AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann ki Baat: ಪ್ರಧಾನಿ ನರೇಂದ್ರ ಮೋದಿಯವರ ಮನದ ಮಾತು ಇಂದು ಬೆಳಗ್ಗೆ 11ಕ್ಕೆ ಪ್ರಸಾರ

ಪ್ರಧಾನ ಮಂತ್ರಿಯವರ ಮಾಸಿಕ ರೇಡಿಯೋ ಪ್ರಸಾರ 'ಮನ್ ಕೀ ಬಾತ್' ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ. ಕಾರ್ಯಕ್ರಮವನ್ನು AIR ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್‌ನಲ್ಲಿ ಮತ್ತು ಎಐಆರ್ ನ್ಯೂಸ್ ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.

Mann ki Baat: ಪ್ರಧಾನಿ ನರೇಂದ್ರ ಮೋದಿಯವರ ಮನದ ಮಾತು ಇಂದು ಬೆಳಗ್ಗೆ 11ಕ್ಕೆ ಪ್ರಸಾರ
ನರೇಂದ್ರ ಮೋದಿ
TV9 Web
| Edited By: |

Updated on:Feb 27, 2022 | 10:23 AM

Share

ದೆಹಲಿ: ಏಳು ಹಂತದ ಉತ್ತರ ಪ್ರದೇಶ ಚುನಾವಣೆ ಮತ್ತು ಉಕ್ರೇನ್‌ನಲ್ಲಿ ರಷ್ಯಾ ಆಕ್ರಮಣ ನಡೆಸುತ್ತಿರುವ ಹೊತ್ತಲ್ಲಿ ‘ಮನ್ ಕೀ ಬಾತ್’ (Mann Ki Baat) ಕಾರ್ಯಕ್ರಮದ 86 ನೇ ಆವೃತ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 13 ರಂದು, ಪ್ರಧಾನಿ ಮೋದಿ ತಮ್ಮ ಕಾರ್ಯಕ್ರಮಕ್ಕಾಗಿ ಸಲಹೆಗಳನ್ನು ಕೇಳಿದ್ದರು. ಈ ತಿಂಗಳ ‘ಮನ್ ಕೀ ಬಾತ್’ ಕಾರ್ಯಕ್ರಮವು ಫೆಬ್ರವರಿ 27 ರಂದು ನಡೆಯಲಿದೆ. ಮೊದಲಿನಂತೆ ನಿಮ್ಮ ಸಲಹೆಗಳಿಗಾಗಿ ನಾನು ಉತ್ಸುಕನಾಗಿದ್ದೇನೆ. ಅವುಗಳನ್ನು MyGov, NaMo ಅಪ್ಲಿಕೇಶನ್‌ನಲ್ಲಿ ಬರೆಯಿರಿ ಅಥವಾ 1800-11-7800 ಗೆ ಡಯಲ್ ಮಾಡಿ. ನಿಮ್ಮ ಸಂದೇಶವನ್ನು ರೆಕಾರ್ಡ್ ಮಾಡಿ ಎಂದು ಅವರು ಹೇಳಿದ್ದರು. ಪ್ರಧಾನ ಮಂತ್ರಿಯವರ ಮಾಸಿಕ ರೇಡಿಯೋ ಪ್ರಸಾರ ‘ಮನ್ ಕೀ ಬಾತ್’ ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ. ಕಾರ್ಯಕ್ರಮವನ್ನು AIR ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್‌ನಲ್ಲಿ ಮತ್ತು ಎಐಆರ್ ನ್ಯೂಸ್ ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಕಾರ್ಯಕ್ರಮದ ಮೊದಲ ಕಂತು ಅಕ್ಟೋಬರ್ 3, 2014 ರಂದು ಪ್ರಸಾರವಾಗಿತ್ತು.

ಜನವರಿ 30 ರಂದು ತಮ್ಮ ಕೊನೆಯ ಮನ್ ಕೀ ಬಾತ್‌ನಲ್ಲಿ, ಪ್ರಧಾನಿ ಮೋದಿ ಅವರು ಭ್ರಷ್ಟಾಚಾರವು ” ಗೆದ್ದಲಿನಂತಿದೆ” ಅದು ದೇಶವನ್ನು ಟೊಳ್ಳಾಗಿಸುತ್ತದೆ ಮತ್ತು ದೇಶದ ಎಲ್ಲಾ ಜನರು ಒಟ್ಟಾಗಿ ರಾಷ್ಟ್ರವನ್ನು ತೊಡೆದುಹಾಕಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.  ಒಂದು ಕೋಟಿಗೂ ಹೆಚ್ಚು ಮಕ್ಕಳು ತಮಗೆ ಅಂಚೆ ಕಾರ್ಡ್ ಕಳುಹಿಸಿದ್ದಾರೆ ಎಂದು ಪ್ರಧಾನಿ ಹೇಳಿದ್ದರು. ಈ ಪೋಸ್ಟ್‌ಕಾರ್ಡ್‌ಗಳು ದೇಶದ ಅನೇಕ ಭಾಗಗಳಿಂದ ಮತ್ತು ವಿದೇಶಗಳಿಂದಲೂ ಬಂದಿವೆ. “ಈ ಪೋಸ್ಟ್‌ಕಾರ್ಡ್‌ಗಳು ನಮ್ಮ ದೇಶದ ಭವಿಷ್ಯಕ್ಕಾಗಿ ನಮ್ಮ ಹೊಸ ಪೀಳಿಗೆಯ ವಿಶಾಲ ಮತ್ತು ಸಮಗ್ರ ದೃಷ್ಟಿಕೋನವನ್ನು ನೀಡುತ್ತವೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.

ಕೊವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಭಾರತದ ಹೋರಾಟವನ್ನು ಶ್ಲಾಘಿಸಿದ್ದ ಅವರು ಇದನ್ನು “ಮಹಾನ್ ಯಶಸ್ಸು” ಎಂದು ಕರೆದರು. “ಭಾರತವು ಹೊಸ ಕೊರೊನಾ ಅಲೆಯ ವಿರುದ್ಧ ಯಶಸ್ವಿಯಾಗಿ ಹೋರಾಡುತ್ತಿದೆ. ಇಲ್ಲಿಯವರೆಗೆ ಸುಮಾರು 4.5 ಕೋಟಿ ಮಕ್ಕಳು ಕೊರೊನಾ ಲಸಿಕೆ ತೆಗೆದುಕೊಂಡಿರುವುದು ಹೆಮ್ಮೆಯ ಸಂಗತಿ. ಇದರರ್ಥ 15-18 ವಯಸ್ಸಿನ ಸುಮಾರು 60 ಪ್ರತಿಶತ ಯುವಕರು ಕೇವಲ 3-4 ವಾರಗಳಲ್ಲಿ ಲಸಿಕೆಯನ್ನು ತೆಗೆದುಕೊಂಡರು. ಇದು ನಮ್ಮ ಯುವಕರನ್ನು ರಕ್ಷಿಸುವುದಲ್ಲದೆ, ಅವರ ಅಧ್ಯಯನವನ್ನು ಮುಂದುವರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆ ಸ್ಥಾಪನೆಯನ್ನು ಉಲ್ಲೇಖಿಸಿದ ಮೋದಿ, ಮತ್ತು ದೇಶಾದ್ಯಂತದ ಜನರು ಇದನ್ನು ಸ್ವಾಗತಿಸಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ ರೀತಿ “ಅವಿಸ್ಮರಣೀಯ” ಎಂದು ಹೇಳಿದರು.

ಇದನ್ನೂ ಓದಿ:ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ; ಮನೆಯೊಂದರಲ್ಲಿ ಸ್ಫೋಟ, ಇಬ್ಬರು ದುರ್ಮರಣ

Published On - 10:15 am, Sun, 27 February 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?