AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ಜವಾಹರ್​ ಲಾಲ್​ ನೆಹರೂ ಜನ್ಮಜಯಂತಿ; ಒಂದೇ ಸಾಲಿನಲ್ಲಿ ಟ್ವೀಟ್​ ಮಾಡಿ ಸ್ಮರಿಸಿದ ಪ್ರಧಾನಿ ಮೋದಿ

ನೆಹರೂ ಅವರನ್ನು ಮಕ್ಕಳು ಪ್ರೀತಿಯಿಂದ ಚಾಚಾ ನೆಹರೂ ಎಂದೇ ಕರೆಯುತ್ತಿದ್ದರು. ಅವರಿಗೂ ಮಕ್ಕಳೆಂದರೆ ತುಂಬ ಅಚ್ಚುಮೆಚ್ಚಾಗಿತ್ತು. ಇದೇ ಕಾರಣಕ್ಕೆ ಅವರ ಜನ್ಮದಿನವನ್ನು ಭಾರತದಲ್ಲಿ ಬಾಲ ದಿವಸ್​ ಅಥವಾ ಮಕ್ಕಳ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ.

ಮಾಜಿ ಪ್ರಧಾನಿ ಜವಾಹರ್​ ಲಾಲ್​ ನೆಹರೂ ಜನ್ಮಜಯಂತಿ; ಒಂದೇ ಸಾಲಿನಲ್ಲಿ ಟ್ವೀಟ್​ ಮಾಡಿ ಸ್ಮರಿಸಿದ ಪ್ರಧಾನಿ ಮೋದಿ
ಜವಾಹರ್​ಲಾಲ್​ ನೆಹರೂರನ್ನು ಸ್ಮರಿಸಿದ ಪ್ರಧಾನಿ ಮೋದಿ
TV9 Web
| Edited By: |

Updated on: Nov 14, 2021 | 12:31 PM

Share

ದೆಹಲಿ: ಇಂದು ನವೆಂಬರ್​ 14. ಸ್ವತಂತ್ರ ಭಾರತದ ಮೊದಲ, ಮಾಜಿ ಪ್ರಧಾನಿ ಜವಾಹರ್​ಲಾಲ್​ ನೆಹರೂ (Jawaharlal Nehru) ಅವರ ಜನ್ಮದಿನದ ನಿಮಿತ್ತ ರಾಷ್ಟ್ರಾದ್ಯಂತ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ಬಾರಿ ಜವಾಹರ್​ಲಾಲ್​ ನೆಹರೂ ಅವರ 132ನೇ ಜನ್ಮಜಯಂತಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ನೆಹರೂ ಅವರನ್ನು ಸ್ಮರಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಮಂತ್ರಿ, ಪಂಡಿತ್​ ಜವಾಹರ್​ಲಾಲ್​ ನೆಹರೂ ಜನ್ಮದಿನದಂದು ಅವರಿಗೆ ನಮನಗಳು ಎಂದು ಹೇಳಿದ್ದಾರೆ.   

ನೆಹರೂ ಅವರನ್ನು ಮಕ್ಕಳು ಪ್ರೀತಿಯಿಂದ ಚಾಚಾ ನೆಹರೂ ಎಂದೇ ಕರೆಯುತ್ತಿದ್ದರು. ಅವರಿಗೂ ಮಕ್ಕಳೆಂದರೆ ತುಂಬ ಅಚ್ಚುಮೆಚ್ಚಾಗಿತ್ತು. ಇದೇ ಕಾರಣಕ್ಕೆ ಅವರ ಜನ್ಮದಿನವನ್ನು ಭಾರತದಲ್ಲಿ ಬಾಲ ದಿವಸ್​ ಅಥವಾ ಮಕ್ಕಳ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ. ಇಂದು ಅವರ ಜನ್ಮದಿನದಂದು ಕಾಂಗ್ರೆಸ್ ಅಧ್ಯಕ್ಷೆ ದೆಹಲಿಯಲ್ಲಿರುವ ಶಾಂತಿವನದಲ್ಲಿ ನೆಹರೂ ಅವರಿಗೆ ಪುಷ್ಪನಮನ ಸಲ್ಲಿಸಿದರು. ಹಲವು ಕಾಂಗ್ರೆಸ್ ಮುಖಂಡರೂ ಕೂಡ ನೆಹರೂರವರನ್ನು ಸ್ಮರಿಸಿದ್ದಾರೆ. ಜವಾಹರ್​ ಲಾಲ್​ ನೆಹರೂ ಸ್ವತಂತ್ರ ಭಾರತದ ಮೊದಲ ಪ್ರಧಾನಿ. 1889ರ ನವೆಂಬರ್​ 14ರಂದು ಉತ್ತರಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಜನಿಸಿದ್ದಾರೆ.  1947ರ ಅಗಸ್ಟ್​ 15ರಂದು ಪ್ರಧಾನಿ ಹುದ್ದೆಗೆ ಏರಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, 1964ರ ಮೇ 27ರಂದು ಮೃತಪಟ್ಟಿದ್ದಾರೆ.

1954ರಲ್ಲಿ ವಿಶ್ವಸಂಸ್ಥೆ ನವೆಂಬರ್​ 20ರಂದು ವಿಶ್ವ ಮಕ್ಕಳ ದಿನವನ್ನಾಗಿ ಆಚರಿಸಲಾಗುವುದು ಎಂದು ಘೋಷಿಸಿತು. ಅದರಂತೆ ಭಾರತದಲ್ಲೂ 1964ರವರೆಗೆ ಪ್ರತಿವರ್ಷ ನವೆಂಬರ್​ 20ರಂದು ಮಕ್ಕಳ ದಿನ ಆಚರಿಸಲಾಗುತ್ತಿತ್ತು. ಆದರೆ ನೆಹರೂ ಮೃತರಾದ ಬಳಿಕ ಅಂದರೆ 1964ರ ನಂತರ, ಅವರ ಜನ್ಮದಿನದಂದೇ ಭಾರತದಲ್ಲಿ ಮಕ್ಕಳ ದಿನ ಆಚರಿಸಲು ಸಂಸತ್ತಿನಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಇದನ್ನೂ ಓದಿ: ಫಿಟ್ನೆಸ್​ ಹೇಳಿಕೊಡ್ತೀವಿ ಅಂತ 1.5 ಕೋಟಿ ರೂ. ಮೋಸ ಮಾಡಿದ ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ? ಕೇಸ್​ ದಾಖಲು

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ