AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dehli Chalo ದೆಹಲಿಯಲ್ಲಿ ಅತ್ಯಧಿಕ ಚಳಿ! ಕೇಂದ್ರ ಸರ್ಕಾರದಿಂದ ಪಂಜಾಬ್ ರೈತರ ಮನವೊಲಿಕೆಯ ಯತ್ನ..

ಕೃಷಿ ಕ್ಷೇತ್ರದಲ್ಲಿ ತಂದ ಬದಲಾವಣೆಗಳು ದೇಶದ ರೈತರಿಗೆ ಹೇಗೆ ವರದಾಯಕವಾಗಿದೆ ಎಂದು ವಿವರಿಸಿ ಕೇಂದ್ರ ಸರ್ಕಾರ ಈ- ಬುಕ್ಲೆಟ್​ ಹೊರತಂದಿದೆ. ಸಿಕ್​ ಸಮುದಾಯದ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ. ಪಂಜಾಬ್ ರೈತರ ಮನವೊಲಿಕೆಯ ಯತ್ನವೆಂದು ಈ ನಡೆಗಳನ್ನು ವಿಶ್ಲೇಷಿಸಲಾಗುತ್ತಿದೆ.

Dehli Chalo ದೆಹಲಿಯಲ್ಲಿ ಅತ್ಯಧಿಕ ಚಳಿ! ಕೇಂದ್ರ ಸರ್ಕಾರದಿಂದ ಪಂಜಾಬ್ ರೈತರ ಮನವೊಲಿಕೆಯ ಯತ್ನ..
ಘಾಜಿಪುರ ಗಡಿಯಲ್ಲಿ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆಯಲ್ಲಿ ನಿರತನಾಗಿರುವ ಸಿಖ್ ಸಮುದಾಯದ ವ್ಯಕ್ತಿ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Dec 19, 2020 | 4:14 PM

ದೆಹಲಿ: ಪಂಜಾಬ್ ರೈತರ ಮನವೊಲಿಸಲು ಕೇಂದ್ರ ಸರ್ಕಾರ ನಾನಾ ಬಗೆಯ ಕಸರತ್ತಿನಲ್ಲಿ ತೊಡಗಿರುವುದು ಸ್ಪಷ್ಟವಾಗುತ್ತಿದೆ. ಈಗಾಗಲೇ ಜಾರಿಗೆ ಬಂದಿರುವ ನೂತನ ಕೃಷಿ ಮಸೂದೆಗಳು ರೈತರ ಅಭಿವೃದ್ಧಿಗೆ ಪೂರಕವಾಗಲಿವೆ ಎಂದು ಬಿಜೆಪಿ ನಾಯಕರು ಪದೇ ಪದೇ ಸಮರ್ಥಿಸಿಕೊಳ್ಳುತ್ತಿದ್ದಾರೆ.

ಇತ್ತ ಪ್ರಧಾನಿ ನರೇಂದ್ರ ಮೋದಿ, ಭಾಗವಹಿಸುತ್ತಿರುವ ಎಲ್ಲಾ ಕಾರ್ಯಕ್ರಮಗಳಲ್ಲೂ ಕೃಷಿ ಕಾಯ್ದೆಗಳ ಕುರಿತು ಮಾತನಾಡುತ್ತಿದ್ದಾರೆ. ಅಲ್ಲದೇ, ಕೃಷಿ ಕ್ಷೇತ್ರದಲ್ಲಿ ತಂದ ಬದಲಾವಣೆಗಳು ದೇಶದ ರೈತರಿಗೆ ಹೇಗೆ ವರದಾಯಕವಾಗಿದೆ ಎಂದು ವಿವರಿಸಿ ಈ- ಬುಕ್ಲೆಟ್​ ಒಂದನ್ನು ಹೊರತಂದಿದ್ದಾರೆ.

ಹಿಂದಿ ಮತ್ತು ಇಂಗ್ಲೀಷ್​ನಲ್ಲಿರುವ ಈ-ಬುಕ್ಲೆಟ್​ನಲ್ಲಿ ಕೃಷಿ ಸುಧಾರಣೆಗಳು ರೈತರ ಯಶಸ್ಸಿಗೆ ಕಾರಣವಾದ ಬಗೆಯನ್ನು ವಿವರಿಸಲಾಗಿದೆ. ಈ-ಬುಕ್ಲೆಟ್​ನ್ನು ದೇಶದ ಜನತೆ ಓದುವಂತೆ ಅವರು ಮನವಿ ಮಾಡಿದ್ದಾರೆ.

ಸಿಖ್ ಸಮುದಾಯದ 10 ಗುರುಗಳಲ್ಲಿ ಒಂಭತ್ತನೆಯವರಾದ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದ್ದಾರೆ. 1975ರಲ್ಲಿ ಮೊಘಲ್ ದೊರೆ ಔರಂಗಜೇಬ್​ ಗುರು ತೇಜ್ ಸಿಂಗ್ ಬಹದ್ದೂರ್​ರನ್ನು ಸಾರ್ವಜನಿಕವಾಗಿ ಹತ್ಯೆ ಮಾಡಿದ. ಅಂದಿನಿಂದ ಗುರು ತೇಜ್ ಬಹದ್ದೂರ್ ಹುತಾತ್ಮರಾದ ದಿನವನ್ನು ‘ಶಹೀದ್ ದಿವಸ್’ ಎಂದು ಸಿಖ್ ಸಮುದಾಯ ಆಚರಿಸುತ್ತದೆ. ಗುರು ತೇಜ್ ಬಹದ್ದೂರ್ ಅವರನ್ನು ಸ್ಮರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಅವರ ತತ್ವಗಳನ್ನು ಇಂದಿನ ಸಮಾಜ ಅಳವಡಿಸಿಕೊಳ್ಳಬೇಕಿದೆ’ಎಂದು ಟ್ವೀಟ್ ಮಾಡಿದ್ದಾರೆ.

ವರ್ಷದಲ್ಲೇ ಅತಿ ಹೆಚ್ಚು ಚಳಿ ಕಂಡ ದೆಹಲಿ ಇಂದು ರಾಷ್ಟ್ರ ರಾಜಧಾನಿ ದೆಹಲಿ ಈ ಚಳಿಗಾಲದ ಅತ್ಯಂತ ತೀವ್ರ ಚಳಿಯಲ್ಲಿ ಗಡಗಡ ನಡುಗಿತು. ಹವಾಮಾನ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ಅತಿ ಕನಿಷ್ಠ 3.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾದೆ. ಆದರೂ, ಪಂಜಾಬ್ ರೈತರು ಪ್ರತಿಭಟನೆ ಮುಂದುವರೆಸುತ್ತಿದ್ದಾರೆ.

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ