AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲಾನುಭವಿಗಳು ಕೊರೊನಾ ಲಸಿಕೆ ವದಂತಿ ದೂರವಾಗಿಸಿ..ಪ್ರಧಾನಿ ನರೇಂದ್ರ ಮೋದಿ ಕರೆ

ವಾರಣಾಸಿಯ ಕೊರೊನಾ ಲಸಿಕೆ ಫಲಾನುಭವಿಗಳ ಜತೆ ವರ್ಚುವಲ್ ಸಂವಾದ ನಡೆಸಿದ ಅವರು, ಕೇವಲ ವಾರಣಾಸಿಯಲ್ಲೊಂದೇ 20 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಫಲಾನುಭವಿಗಳು ಕೊರೊನಾ ಲಸಿಕೆ ವದಂತಿ ದೂರವಾಗಿಸಿ..ಪ್ರಧಾನಿ ನರೇಂದ್ರ ಮೋದಿ ಕರೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ
guruganesh bhat
| Edited By: |

Updated on: Jan 22, 2021 | 4:23 PM

Share

ವಾರಣಾಸಿ: ಕೊರೊನಾ ಲಸಿಕೆಯಿಂದ ದೊಡ್ಡ ಅಡ್ಡ ಪರಿಣಾಮವಿಲ್ಲ ಎಂದು ಸಾಬೀತಾಗಿದೆ. ದೇಶದಲ್ಲಿ ತಯಾರಿಸಿದ ಲಸಿಕೆ ಮೇಲೆ ಭರವಸೆಯಿಡಿ. ಫಲಾನುಭವಿಗಳು ಲಸಿಕೆ ಕುರಿತ ವದಂತಿ ಹೋಗಲಾಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ವಾರಣಾಸಿಯ ಕೊರೊನಾ ಲಸಿಕೆ ಫಲಾನುಭವಿಗಳ ಜತೆ ವರ್ಚುವಲ್ ಸಂವಾದ ನಡೆಸಿದ ಅವರು, ಕೇವಲ ವಾರಣಾಸಿಯಲ್ಲೊಂದೇ 20 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಜನರಿಗೆ ರೋಗಗಳ ವಿರುದ್ಧ ಹೋರಾಡುವ ಶಕ್ತಿ ಇದೆ. ದೇಶದಲ್ಲಿ ಬೇಗನೇ ಲಸಿಕೆ ನೀಡಿಕೆಗೆ ಚಾಲನೆ ನೀಡಲು ಒತ್ತಡವಿತ್ತು. ಆದರೆ ವಿಜ್ಞಾನಿಗಳು ಒಪ್ಪಿದ ನಂತರವಷ್ಟೇ ಲಸಿಕೆ ಅಭಿಯಾನ ಪ್ರಾರಂಭಿಸಿದೆವು. ಆಸ್ಪತ್ರೆಗಳ ನಡುವೆ ಲಸಿಕೆ ನೀಡಿಕೆ ಬಗ್ಗೆ ಸ್ಪರ್ಧೆ ಶುರುವಾಗಲಿ ಎಂದ ಅವರು ಆರೋಗ್ಯ ಕಾರ್ಯಕರ್ತರ ಬಳಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು.

ಭಾರತ್ ಬಯೋಟೆಕ್ ನ‌ ಕೋವ್ಯಾಕ್ಸಿನ್ ಲಸಿಕೆಯ 3 ನೇ ಹಂತದಲ್ಲಿದ್ದು, ವೈದ್ಯಕೀಯ ಪ್ರಯೋಗ ನಡೆಸಲಾಗುತ್ತಿದೆ. ಈಗಾಗಲೇ 3 ನೇ ಹಂತದಲ್ಲಿ ಮೊದಲ ಡೋಸ್ ನೀಡಿಕೆ ಮುಕ್ತಾಯವಾಗಿದೆ. ಮಾರ್ಚ್ ವೇಳೆಗೆ 3 ನೇ ಹಂತದ ಪ್ರಯೋಗದ ಫಲಿತಾಂಶ ಲಭ್ಯ ಸಾಧ್ಯತೆಯಿದೆ ಎಂದು ಭಾರತ್ ಬಯೋಟೆಕ್​ನ ಸಿಎಂಡಿ ಸುಚಿತ್ರಾ ಎಲಾ ತಿಳಿಸಿದ್ದಾರೆ.

ಲಸಿಕೆಗೆ ಹೆದರಬೇಡಿ, ತಪ್ಪು ಮಾಹಿತಿಗೆ ಕಿವಿಗೊಡಬೇಡಿ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ