AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದೊಂದಿಗಿನ ಸೌಹಾರ್ದ ಸಂಬಂಧಕ್ಕೆ ತಮಿಳುನಾಡು ಅತ್ಯುತ್ತಮ ಉದಾಹರಣೆ: ನರೇಂದ್ರ ಮೋದಿ

PM Modi in Tamil Nadu: ಕೇಂದ್ರ ಸರ್ಕಾರದೊಂದಿಗಿನ  ಸೌಹಾರ್ದಯುತ ಸಂಬಂಧಕ್ಕೆ ಉದಾಹರಣೆಯೇ ತಮಿಳುನಾಡು ಸರ್ಕಾರ ಎಂದು ಹೇಳಿದ ಮೋದಿ ರಾಜ್ಯದ ಜನರ ಅಭಿವೃದ್ಧಿಗಾಗಿ ನಾವು ಜತೆಯಾಗಿ ಕೆಲಸ ಮಾಡಿದ್ದೇವೆ ಎಂದಿದ್ದಾರೆ.

ಕೇಂದ್ರ ಸರ್ಕಾರದೊಂದಿಗಿನ ಸೌಹಾರ್ದ ಸಂಬಂಧಕ್ಕೆ ತಮಿಳುನಾಡು ಅತ್ಯುತ್ತಮ ಉದಾಹರಣೆ: ನರೇಂದ್ರ ಮೋದಿ
ತಮಿಳುನಾಡಿನಲ್ಲಿ ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Feb 25, 2021 | 7:27 PM

ಚೆನ್ನೈ: ವಿಧಾನಸಭೆ ಚುನಾವಣೆಗೆ ಸಿದ್ಧವಾಗಿರುವ ತಮಿಳುನಾಡಿಗೆ ಭೇಟಿ ನೀಡಿದ ನರೇಂದ್ರ ಮೋದಿ, ಕೇಂದ್ರ ಸರ್ಕಾರದೊಂದಿಗಿನ ಸೌಹಾರ್ದ ಸಂಬಂಧಕ್ಕೆ ತಮಿಳುನಾಡು ಅತ್ಯುತ್ತಮ ಉದಾಹರಣೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ರಾಜ್ಯದ ಅಭಿವೃದ್ಧಿಗಾಗಿ ಜತೆಯಾಗಿ ಕೆಲಸ ಮಾಡಿದ್ದೇವೆ. ಅಭಿವೃದ್ಧಿ ರಾಜಕೀಯ ಮತ್ತು ಉತ್ತಮ ಆಡಳಿತವನ್ನು ಮಾತ್ರ ನಾವು ಸ್ವೀಕರಿಸುತ್ತೇವೆ ಎಂದು ದೇಶದ ಜನರು ತೋರಿಸಿಕೊಟ್ಟಿದ್ದಾರೆ ಎಂದಿದ್ದಾರೆ.

ಕೆಲವೇ ತಿಂಗಳಲ್ಲಿ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷ ಜತೆಯಾಗಿ ಚುನಾವಣೆ ಎದುರಿಸಲಿದೆ. ಎಐಎಡಿಎಂಕೆ ಪಕ್ಷವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಮೈತ್ರಿ ಪಕ್ಷವಾಗಿದೆ.

ಕೇಂದ್ರ ಸರ್ಕಾರದೊಂದಿಗಿನ  ಸೌಹಾರ್ದಯುತ ಸಂಬಂಧಕ್ಕೆ ಉದಾಹರಣೆಯೇ ತಮಿಳುನಾಡು ಸರ್ಕಾರ ಎಂದು ಹೇಳಿದ ಮೋದಿ ರಾಜ್ಯದ ಜನರ ಅಭಿವೃದ್ಧಿಗಾಗಿ ನಾವು ಜತೆಯಾಗಿ ಕೆಲಸ ಮಾಡಿದ್ದೇವೆ. ಈ ವರ್ಷ ಇಲ್ಲಿ ಹೊಸ ಸರ್ಕಾರ ಬರಲಿದೆ. ಭಾರತದ ಇತಿಹಾಸದಲ್ಲಿನ ಸಂದಿಗ್ದ ಕಾಲದಲ್ಲಿ ಈಗ ಚುನಾವಣೆ ನಡೆಯುತ್ತಿದೆ. ಕಳೆದ ಕೆಲವು ವರ್ಷಗಳಲ್ಲಿ ದೇಶದ ಜನರು ಸಮರ್ಥವಾದ ಉತ್ತರವನ್ನು ನೀಡಿದ್ದಾರೆ. ಅಭಿವೃದ್ಧಿಗೆ ಪ್ರೋತ್ಸಾಹಿಸುವ ಸರ್ಕಾರ ಬೇಕು ಎಂದು ಅವರು ಹೇಳಿದ್ದಾರೆ.

ಮೋದಿ ಭಾಷಣದ ಮುಖ್ಯಾಂಶಗಳು ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಸಭೆಗಳು ‘ಭ್ರಷ್ಟಾಚಾರದ ಹ್ಯಾಕಥಾನ್’ ರೀತಿ ಇರುತ್ತದೆ. ಈ ಎರಡು ಪಕ್ಷಗಳು ಯಾವ ರೀತಿ ಲೂಟಿ ಮಾಡಬಹುದು ಎಂಬುದನ್ನು ಯೋಚಿಸುತ್ತವೆ ಎಂದು ಮೋದಿ ಹೇಳಿದ್ದಾರೆ. ಇತರ ಪಕ್ಷಗಳ ಬಗ್ಗೆ ಕಿಡಿ ಕಾರಿದ ಮೋದಿ, ವಿಪಕ್ಷಗಳ ರಾಜಕಾರಣವು ಕಿರುಕುಳ ಮತ್ತು ಲೇವಡಿ ಮಾಡುವುದಾಗಿದೆ. ಡಿಎಂಕೆ ಅಧಿಕಾರಕ್ಕೇರಿದಾಗಲೆಲ್ಲಾ ಅವರು ಪುರುಷ ಪ್ರಧಾನ ಸಂಸ್ಕೃತಿಯನ್ನು ಹೇರುತ್ತಾರೆ. ಈ ರೀತಿಯ ಸಂಸ್ಕೃತಿಯಲ್ಲಿ ಹೆಚ್ಚು ತೊಂದರೆಕ್ಕೀಡಾಗುವುದು ಯಾರು ಗೊತ್ತೇ? ತಮಿಳುನಾಡಿನ ಮಹಿಳೆಯರು. ಡಿಎಂಕೆ ಪಕ್ಷ  ಅಮ್ಮ ಜಯಲಲಿತಾ ಜೀ ಅವರ ಜತೆ ಯಾವ ರೀತಿ ವರ್ತಿಸಿತ್ತು ಎಂಬುದು ಇಡೀ ರಾಜ್ಯಕ್ಕೆ ಗೊತ್ತು.

ನಮ್ಮ ಸರ್ಕಾರ ರೈತರ ಅಭಿವೃದ್ಧಿಗೆ ಬದ್ಧವಾಗಿದೆ. ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೆ ರೈತರು ಗೌರವದಿಂದ ಬಾಳಬೇಕು ಎಂದು ನಾವು ಬಯಸುತ್ತೇವೆ. ಮಧ್ಯವರ್ತಿಗಳನ್ನು ರೈತರು ಅವಲಂಬಿಸಬೇಕು ಎಂದು ನಾವು ಬಯಸುವುದಿಲ್ಲ

ವರ್ಷಗಳಿಂದ ಸಣ್ಣ ವ್ಯಾಪಾರಿಗಳು ಮತ್ತು ಸಣ್ಣ ಕೃಷಿಕರನ್ನು ಹಿಂದಿನ ಸರ್ಕಾರ ನಿರ್ಲಕ್ಷಿಸುತ್ತಾ ಬಂದಿದೆ. ಆದರೆ ಎನ್​ಡಿಎ ಸರ್ಕಾರ ಈ ಎರಡೂ ವಿಭಾಗಗಳಿಗೆ ಆದ್ಯತೆ ನೀಡಿದೆ. ಭಾರತದ ಸಣ್ಣ ಕೃಷಿಕರೊಂದಿಗೆ ಕೆಲಸ ಮಾಡುವುದು ನಮಗೆ ಹೆಮ್ಮೆಯ ಸಂಗತಿ. ಕಳೆದ ಏಳು ವರ್ಷಗಳಿಂದ ಇವರ ಬದುಕು ಹಸನುಗೊಳಿಸಲು ನಾವು ಕೆಲಸ ಮಾಡಿದ್ದೇವೆ.

ವಿವಿಧ ಯೋಜನೆಗಳಿಗೆ ಶಂಕು ಸ್ಥಾಪನೆ

2×500 ಮೆಗಾವ್ಯಾಟ್ ನೈವೇಲಿ ಉಷ್ಣ ವಿದ್ಯುತ್ ಸ್ಥಾವರ ಸೇರಿದಂತೆ ಹಲವಾರು ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ಮಾಡಿದ್ದಾರೆ. ಲಿಗ್ವೈಟ್​ನಿಂದ ಕಾರ್ಯಪ್ರವೃತ್ತವಾಗುವ ವಿದ್ಯುತ್ ಸ್ಥಾವರವು 1000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿದೆ.

ಎನ್ಎಲ್​ಸಿಐಎಲ್ ನ 709 ಮೆಗಾವ್ಯಾಟ್ ಸೌರ ಯೋಜನೆ ಮತ್ತು ತಿರುಪ್ಪೂರ್, ಮಧುರೈ, ತಿರುಚಿನಾಪಳ್ಳಿಯಲ್ಲಿ 4,000ಕ್ಕಿಂತ ಹೆಚ್ಚು ಜನರಿಗೆ ಜಮೀನು ನೀಡುವ ಯೋಜನೆಗೆ ಚಾಲನೆ ನೀಡಿದ್ದಾರೆ

ಇದನ್ನೂ ಓದಿ: PM Modi in Puducherry: ಭಾರತಕ್ಕೆ ವಿಶ್ವದರ್ಜೆಯ ಮೂಲ ಸೌಕರ್ಯಗಳ ಅಗತ್ಯವಿದೆ: ನರೇಂದ್ರ ಮೋದಿ

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್