೋದಿ ಗುಜರಾತ್‌ಗೆ ಭೇಟಿ: ಪಾವಗಡ ಬೆಟ್ಟ ಮತ್ತು ಕಾಳಿಕಾ ಮಾತೆ ದೇವಾಲಯದ ವಿಶೇಷತೆಗಳು ಏನೇನು?
ಪಾವಗಡ ಬೆಟ್ಟ ಮತ್ತು ಕಾಳಿಕಾ ಮಾತೆ ದೇವಾಲಯ ಈಗ ಹೇಗಿದೆ, ಹಿಂದೆ ಹೇಗಿತ್ತು ಎಂಬ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on: Jun 17, 2022 | 10:56 PM

Share

ಶತಾಯುಷಿ ತಾಯಿಯ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು (Prime Minister Narendra Modi) ಜೂನ್ 17 ಮತ್ತು 18 ರಂದು ಗುಜರಾತ್‌ಗೆ ಭೇಟಿ ಕೊಟ್ಟು ಅಂದಾಜು 21,000 ಕೋಟಿ ರೂ ಯೋಜನೆಗಳ ಉದ್ಘಾಟನೆ/ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಾಳೇ ಶನಿವಾರ ಜೂನ್ 18 ರಂದು ಬೆಳಿಗ್ಗೆ 9:15 ಕ್ಕೆ, ಪಾವಗಡ ಬೆಟ್ಟದಲ್ಲಿರುವ ಶ್ರೀ ಕಾಳಿಕಾ ಮಾತೆಯ ಪುನರಾಭಿವೃದ್ಧಿ ದೇವಸ್ಥಾನಕ್ಕೆ (Shree Kalika Mata at Pavagadh Hill) ಭೇಟಿ ನೀಡಿ ಉದ್ಘಾಟನೆ ಮಾಡಲಿದ್ದಾರೆ.

ಪಾವಗಡ ಬೆಟ್ಟದಲ್ಲಿ ಕಾಳಿಕಾ ಮಾತೆಯ ಪುನರುತ್ಥಾನ ದೇವಾಲಯ ಉದ್ಘಾಟನೆ ಪಾವಗಡ ಬೆಟ್ಟದಲ್ಲಿ ಶ್ರೀ ಕಾಳಿಕಾ ಮಾತೆಯ ಪುನರಾಭಿವೃದ್ಧಿ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಇದು ಈ ಭಾಗದ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾಗಿದೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳನ್ನು ಆಕರ್ಷಿಸುತ್ತಿದೆ. ದೇವಾಲಯದ ಪುನರಾಭಿವೃದ್ಧಿಯನ್ನು 2 ಹಂತಗಳಲ್ಲಿ ಮಾಡಲಾಗಿದೆ. ಮೊದಲ ಹಂತದ ಪುನರಾಭಿವೃದ್ಧಿಯ ಉದ್ಘಾಟನೆಯನ್ನು ಈ ವರ್ಷದ ಆರಂಭದಲ್ಲಿ ಏಪ್ರಿಲ್‌ನಲ್ಲಿ ಪ್ರಧಾನ ಮಂತ್ರಿ ನೆರವೇರಿಸಿದ್ದರು. ಕಾರ್ಯಕ್ರಮದಲ್ಲಿ ಉದ್ಘಾಟನೆಗೊಳ್ಳಲಿರುವ ಎರಡನೇ ಹಂತದ ಪುನರಾಭಿವೃದ್ಧಿಯ ಶಂಕುಸ್ಥಾಪನೆಯನ್ನು 2017 ರಲ್ಲಿ ಪ್ರಧಾನ ಮಂತ್ರಿ ಮೋದಿ ಹಾಕಿದ್ದರು.

ಪಾವಗಡ ಬೆಟ್ಟ ಮತ್ತು ಕಾಳಿಕಾ ಮಾತೆ ದೇವಾಲಯದ ವಿಶೇಷತೆಗಳು ಏನೇನು?

ಇದರ ಬಗ್ಗೆ ವಿವರಣೆ ಓದುವ ಮೊದಲು ಮೇಲಿನ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಕಾಳಿಕಾ ಮಾತೆಯ ದೇವಾಲಯದ ಇಂದು ಹೇಗಿದೆ ಮತ್ತು ಈ ಹಿಂದೆ ಹೇಗಿತ್ತು ಎಂಬುದರ ಸ್ಥೂಲ ಚಿತ್ರಣ ಇದರಲ್ಲಿದೆ. ಪಾವಗಡ ಬೆಟ್ಟ ಪ್ರದೇಶವು ಪಂಚಮಹಲ್ ಜಿಲ್ಲೆಯ ವ್ಯಾಪ್ತಿಗೆ ಬರುವ ಪುರಸಭಾ ವ್ಯಾಪ್ತಿಗೆ ಬರುತ್ತದೆ. ಇದು ಗುಜರಾತ್ ರಾಜ್ಯದ ವಡೋದರಾದಿಂದ 46 ಕಿ ಮೀ ದೂರದಲ್ಲಿದೆ. ಈ ದೇಗುಲದ ಅಧಿದೇವತೆ ಮಹಾಕಾಳಿ. ಸಾವಿರಾರು ಭಕ್ತಾದಿಗಳು ಇಲ್ಲಿಗೆ ಭೇಟಿ ಕೊಡುತ್ತಾರೆ.

ವನರಾಜ ಚಾವ್ಡಾ ಎಂಬ ರಾಜ ಚಂಪಾನೇರ್ ಎಂಬ ಪುರಾತನ ಉದ್ಯಾನವನ್ನು ಸ್ಥಾಪಿಸಿದ್ದಾನೆ. ಅದು ಆತನ ಪ್ರೀತಿಯ ಸಲಹೆಗಾರ ಚಂಪಾ ಎಂಬಾತನ ಹೆಸರಿನಲ್ಲಿ ಸ್ಥಾಪಿತವಾಗಿದೆ. ಅದಾದ ಮೇಲೆ ಆ ಪ್ರದೇಶವು ಪಟೈ ರಾವಳ್​ ಕುಟುಂಬದ ಆಳ್ವಿಕೆಗೆ ಒಳಪಟ್ಟಿತು. ನವರಾತ್ರಿ ವೇಳೆ ಮಹಾ ಕಾಳಿ ಒಬ್ಬ ಮಹಿಳೆಯ ವೇಷ ಧರಿಸಿ ಗಾರ್ಬಾ ನೃತ್ಯ ಮಾಡಿದಳು ಎಂಬ ಮಾತಿದೆ. ಪಟೈ ರಾವಳ್​ ಕುಟುಂಬದ ಕೊನೆಯ ರಾಜ ಮಹಾ ಕಾಳಿಯ ರೂಪದಲ್ಲಿದ್ದ ಆ ಮಹಿಳೆಯನ್ನು ಕೆಟ್ಟ ದೃಷ್ಟಿಯಿಂದ ವೀಕ್ಷಿಸಿದನಂತೆ. ಅದರಿಂದ ಕೋಪಗೊಂಡ ಆ ನೃತ್ಯಗಾತಿ ಮಹಿಳೆ (ಮಹಾ ಕಾಳಿಕಾ) ಆ ಪಟ್ಟಣ ಪ್ರದೇಶ ಕುಸಿದು ನಾಶವಾಗಲಿ ಎಂದು ಶಾಪ ಕೊಟ್ಟಳಂತೆ. ಮುಂದೆ ಕಾಲಾಂತರದಲ್ಲಿ ಗುಜರಾತಿನ ಮುಸ್ಲಿಂ ದೊರೆ ಮೊಹಮದ್ ಬೇಗಾಡ 15ನೆಯ ಶತಮಾನದಲ್ಲಿ ಪಾವಗಡವನ್ನು ನುಚ್ಚುನೂರು ಮಾಡಿ, ಬೆಟ್ಟ ಪ್ರದೇಶವನ್ನು ಆಕ್ರಮಿಸಿಕೊಂಡನಂತೆ ಎಂಬ ಐತಿಹ್ಯವಿದೆ.

Also Read:

ಶತಾಯುಷಿ ತಾಯಿಯ ಭೇಟಿಗಾಗಿ ಪ್ರಧಾನಿ ಮೋದಿ ಗುಜರಾತ್‌ಗೆ ಭೇಟಿ, 21000 ಕೋಟಿ ರೂ ಯೋಜನೆಗಳ ಉದ್ಘಾಟನೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ