AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ನಾಗ್ಪುರದಲ್ಲಿ ಕಲಾವಿದರ ಬಳಿ ತೆರಳಿ ಅವರ ಜತೆ ಢೋಲ್ ಬಾರಿಸಿದ ಮೋದಿ

ನಾಗ್ಪುರ ಮೆಟ್ರೋ ಮೊದಲ ಹಂತದ ಕಾಮಗಾರಿಗೂ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ನಾಗ್ಪುರದ ಜನರನ್ನು ಅಭಿನಂದಿಸಿದ ಮೋದಿ ನಾಗ್ಪುರ ಮೆಟ್ರೋದ ಹಂತ 1 ರ ಉದ್ಘಾಟನೆಗೆ ನಾನು ನಾಗ್ಪುರದ ಜನರನ್ನು ಅಭಿನಂದಿಸಲು ಬಯಸುತ್ತೇನೆ ಎಂದು ಫೋಟೊ ಟ್ವೀಟ್ ಮಾಡಿದ್ದಾರೆ

Watch ನಾಗ್ಪುರದಲ್ಲಿ ಕಲಾವಿದರ ಬಳಿ ತೆರಳಿ ಅವರ ಜತೆ ಢೋಲ್ ಬಾರಿಸಿದ ಮೋದಿ
ಢೋಲ್ ಬಾರಿಸಿದ ಮೋದಿ
TV9 Web
| Edited By: |

Updated on: Dec 11, 2022 | 4:57 PM

Share

ನಾಗ್ಪುರ: ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ನಾಗ್ಪುರದಲ್ಲಿ (Nagpur) ಢೋಲ್ ಬಾರಿಸಿ ಸ್ವಾಗತಿಸಲಾಯಿತು. ಈ ಸ್ವಾಗತದಿಂದ ಉತ್ಸುಕರಾದ ಮೋದಿ ಕಲಾವಿದರ ಗುಂಪನ್ನು ಸೇರಿ ಅಲ್ಲಿ ಢೋಲ್ (dhol) ಬಾರಿಸಿದ್ದು ವಿಶೇಷವಾಗಿತ್ತು. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಪ್ರಧಾನಿ ಮೋದಿ ಒಬ್ಬ ಕಲಾವಿದನ ಪಕ್ಕದಲ್ಲಿ ಢೋಲ್ ಬಾರಿಸುತ್ತಿರುವುದನ್ನು ಕಾಣಬಹುದು. “ಮಹಾರಾಷ್ಟ್ರದ ನಾಗ್ಪುರದಲ್ಲಿ ಸಾಂಪ್ರದಾಯಿಕ ಸ್ವಾಗತ” ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೊ ಶೇರ್ ಮಾಡಲಾಗಿದೆ. ನಾಗ್ಪುರ ಮತ್ತು ಬಿಲಾಸ್‌ಪುರ ನಡುವೆ ಇಂದು (ಭಾನುವಾರ) ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ ಪ್ರಧಾನಿ ನಾಗ್ಪುರ ಮತ್ತು ಬಿಲಾಸ್‌ಪುರ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಚಾಲನೆ ನೀಡಿದ್ದೇನೆ. ಈ ರೈಲಿನಿಂದ ಸಂಪರ್ಕವು ಗಮನಾರ್ಹವಾಗಿ ವರ್ಧಿಸುತ್ತದೆ ಎಂದಿದ್ದಾರೆ. ನಾಗ್ಪುರ ಮೆಟ್ರೋ ಮೊದಲ ಹಂತದ ಕಾಮಗಾರಿಗೂ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ನಾಗ್ಪುರದ ಜನರನ್ನು ಅಭಿನಂದಿಸಿದ ಮೋದಿ ನಾಗ್ಪುರ ಮೆಟ್ರೋದ ಹಂತ 1 ರ ಉದ್ಘಾಟನೆಗೆ ನಾನು ನಾಗ್ಪುರದ ಜನರನ್ನು ಅಭಿನಂದಿಸಲು ಬಯಸುತ್ತೇನೆ. ಎರಡು ಮೆಟ್ರೋ ರೈಲುಗಳನ್ನು ಚಾಲನೆ ನೀಡಿತ್ತು ಮೆಟ್ರೋದಲ್ಲಿ ಸವಾರಿ ಮಾಡಿರುವೆ. ಮೆಟ್ರೋ ಆರಾಮದಾಯಕ ಮತ್ತು ಅನುಕೂಲಕರವಾಗಿದೆ ಎಂದಿದ್ದಾರೆ.

ಪ್ರಧಾನಿ ಮೋದಿ ಅವರು ನಾಗ್ಪುರ ಮೆಟ್ರೋದಲ್ಲಿ ಆಸಕ್ತಿದಾಯಕ ಸಂವಾದಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಾಗ್ಪುರ ಮೆಟ್ರೋ ಹಂತ-II ಗೆ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ಮಾಡಿದರು ಎಂದು ಪಿಎಂಒ ಹೇಳಿಕೆಯಲ್ಲಿ ತಿಳಿಸಿದೆ. ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಪ್ರಧಾನಿ ಗೋವಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಅವರು ಭದ್ರತಾ ವ್ಯವಸ್ಥೆಗಳನ್ನು ನಿರ್ವಹಿಸಿದ್ದು ಇದರ ಅಡಿಯಲ್ಲಿ ಸುಮಾರು 4,000 ಸಿಬ್ಬಂದಿಯನ್ನು ನಿಯೋಜಿಸಲಾಗುವುದು .ಅವರಿಗೆ ತ್ವರಿತ ಪ್ರತಿಕ್ರಿಯೆ ತಂಡಗಳು, ಗಲಭೆ ನಿಯಂತ್ರಣ ಪೊಲೀಸರು ಮತ್ತು ಗೃಹ ರಕ್ಷಕ ದಳಗಳು ಬೆಂಬಲ ನೀಡಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್