AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರ್ಸಾ ಮುಂಡಾ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಭೋಪಾಲ್​ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ; ಸರ್ಕಾರದಿಂದ 23 ಕೋಟಿ ರೂ.ಖರ್ಚು

ನವೆಂಬರ್​ 15ರಂದು ನಡೆಯಲಿರುವ ಜನಜಾತೀಯ ಗೌರವ ದಿವಸ್​ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದು, ಅವರು ಅಂದು ಭೋಪಾಲ್​​ನಲ್ಲಿ ನಾಲ್ಕು ತಾಸುಗಳ ಕಾಲ ಇರಲಿದ್ದಾರೆ.

ಬಿರ್ಸಾ ಮುಂಡಾ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಭೋಪಾಲ್​ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ; ಸರ್ಕಾರದಿಂದ 23 ಕೋಟಿ ರೂ.ಖರ್ಚು
ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Nov 13, 2021 | 12:03 PM

Share

ಭೋಪಾಲ್​: ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಅಂದರೆ ನವೆಂಬರ್​ 15ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್​ 15ರಂದು ಭಗವಾನ್​ ಬಿರ್ಸಾ ಮುಂಡಾ ಸ್ಮರಣಾರ್ಥ ಜನಜಾತೀಯ ಗೌರವ ದಿವಸ್​ ಆಚರಣೆ ನಡೆಯಲಿದ್ದು, ಆ ವಾರವನ್ನೆಲ್ಲ ಬುಡಕಟ್ಟು ಜನಾಂಗದವರ ವಾರವೆಂದು ಪರಿಗಣಿಸಲಾಗುವುದು. ಮುಂಡಾ ಬುಡಕಟ್ಟು ಜನಾಂಗಕ್ಕೆ ಸೇರಿದ, ಸ್ವಾತಂತ್ರ್ಯ ಹೋರಾಟಗಾರರಾಗಿರುವ ಬಿರ್ಸಾ ಮುಂಡಾ ಹುಟ್ಟಿದ್ದು 1875ರ ನವೆಂಬರ್​ 15ರಂದು. ಅವರ ಜನ್ಮ ಜಯಂತಿಯನ್ನು ಬುಡಕಟ್ಟು ಜನಾಂಗಕ್ಕೆ ಗೌರವ ಸಲ್ಲಿಸಲು ಮುಡಿಪಾಗಿಡಲಾಗಿದೆ. ತನ್ನಿಮಿತ್ತ ನವೆಂಬರ್​ 15ರಿಂದ 22ರವರೆಗೂ ಬುಡಕಟ್ಟು ಹೆಮ್ಮೆಯ ವಾರವೆಂದು ಆಚರಿಸಲಾಗುತ್ತಿದೆ. 

ನವೆಂಬರ್​ 15ರಂದು ನಡೆಯಲಿರುವ ಜನಜಾತೀಯ ಗೌರವ ದಿವಸ್​ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದು, ಅವರು ಅಂದು ಭೋಪಾಲ್​​ನಲ್ಲಿ ನಾಲ್ಕು ತಾಸುಗಳ ಕಾಲ ಇರಲಿದ್ದಾರೆ. ಜಂಬೂರಿ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬುಡಕಟ್ಟು ಜನಾಂಗದ ಸುಮಾರು 2 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಂದ ಹಾಗೆ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸುಗಳ ಕಾಲ ವೇದಿಕೆಯ ಮೇಲೆ ಇರಲಿದ್ದಾರೆ. ವೇದಿಕೆ ಮೇಲೆ ಐದು ಗುಮ್ಮಟಗಳನ್ನು ನಿರ್ಮಿಸಲಾಗುತ್ತಿದೆ.  ಈ ಕಾರ್ಯಕ್ರಮಕ್ಕಾಗಿ ಮಧ್ಯಪ್ರದೇಶ ಸರ್ಕಾರ ಬರೋಬ್ಬರಿ 23 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಅದರಲ್ಲೂ ಜನರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರಲೆಂದೇ ಸುಮಾರು 12 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ ಎಂದೂ ಹೇಳಲಾಗಿದೆ.  ಈ ಕಾರ್ಯಕ್ರಮದ ಸಿದ್ಧತೆಗಾಗಿ ಸುಮಾರು 300 ಕೆಲಸಗಾರರು ಕಾರ್ಯನಿರತರಾಗಿದ್ದಾರೆ. ಅತ್ಯಂತ ಹೆಚ್ಚು ಬುಡಕಟ್ಟು ಸಮುದಾಯದ ಜನರನ್ನು ಒಳಗೊಂಡ ರಾಜ್ಯ ಮಧ್ಯಪ್ರದೇಶವಾಗಿದ್ದು, ಈ ಕಾರ್ಯಕ್ರಮದಲ್ಲಿ 52 ಜಿಲ್ಲೆಗಳಿಂದ ಜನರು ಆಗಮಿಸಲಿದ್ದಾರೆ. ವೇದಿಕೆಯ ಮೇಲೆ ಗುಮ್ಮಟ ನಿರ್ಮಾಣಕ್ಕಾಗಿಯೇ 9 ಕೋಟಿ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಲಾಗಿದೆ.

ನವೆಂಬರ್​ 15ರಂದು ಮಧ್ಯಾಹ್ನ 12.30ರ ಹೊತ್ತಿಗೆ ಪ್ರಧಾನಿ ನರೇಂದ್ರ ಮೋದಿ ಭೋಪಾಲ್​ ತಲುಪಲಿದ್ದಾರೆ. 1.10ರಿಂದ 2.25ರವರೆಗೆ ಅವರು ಜಂಬೂರಿ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಇರಲಿದ್ದಾರೆ. ನಂತರ 3.10ಕ್ಕೆ ವಿಶ್ವದರ್ಜೆಯ ಹಬೀಬ್‌ಗಂಜ್ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಪಿಪಿಪಿ ಯೋಜನೆ (ಸಾರ್ವಜನಿಕ ಖಾಸಗಿ ಸಹಭಾಗಿತ್ವ)ಯಡಿ ನಿರ್ಮಾಣವಾದ ದೇಶದ ಮೊದಲ ರೈಲ್ವೆ ಸ್ಟೇಶನ್​ ಇದಾಗಿದ್ದು, 450 ಕೋಟಿ ರೂಪಾಯಿ ವೆಚ್ಚ ತಗುಲಿದೆ. ಈ ರೈಲು ನಿಲ್ದಾಣಕ್ಕೆ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಹೆಸರಿಡಬೇಕು ಎಂಬುದು ಬಹುತೇಕ ಬಿಜೆಪಿ ನಾಯಕರ ಬೇಡಿಕೆಯಾಗಿದೆ. ಈ ಕಾರ್ಯಕ್ರಮ ಆದ ಬಳಿಕ ಸಂಜೆ 4.20ರ ಹೊತ್ತಿಗೆ ರಾಜಾ ಭೋಜ್​ ಏರ್​ಪೋರ್ಟ್​​ನಿಂದ ದೆಹಲಿಗೆ ತೆರಳಲಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ ಕಣ್ಣುಗಳು ಇನ್ನೂ ಹತ್ತು ಜನಕ್ಕೆ ದೃಷ್ಟಿ ನೀಡುವ ಸಾಧ್ಯತೆ; ನಾರಾಯಣ ನೇತ್ರಾಲಯದಿಂದ ವಿನೂತನ ಪ್ರಯೋಗ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ