AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ಜವಾಹರ್​ ಲಾಲ್​ ನೆಹರೂ ಜನ್ಮಜಯಂತಿ; ಒಂದೇ ಸಾಲಿನಲ್ಲಿ ಟ್ವೀಟ್​ ಮಾಡಿ ಸ್ಮರಿಸಿದ ಪ್ರಧಾನಿ ಮೋದಿ

ನೆಹರೂ ಅವರನ್ನು ಮಕ್ಕಳು ಪ್ರೀತಿಯಿಂದ ಚಾಚಾ ನೆಹರೂ ಎಂದೇ ಕರೆಯುತ್ತಿದ್ದರು. ಅವರಿಗೂ ಮಕ್ಕಳೆಂದರೆ ತುಂಬ ಅಚ್ಚುಮೆಚ್ಚಾಗಿತ್ತು. ಇದೇ ಕಾರಣಕ್ಕೆ ಅವರ ಜನ್ಮದಿನವನ್ನು ಭಾರತದಲ್ಲಿ ಬಾಲ ದಿವಸ್​ ಅಥವಾ ಮಕ್ಕಳ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ.

ಮಾಜಿ ಪ್ರಧಾನಿ ಜವಾಹರ್​ ಲಾಲ್​ ನೆಹರೂ ಜನ್ಮಜಯಂತಿ; ಒಂದೇ ಸಾಲಿನಲ್ಲಿ ಟ್ವೀಟ್​ ಮಾಡಿ ಸ್ಮರಿಸಿದ ಪ್ರಧಾನಿ ಮೋದಿ
ಜವಾಹರ್​ಲಾಲ್​ ನೆಹರೂರನ್ನು ಸ್ಮರಿಸಿದ ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on: Nov 14, 2021 | 12:31 PM

Share

ದೆಹಲಿ: ಇಂದು ನವೆಂಬರ್​ 14. ಸ್ವತಂತ್ರ ಭಾರತದ ಮೊದಲ, ಮಾಜಿ ಪ್ರಧಾನಿ ಜವಾಹರ್​ಲಾಲ್​ ನೆಹರೂ (Jawaharlal Nehru) ಅವರ ಜನ್ಮದಿನದ ನಿಮಿತ್ತ ರಾಷ್ಟ್ರಾದ್ಯಂತ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ಬಾರಿ ಜವಾಹರ್​ಲಾಲ್​ ನೆಹರೂ ಅವರ 132ನೇ ಜನ್ಮಜಯಂತಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ನೆಹರೂ ಅವರನ್ನು ಸ್ಮರಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಮಂತ್ರಿ, ಪಂಡಿತ್​ ಜವಾಹರ್​ಲಾಲ್​ ನೆಹರೂ ಜನ್ಮದಿನದಂದು ಅವರಿಗೆ ನಮನಗಳು ಎಂದು ಹೇಳಿದ್ದಾರೆ.   

ನೆಹರೂ ಅವರನ್ನು ಮಕ್ಕಳು ಪ್ರೀತಿಯಿಂದ ಚಾಚಾ ನೆಹರೂ ಎಂದೇ ಕರೆಯುತ್ತಿದ್ದರು. ಅವರಿಗೂ ಮಕ್ಕಳೆಂದರೆ ತುಂಬ ಅಚ್ಚುಮೆಚ್ಚಾಗಿತ್ತು. ಇದೇ ಕಾರಣಕ್ಕೆ ಅವರ ಜನ್ಮದಿನವನ್ನು ಭಾರತದಲ್ಲಿ ಬಾಲ ದಿವಸ್​ ಅಥವಾ ಮಕ್ಕಳ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ. ಇಂದು ಅವರ ಜನ್ಮದಿನದಂದು ಕಾಂಗ್ರೆಸ್ ಅಧ್ಯಕ್ಷೆ ದೆಹಲಿಯಲ್ಲಿರುವ ಶಾಂತಿವನದಲ್ಲಿ ನೆಹರೂ ಅವರಿಗೆ ಪುಷ್ಪನಮನ ಸಲ್ಲಿಸಿದರು. ಹಲವು ಕಾಂಗ್ರೆಸ್ ಮುಖಂಡರೂ ಕೂಡ ನೆಹರೂರವರನ್ನು ಸ್ಮರಿಸಿದ್ದಾರೆ. ಜವಾಹರ್​ ಲಾಲ್​ ನೆಹರೂ ಸ್ವತಂತ್ರ ಭಾರತದ ಮೊದಲ ಪ್ರಧಾನಿ. 1889ರ ನವೆಂಬರ್​ 14ರಂದು ಉತ್ತರಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಜನಿಸಿದ್ದಾರೆ.  1947ರ ಅಗಸ್ಟ್​ 15ರಂದು ಪ್ರಧಾನಿ ಹುದ್ದೆಗೆ ಏರಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, 1964ರ ಮೇ 27ರಂದು ಮೃತಪಟ್ಟಿದ್ದಾರೆ.

1954ರಲ್ಲಿ ವಿಶ್ವಸಂಸ್ಥೆ ನವೆಂಬರ್​ 20ರಂದು ವಿಶ್ವ ಮಕ್ಕಳ ದಿನವನ್ನಾಗಿ ಆಚರಿಸಲಾಗುವುದು ಎಂದು ಘೋಷಿಸಿತು. ಅದರಂತೆ ಭಾರತದಲ್ಲೂ 1964ರವರೆಗೆ ಪ್ರತಿವರ್ಷ ನವೆಂಬರ್​ 20ರಂದು ಮಕ್ಕಳ ದಿನ ಆಚರಿಸಲಾಗುತ್ತಿತ್ತು. ಆದರೆ ನೆಹರೂ ಮೃತರಾದ ಬಳಿಕ ಅಂದರೆ 1964ರ ನಂತರ, ಅವರ ಜನ್ಮದಿನದಂದೇ ಭಾರತದಲ್ಲಿ ಮಕ್ಕಳ ದಿನ ಆಚರಿಸಲು ಸಂಸತ್ತಿನಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಇದನ್ನೂ ಓದಿ: ಫಿಟ್ನೆಸ್​ ಹೇಳಿಕೊಡ್ತೀವಿ ಅಂತ 1.5 ಕೋಟಿ ರೂ. ಮೋಸ ಮಾಡಿದ ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ? ಕೇಸ್​ ದಾಖಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ