AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರ್ಸಾ ಮುಂಡಾ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಭೋಪಾಲ್​ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ; ಸರ್ಕಾರದಿಂದ 23 ಕೋಟಿ ರೂ.ಖರ್ಚು

ನವೆಂಬರ್​ 15ರಂದು ನಡೆಯಲಿರುವ ಜನಜಾತೀಯ ಗೌರವ ದಿವಸ್​ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದು, ಅವರು ಅಂದು ಭೋಪಾಲ್​​ನಲ್ಲಿ ನಾಲ್ಕು ತಾಸುಗಳ ಕಾಲ ಇರಲಿದ್ದಾರೆ.

ಬಿರ್ಸಾ ಮುಂಡಾ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಭೋಪಾಲ್​ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ; ಸರ್ಕಾರದಿಂದ 23 ಕೋಟಿ ರೂ.ಖರ್ಚು
ನರೇಂದ್ರ ಮೋದಿ
TV9 Web
| Edited By: |

Updated on: Nov 13, 2021 | 12:03 PM

Share

ಭೋಪಾಲ್​: ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಅಂದರೆ ನವೆಂಬರ್​ 15ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್​ 15ರಂದು ಭಗವಾನ್​ ಬಿರ್ಸಾ ಮುಂಡಾ ಸ್ಮರಣಾರ್ಥ ಜನಜಾತೀಯ ಗೌರವ ದಿವಸ್​ ಆಚರಣೆ ನಡೆಯಲಿದ್ದು, ಆ ವಾರವನ್ನೆಲ್ಲ ಬುಡಕಟ್ಟು ಜನಾಂಗದವರ ವಾರವೆಂದು ಪರಿಗಣಿಸಲಾಗುವುದು. ಮುಂಡಾ ಬುಡಕಟ್ಟು ಜನಾಂಗಕ್ಕೆ ಸೇರಿದ, ಸ್ವಾತಂತ್ರ್ಯ ಹೋರಾಟಗಾರರಾಗಿರುವ ಬಿರ್ಸಾ ಮುಂಡಾ ಹುಟ್ಟಿದ್ದು 1875ರ ನವೆಂಬರ್​ 15ರಂದು. ಅವರ ಜನ್ಮ ಜಯಂತಿಯನ್ನು ಬುಡಕಟ್ಟು ಜನಾಂಗಕ್ಕೆ ಗೌರವ ಸಲ್ಲಿಸಲು ಮುಡಿಪಾಗಿಡಲಾಗಿದೆ. ತನ್ನಿಮಿತ್ತ ನವೆಂಬರ್​ 15ರಿಂದ 22ರವರೆಗೂ ಬುಡಕಟ್ಟು ಹೆಮ್ಮೆಯ ವಾರವೆಂದು ಆಚರಿಸಲಾಗುತ್ತಿದೆ. 

ನವೆಂಬರ್​ 15ರಂದು ನಡೆಯಲಿರುವ ಜನಜಾತೀಯ ಗೌರವ ದಿವಸ್​ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದು, ಅವರು ಅಂದು ಭೋಪಾಲ್​​ನಲ್ಲಿ ನಾಲ್ಕು ತಾಸುಗಳ ಕಾಲ ಇರಲಿದ್ದಾರೆ. ಜಂಬೂರಿ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬುಡಕಟ್ಟು ಜನಾಂಗದ ಸುಮಾರು 2 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಂದ ಹಾಗೆ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸುಗಳ ಕಾಲ ವೇದಿಕೆಯ ಮೇಲೆ ಇರಲಿದ್ದಾರೆ. ವೇದಿಕೆ ಮೇಲೆ ಐದು ಗುಮ್ಮಟಗಳನ್ನು ನಿರ್ಮಿಸಲಾಗುತ್ತಿದೆ.  ಈ ಕಾರ್ಯಕ್ರಮಕ್ಕಾಗಿ ಮಧ್ಯಪ್ರದೇಶ ಸರ್ಕಾರ ಬರೋಬ್ಬರಿ 23 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಅದರಲ್ಲೂ ಜನರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರಲೆಂದೇ ಸುಮಾರು 12 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ ಎಂದೂ ಹೇಳಲಾಗಿದೆ.  ಈ ಕಾರ್ಯಕ್ರಮದ ಸಿದ್ಧತೆಗಾಗಿ ಸುಮಾರು 300 ಕೆಲಸಗಾರರು ಕಾರ್ಯನಿರತರಾಗಿದ್ದಾರೆ. ಅತ್ಯಂತ ಹೆಚ್ಚು ಬುಡಕಟ್ಟು ಸಮುದಾಯದ ಜನರನ್ನು ಒಳಗೊಂಡ ರಾಜ್ಯ ಮಧ್ಯಪ್ರದೇಶವಾಗಿದ್ದು, ಈ ಕಾರ್ಯಕ್ರಮದಲ್ಲಿ 52 ಜಿಲ್ಲೆಗಳಿಂದ ಜನರು ಆಗಮಿಸಲಿದ್ದಾರೆ. ವೇದಿಕೆಯ ಮೇಲೆ ಗುಮ್ಮಟ ನಿರ್ಮಾಣಕ್ಕಾಗಿಯೇ 9 ಕೋಟಿ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಲಾಗಿದೆ.

ನವೆಂಬರ್​ 15ರಂದು ಮಧ್ಯಾಹ್ನ 12.30ರ ಹೊತ್ತಿಗೆ ಪ್ರಧಾನಿ ನರೇಂದ್ರ ಮೋದಿ ಭೋಪಾಲ್​ ತಲುಪಲಿದ್ದಾರೆ. 1.10ರಿಂದ 2.25ರವರೆಗೆ ಅವರು ಜಂಬೂರಿ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಇರಲಿದ್ದಾರೆ. ನಂತರ 3.10ಕ್ಕೆ ವಿಶ್ವದರ್ಜೆಯ ಹಬೀಬ್‌ಗಂಜ್ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಪಿಪಿಪಿ ಯೋಜನೆ (ಸಾರ್ವಜನಿಕ ಖಾಸಗಿ ಸಹಭಾಗಿತ್ವ)ಯಡಿ ನಿರ್ಮಾಣವಾದ ದೇಶದ ಮೊದಲ ರೈಲ್ವೆ ಸ್ಟೇಶನ್​ ಇದಾಗಿದ್ದು, 450 ಕೋಟಿ ರೂಪಾಯಿ ವೆಚ್ಚ ತಗುಲಿದೆ. ಈ ರೈಲು ನಿಲ್ದಾಣಕ್ಕೆ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಹೆಸರಿಡಬೇಕು ಎಂಬುದು ಬಹುತೇಕ ಬಿಜೆಪಿ ನಾಯಕರ ಬೇಡಿಕೆಯಾಗಿದೆ. ಈ ಕಾರ್ಯಕ್ರಮ ಆದ ಬಳಿಕ ಸಂಜೆ 4.20ರ ಹೊತ್ತಿಗೆ ರಾಜಾ ಭೋಜ್​ ಏರ್​ಪೋರ್ಟ್​​ನಿಂದ ದೆಹಲಿಗೆ ತೆರಳಲಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ ಕಣ್ಣುಗಳು ಇನ್ನೂ ಹತ್ತು ಜನಕ್ಕೆ ದೃಷ್ಟಿ ನೀಡುವ ಸಾಧ್ಯತೆ; ನಾರಾಯಣ ನೇತ್ರಾಲಯದಿಂದ ವಿನೂತನ ಪ್ರಯೋಗ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ