AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಗೆ ಮುನ್ನ ಸಾರ್ವಜನಿಕರ ಅಭಿಪ್ರಾಯ ಅರಿಯಲು ಜನ್​​ ಮನ್​​ ಸಮೀಕ್ಷೆ; ಭಾಗಿಯಾಗುವುದು ಹೇಗೆ?

ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕನ ದೃಷ್ಟಿಕೋನದ ಮಹತ್ವವನ್ನು ಒತ್ತಿಹೇಳುವ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಈ ಸಮೀಕ್ಷೆ ವ್ಯಕ್ತಿಗಳಿಗೆ ಅಧಿಕಾರ ನೀಡುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಜನ್ ಮನ್ ಸಮೀಕ್ಷೆಯಲ್ಲಿ ಭಾಗವಹಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಲೋಕಸಭೆ ಚುನಾವಣೆಗೆ ಮುನ್ನ ಸಾರ್ವಜನಿಕರ ಅಭಿಪ್ರಾಯ ಅರಿಯಲು ಜನ್​​ ಮನ್​​ ಸಮೀಕ್ಷೆ; ಭಾಗಿಯಾಗುವುದು ಹೇಗೆ?
ಜನ್ ಮನ್ ಸಮೀಕ್ಷೆ
ರಶ್ಮಿ ಕಲ್ಲಕಟ್ಟ
|

Updated on: Dec 19, 2023 | 7:02 PM

Share

ದೆಹಲಿ ಡಿಸೆಂಬರ್ 19: ಲೋಕಸಭೆ (Lok sabha) ಚುನಾವಣೆಗೆ ಮುನ್ನ  ಬಿಜೆಪಿ ಸರ್ಕಾರ ಮತ್ತು ಸಂಸದರ ಕಾರ್ಯಕ್ಷಮತೆಯಂತಹ ವಿಷಯಗಳ ಬಗ್ಗೆ ಸಾರ್ವಜನಿಕರು ಏನಂತಾರೆ ಎಂದು ಅರಿಯಲು  ಪ್ರಧಾನಿ ನರೇಂದ್ರ ಮೋದಿಯವರ (Narendra Modi) NaMo ಅಪ್ಲಿಕೇಶನ್ ಮಂಗಳವಾರ ಸಮೀಕ್ಷೆಯನ್ನು ಪ್ರಾರಂಭಿಸಿದೆ. ಜನ್ ಮನ್ ಸಮೀಕ್ಷೆಯ (Jan Man Survey) ಮೂಲಕ ಜನರು ಆಡಳಿತ ಮತ್ತು ನಾಯಕತ್ವದ ವಿವಿಧ ಅಂಶಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದು. ಪ್ರಶ್ನೆಗಳು ಕೇಂದ್ರ ಮಟ್ಟದ ಅಭಿವೃದ್ಧಿ ಮತ್ತು ಬಳಕೆದಾರರ ಕ್ಷೇತ್ರಕ್ಕೆ ಸಂಬಂಧಿಸಿದ ನಿರ್ದಿಷ್ಟ ವಿಷಯಗಳನ್ನು ಒಳಗೊಂಡಿವೆ.

ಸಮೀಕ್ಷೆಯು “ಆಸಕ್ತಿದಾಯಕ ಮತ್ತು ಗ್ಯಾಮಿಫೈಡ್” ಇಂಟರ್ಫೇಸ್ ಮೂಲಕ ಹಲವಾರು ಸಮಸ್ಯೆಗಳ ಮೇಲೆ “ಜನ್ ಮನ್ (ಸಾಮಾನ್ಯರ ಮನಸ್ಸು) ಅನ್ನು ನಿರ್ಣಯಿಸುವ ಗುರಿಯನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ. ಜನರು ತಮ್ಮ ಕ್ಷೇತ್ರಗಳಲ್ಲಿ ಇತರ ಜನಪ್ರಿಯ ನಾಯಕರನ್ನು ಗುರುತಿಸಲು ಸಹ ಇದು ಅನುಮತಿಸುತ್ತದೆ.

ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕನ ದೃಷ್ಟಿಕೋನದ ಮಹತ್ವವನ್ನು ಒತ್ತಿಹೇಳುವ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಈ ಸಮೀಕ್ಷೆ ವ್ಯಕ್ತಿಗಳಿಗೆ ಅಧಿಕಾರ ನೀಡುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ.

ಪ್ರಧಾನಿ ಮೋದಿ ಅವರು 2015 ರಲ್ಲಿ ಬಿಡುಗಡೆ ಮಾಡಿದ NaMO ಅಪ್ಲಿಕೇಶನ್‌ನಲ್ಲಿ ಭಾರತದ ಅಭಿವೃದ್ಧಿಯ ಪ್ರಯಾಣದ ಕುರಿತು ಅರ್ಥಪೂರ್ಣ ಚರ್ಚೆಯಲ್ಲಿ ನೇರವಾಗಿ ನಾಗರಿಕರೊಂದಿಗೆ ತೊಡಗಿಸಿಕೊಂಡಿದ್ದಾರೆ. ಈ ಅಪ್ಲಿಕೇಶನ್ ಪ್ರಧಾನ ಮಂತ್ರಿಯ ಎಲ್ಲಾ ಇತ್ತೀಚಿನ ದೈನಂದಿನ ಚಟುವಟಿಕೆಗಳ ಬಗ್ಗೆ ತಿಳಿದುಕೊಳ್ಳಲು ಒಂದು ಸ್ಟಾಪ್ ತಾಣವಾಗಿದೆ.

ಇದನ್ನೂ ಓದಿ: 1989ರ ದಾಖಲೆ ಮುರಿದ ಸಂಸದರ ಅಮಾನತು ಕ್ರಮ; 34 ವರ್ಷಗಳ ಇತಿಹಾಸ ಪುನರಾವರ್ತನೆ ಆಗಲಿದೆಯೇ?

ಭಾಗವಹಿಸುವುದು ಹೇಗೆ?

ಜನ್ ಮನ್ ಸಮೀಕ್ಷೆಯಲ್ಲಿ ಭಾಗವಹಿಸಲು, ನಾಗರಿಕರು NaMo ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ. ಲಾಗ್ ಇನ್ ಮಾಡಿ, ಅಭಿಪ್ರಾಯಗನ್ನು ಹಂಚಿಕೊಳ್ಳಬೇಕು. ಆಪ್ ಸ್ಟೋರ್‌ನಿಂದ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಅಥವಾ ಅಧಿಕೃತ ವೆಬ್‌ಸೈಟ್ nm-4.com/janmansurvey ಗೆ ಭೇಟಿ ನೀಡಬಹುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ