AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Croatia Visit: ಕ್ರೊಯೇಷಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ವೇದ ಮಂತ್ರಗಳ ಸ್ವಾಗತ

ಭಾರತದ ಪ್ರಧಾನಿ ನರೇಂದ್ರ ಮೋದಿ ಸೈಪ್ರಸ್, ಕೆನಡಾ ಪ್ರವಾಸ ಮುಗಿಸಿ ಇಂದು ಕ್ರೊಯೇಷಿಯಾಗೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿಗೆ ಅಲ್ಲಿನ ಜನರು ವೇದ ಮಂತ್ರಗಳೊಂದಿಗೆ ಸ್ವಾಗತಿಸಿದ್ದಾರೆ. ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಅಂತಿಮ ಹಂತವಾಗಿ ಕ್ರೊಯೇಷಿಯಾದ ಜಾಗ್ರೆಬ್‌ನಲ್ಲಿರುವ ಹೋಟೆಲ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಭಾರತೀಯ ವಲಸಿಗರ ಜೊತೆ ಸಂವಾದ ನಡೆಸಿದರು. ಕಥಕ್ ಕಲಾವಿದರು ಪ್ರಧಾನಿ ಮೋದಿ ಅವರ ಮುಂದೆ ಭಾರತದ ಶಾಸ್ತ್ರೀಯ ನೃತ್ಯ ಪ್ರಕಾರದ ಲಯಬದ್ಧ ಲಯಗಳೊಂದಿಗೆ ಪ್ರದರ್ಶನ ನೀಡಿದರು.

PM Modi Croatia Visit: ಕ್ರೊಯೇಷಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ವೇದ ಮಂತ್ರಗಳ ಸ್ವಾಗತ
Pm Modi In Croatia
ಸುಷ್ಮಾ ಚಕ್ರೆ
|

Updated on:Jun 18, 2025 | 8:13 PM

Share

ನವದೆಹಲಿ, ಜೂನ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ಕೆನಡಾದಿಂದ ಕ್ರೊಯೇಷಿಯಾಕ್ಕೆ (Croatia) ಆಗಮಿಸಿದ್ದಾರೆ. ಇದು ಭಾರತೀಯ ಪ್ರಧಾನಿಯೊಬ್ಬರು ಈ ದೇಶಕ್ಕೆ ನೀಡುತ್ತಿರುವ ಮೊದಲ ಭೇಟಿಯಾಗಿದೆ. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ಕ್ರೊಯೇಷಿಯಾದ (PM Modi in Croatia) ನಾಯಕರೊಂದಿಗೆ ಮಾತುಕತೆ ನಡೆಸಲು ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಕ್ರೊಯೇಷಿಯಾದ ಪ್ರಧಾನಿ ಆಂಡ್ರೆಜ್ ಪ್ಲೆಂಕೋವಿಕ್ ಅವರು ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡಿದ್ದಾರೆ. ನಂತರ ಭಾರತೀಯ ಪ್ರಧಾನಿಗಾಗಿ ಸಂಸ್ಕೃತ ಶ್ಲೋಕಗಳನ್ನು ಘೋಷಿಸಿ, ಸಂಸ್ಕೃತ ಶ್ಲೋಕಗಳ ಮೂಲಕ ಸ್ವಾಗತಿಸಲಾಯಿತು.

ಪ್ರಧಾನಿ ಮೋದಿಯನ್ನು ಕ್ರೊಯೇಷಿಯನ್ನರು ಗಾಯತ್ರಿ ಮಂತ್ರ ಮತ್ತು ಇತರ ವೇದ ಮಂತ್ರಗಳೊಂದಿಗೆ ಸ್ವಾಗತಿಸಿದರು. ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣವಾದ ಎಕ್ಸ್​ (ಹಿಂದಿನ ಟ್ವಿಟರ್)ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ಮೂವರು ಕ್ರೊಯೇಷಿಯಾದ ಮಹಿಳೆಯರು ಮತ್ತು ಮೂವರು ಪುರುಷರು ಭಾರತೀಯ ಉಡುಪನ್ನು ಧರಿಸಿರುವುದನ್ನು ನೋಡಬಹುದು. ಮಹಿಳೆಯರು ಬಿಳಿ ಸೀರೆಯನ್ನು ಉಟ್ಟುಕೊಂಡು, ಪುರುಷರು ಬಿಳಿ ಕುರ್ತಾಗಳನ್ನು ಧರಿಸಿ, ಹಣೆಯ ಮೇಲೆ ವಿಭೂತಿಯನ್ನು ಹಚ್ಚಿಕೊಂಡು ಶ್ಲೋಕಗಳನ್ನು ಹೇಳುತ್ತಿರುವುದನ್ನು ನೋಡಬಹುದು. ಸಾಂಪ್ರದಾಯಿಕ ಭಾರತೀಯ ರೀತಿಯಲ್ಲಿ ಮೋದಿಯವರಿಗೆ ಕೈ ಮುಗಿದು ನಮಸ್ಕಾರ ಮಾಡಿ, ಅವರು ವೇದ ಮಂತ್ರಗಳನ್ನು ಪಠಿಸುವುದನ್ನು ಕಾಣಬಹುದು.

ಇದನ್ನೂ ಓದಿ
Image
ಮತದಾರರಿಗೆ ಗುಡ್ ನ್ಯೂಸ್; ಹದಿನೈದೇ ದಿನದಲ್ಲಿ ಸಿಗಲಿದೆ ವೋಟರ್ ಐಡಿ
Image
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
Image
ಗುಜರಾತ್​​ನಲ್ಲಿ ಭಾರೀ ಮಳೆಯಿಂದ 48 ಗಂಟೆಗಳಲ್ಲಿ 22 ಜನ ಸಾವು
Image
ಭಾರತ ಎಂದೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಬಯಸಿಲ್ಲ: ಮೋದಿ

ಇದನ್ನೂ ಓದಿ: ತಪ್ಪು ತಿಳೀಬೇಡಿ ನಿಮ್ಮ ಸಹಕಾರ ಬೇಕು ಆದ್ರೆ ಮಧ್ಯಸ್ಥಿಕೆ ಬೇಡ: ಟ್ರಂಪ್​ಗೆ ಮೋದಿ ಹೇಳಿದ್ದೇನು?

ಈ ಬಗ್ಗೆ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಸಂಸ್ಕೃತಿಯ ಬಂಧಗಳು ಬಲವಾದವು ಮತ್ತು ರೋಮಾಂಚಕವಾದುದು! ಜಾಗ್ರೆಬ್‌ನಲ್ಲಿ ನನಗೆ ದೊರೆತ ಸ್ವಾಗತದ ಒಂದು ಭಾಗ ಇಲ್ಲಿದೆ. ಕ್ರೊಯೇಷಿಯಾದಲ್ಲಿ ಭಾರತೀಯ ಸಂಸ್ಕೃತಿಗೆ ಇಷ್ಟೊಂದು ಗೌರವವಿದೆ ಎಂದು ನೋಡಿ ಸಂತೋಷವಾಯಿತು” ಎಂದು ಪೋಸ್ಟ್ ಮಾಡುವ ಮೂಲಕ ಅವರು ಎಕ್ಸ್​ನಲ್ಲಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಈ ವೀಡಿಯೊವನ್ನು ಪೋಸ್ಟ್ ಮಾಡಿದ ಅರ್ಧ ಗಂಟೆಗಿಂತ ಕಡಿಮೆ ಅವಧಿಯಲ್ಲಿ 1.6 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

ಇದೇ ವೇಳೆ ಪ್ರಧಾನಿ ಮೋದಿ ಅವರ ಮುಂದೆ ಕ್ರೊಯೇಷಿಯಾದ ಪ್ರಜೆಗಳು ಕಥಕ್ ಪ್ರದರ್ಶಿಸಿ ಸ್ವಾಗತಿಸಿದ್ದಾರೆ. ಇದಾದ ನಂತರ, ಪ್ರಧಾನಿ ಮೋದಿ ಅವರು ತಂಗಿರುವ ಹೋಟೆಲ್‌ ಹೊರಗೆ ಪ್ರಧಾನಿ ಮೋದಿ ಅವರನ್ನು ದೇಶದಲ್ಲಿನ ಭಾರತೀಯ ವಲಸಿಗರು “ವಂದೇ ಮಾತರಂ” ಮತ್ತು “ಭಾರತ್ ಮಾತಾ ಕಿ ಜೈ” ಘೋಷಣೆಗಳೊಂದಿಗೆ ಸ್ವಾಗತಿಸಿದರು.

ಇದನ್ನೂ ಓದಿ: Israel-Iran Conflict: ಇರಾನ್ ಶರಣಾಗುವುದಿಲ್ಲ, ಅಮೆರಿಕ ಮಧ್ಯಪ್ರವೇಶಿಸಿದರೆ ದೊಡ್ಡ ಹಾನಿಯಾಗುತ್ತದೆ; ಟ್ರಂಪ್‌ಗೆ ಖಮೇನಿ ಎಚ್ಚರಿಕೆ

ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಅಂತಿಮ ಹಂತವಾಗಿ ಕ್ರೊಯೇಷಿಯಾದ ಜಾಗ್ರೆಬ್‌ನಲ್ಲಿರುವ ಹೋಟೆಲ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಭಾರತೀಯ ವಲಸಿಗರ ಜೊತೆ ಸಂವಾದ ನಡೆಸಿದರು. ಕಥಕ್ ಕಲಾವಿದರು ಪ್ರಧಾನಿ ಮೋದಿ ಅವರ ಮುಂದೆ ಭಾರತದ ಶಾಸ್ತ್ರೀಯ ನೃತ್ಯ ಪ್ರಕಾರದ ಲಯಗಳೊಂದಿಗೆ ಪ್ರದರ್ಶನ ನೀಡಿದರು. ಕೆನಡಾದಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ್ದ ಮೋದಿ ಅದಕ್ಕೂ ಮೊದಲು ಸೈಪ್ರಸ್​ಗೆ ಭೇಟಿ ನೀಡಿದ್ದರು. ಇಂದು ಅವರು ಕ್ರೊಯೇಷಿಯಾಕ್ಕೆ ಭೇಟಿ ನೀಡಿದ್ದಾರೆ.

ಕ್ರೊಯೇಷಿಯಾಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು. ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಮತ್ತು ಸಹಕಾರದ ಹೊಸ ಕ್ಷೇತ್ರಗಳನ್ನು ಅನ್ವೇಷಿಸುವ ಗುರಿಯನ್ನು ಹೊಂದಿರುವ ಈ ಭೇಟಿಯನ್ನು ಭಾರತ-ಕ್ರೊಯೇಷಿಯಾ ಸಂಬಂಧಗಳಲ್ಲಿ ಪ್ರಮುಖ ಮೈಲಿಗಲ್ಲು ಎಂದು ಶ್ಲಾಘಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರು ಕ್ರೊಯೇಷಿಯಾದ ಪ್ರಧಾನಿ ಆಂಡ್ರೆಜ್ ಪ್ಲೆಂಕೋವಿಕ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ ಮತ್ತು ಅಧ್ಯಕ್ಷ ಜೋರನ್ ಮಿಲನೋವಿಕ್ ಅವರನ್ನು ಭೇಟಿ ಮಾಡಲಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:12 pm, Wed, 18 June 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!