AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ G20 ಅಧ್ಯಕ್ಷ ಗಾದಿ; ಲಾಂಛನ, ಥೀಮ್, ವೆಬ್​​ಸೈಟ್ ಅನಾವರಣ ಮಾಡಿದ ಮೋದಿ

ಲೋಗೋದಲ್ಲಿರುವ ಕಮಲದ ಏಳು ದಳಗಳು ಏಳು ಖಂಡಗಳನ್ನು ಪ್ರತಿನಿಧಿಸುತ್ತವೆ ಎಂದು ಅವರು ಹೇಳಿದರು. ಇದು 'ವಸುಧೈವ ಕುಟುಂಬಕಂ' ಅಥವಾ 'ಒಂದು ಭೂಮಿ, ಒಂದು...

ಭಾರತಕ್ಕೆ G20 ಅಧ್ಯಕ್ಷ ಗಾದಿ; ಲಾಂಛನ, ಥೀಮ್, ವೆಬ್​​ಸೈಟ್ ಅನಾವರಣ ಮಾಡಿದ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Nov 08, 2022 | 8:03 PM

Share

ದೆಹಲಿ: ಕಮಲದ ಹೂವಿನ ಮೇಲೆ ಭೂಮಿ ಇರುವಂತೆ ಕಾಣುವ ಭಾರತದ G20 ಅಧ್ಯಕ್ಷ ಸ್ಥಾನದ ಲೋಗೋವನ್ನು ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಆರು ಭಾರತೀಯ ಭಾಷೆಗಳಲ್ಲಿ ಸ್ವಾಗತ ಕೋರಿದ್ದಾರೆ. ಇಂದು G20 ಅಧ್ಯಕ್ಷತೆಯ(G20 presidency) ಲಾಂಛನ, ಥೀಮ್ ಮತ್ತು ವೆಬ್​​ಸೈಟ್​​ನ್ನು ಮೋದಿ ಅನಾವರಣಗೊಳಿಸಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ, ಜ್ಞಾನ ಮತ್ತು ಸಮೃದ್ಧಿಯ ದೇವತೆಗಳು ಕಮಲದ ಮೇಲೆ ಕುಳಿತಿದ್ದಾರೆ ಎಂದು ಮೋದಿ ಹಿಂದೂ ದೇವತೆಗಳಾದ ಸರಸ್ವತಿ ಮತ್ತು ಲಕ್ಷ್ಮಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.   ಲೋಗೋದಲ್ಲಿರುವ ಕಮಲದ ಏಳು ದಳಗಳು ಏಳು ಖಂಡಗಳನ್ನು ಪ್ರತಿನಿಧಿಸುತ್ತವೆ ಎಂದು ಅವರು ಹೇಳಿದರು. ಇದು ‘ವಸುಧೈವ ಕುಟುಂಬಕಂ’ ಅಥವಾ ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಎಂಬ ವಿಷಯದೊಂದಿಗೆ ಸಂಬಂಧ ಹೊಂದಿದೆ ಎಂದಿದ್ದಾರೆ ಮೋದಿ.  ಭಾರತವು ಡಿಸೆಂಬರ್ 1 ರಂದು ಪ್ರಸ್ತುತ ಅಧ್ಯಕ್ಷ ಇಂಡೋನೇಷ್ಯಾದಿಂದ ಗುಂಪಿನ ಅಧ್ಯಕ್ಷತೆಯನ್ನು ವಹಿಸುತ್ತದೆ. ಮುಂದಿನ ವರ್ಷ ಶೃಂಗಸಭೆಯನ್ನು ಭಾರತ ಆಯೋಜಿಸಲಿದೆ.

“ಈ ಕಾರ್ಯಕ್ರಮಗಳು ದೆಹಲಿ ಅಥವಾ ಕೆಲವು ನಗರಗಳಿಗೆ ಸೀಮಿತವಾಗಿಲ್ಲ. ದೇಶದ ಮೂಲೆ ಮೂಲೆಗಳಲ್ಲಿ ಕಾರ್ಯಕ್ರಮಗಳನ್ನು ನಡೆಯಲಿವೆ ಎಂದು ಪ್ರಧಾನಿ ಮೋದಿ ಹೇಳಿದರು. “ಪ್ರತಿಯೊಂದು ರಾಜ್ಯವು ತನ್ನದೇ ಆದ ಸಂಸ್ಕೃತಿ ಮತ್ತು ಸೌಂದರ್ಯವನ್ನು ಹೊಂದಿದೆ ಎಂದು ಹೇಳಿದ ಮೋದಿ, “ಪಧಾರೋ ಮ್ಹಾರೆ ದೇಸ್” ಎಂದು ರಾಜಸ್ಥಾನಿ ಭಾಷೆಯಲ್ಲಿ ಹೇಳಿದ್ದಾರೆ.

ಗುಜರಾತ್‌ನ ಪ್ರೀತಿಯ ಸ್ವಾಗತವಾದ ‘ತಮರು ಸ್ವಾಗತ್ ಛೆ’ ಕೇರಳದಲ್ಲಿ ಮಲಯಾಳಂ ಭಾಷೆಯಲ್ಲಿ ಹೇಳುವಾಗ ಎಲ್ಲಾವರ್ಕ್ಕುಂ ಸ್ವಾಗತಮ್ ಎಂದಾಗುತ್ತದೆ. ಮಧ್ಯಪ್ರದೇಶದಲ್ಲಿ ಇದು, ‘ಆಪ್ ಕಾ ಸ್ವಾಗತ್ ಹೈ’ ಎಂದು ಅವರು ಹೇಳಿದ್ದಾರೆ. ತದ ನಂತರ ತಮಿಳು, ಬಂಗಾಳಿಯಲ್ಲೂ ಇದನ್ನೇ ಅವರು  ಹೇಳಿದ್ದಾರೆ. ಉತ್ತರ ಪ್ರದೇಶ ಮತ್ತು ಹಿಮಾಚಲ “ಎಲ್ಲಾ ಋತುಗಳಲ್ಲಿ ಭೇಟಿ ನೀಡಲು ಯೋಗ್ಯವಾಗಿದೆ” ಎಂದು ಹೇಳಿದ ಮೋದಿ ಉತ್ತರಾಖಂಡ ಸ್ವರ್ಗವಾಗಿದೆ ಎಂದು ಹೇಳಿದರು.

“ಈ ವೈವಿಧ್ಯತೆಯು ಜಗತ್ತನ್ನು ವಿಸ್ಮಯಗೊಳಿಸುತ್ತದೆ” ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ