AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೆಸಿಡೆಂಟ್ ಆಫ್ ಭಾರತ್ ಬಳಿಕ ಪ್ರೈಮ್ ಮಿನಿಸ್ಟರ್ ಆಫ್ ಭಾರತ್: ಮೋದಿ ಪ್ರವಾಸದ ಕುರಿತು ಸಂಬಿತ್ ಪಾತ್ರಾ ಪೋಸ್ಟ್​

ಜಿ20 ಶೃಂಗಸಭೆಯ ಅತಿಥಿಗಳಿಗೆ ರಾಷ್ಟ್ರಪತಿ ಭವನದಿಂದ ಕಳುಹಿಸಲಾದ ಆಮಂತ್ರಣ ಪತ್ರಿಕೆಯಲ್ಲಿದ್ದ ಪ್ರೆಸಿಡೆಂಟ್ ಆಫ್ ಭಾರತ್ ಎಂಬ ಬರಹ ಬಹುದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿತ್ತು, ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ ಪ್ರವಾಸದ ದಾಖಲೆಯಲ್ಲಿ ಪ್ರೈಮ್ ಮಿನಿಸ್ಟರ್ ಆಫ್ ಭಾರತ್ ಎಂದು ಬರೆಯಲಾದ ಪೋಸ್ಟ್​ವೊಂದನ್ನು ಸಂಬಿತ್ ಪಾತ್ರ ಹಂಚಿಕೊಂಡಿದ್ದಾರೆ.

ಪ್ರೆಸಿಡೆಂಟ್ ಆಫ್ ಭಾರತ್ ಬಳಿಕ ಪ್ರೈಮ್ ಮಿನಿಸ್ಟರ್ ಆಫ್ ಭಾರತ್: ಮೋದಿ ಪ್ರವಾಸದ ಕುರಿತು ಸಂಬಿತ್ ಪಾತ್ರಾ ಪೋಸ್ಟ್​
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Sep 06, 2023 | 1:52 PM

Share

ಜಿ20 ಶೃಂಗಸಭೆಯ ಅತಿಥಿಗಳಿಗೆ ರಾಷ್ಟ್ರಪತಿ ಭವನದಿಂದ ಕಳುಹಿಸಲಾದ ಆಮಂತ್ರಣ ಪತ್ರಿಕೆಯಲ್ಲಿದ್ದ ಪ್ರೆಸಿಡೆಂಟ್ ಆಫ್ ಭಾರತ್ ಎಂಬ ಬರಹ ಬಹುದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿತ್ತು, ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ ಪ್ರವಾಸದ ದಾಖಲೆಯಲ್ಲಿ ಪ್ರೈಮ್ ಮಿನಿಸ್ಟರ್ ಆಫ್ ಭಾರತ್ ಎಂದು ಬರೆಯಲಾದ ಪೋಸ್ಟ್​ವೊಂದನ್ನು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹಂಚಿಕೊಂಡಿದ್ದಾರೆ.

ದಿ ಪ್ರೈಮ್ ಮಿನಿಸ್ಟರ್ ಆಫ್ ಭಾರತ್ ಎಂದು ತಮ್ಮ ಎಕ್ಸ್​ ಖಾತೆಯ ಪೋಸ್ಟ್​ನಲ್ಲಿ ಬರೆದುಕೊಂಡಿರುವ ಅವರು, ಮೋದಿ ಇಂಡೋನೇಷ್ಯಾ ಭೇಟಿ ಕುರಿತ ಅಧಿಕೃತ ಮಾಹಿತಿಯ ಆಮಂತ್ರಣ ಪತ್ರಿಕೆಯೊಂದನ್ನು ಹಂಚಿಕೊಂಡಿದ್ದಾರೆ.

ಸರ್ಕಾರದ ಎಲ್ಲಾ ವೆಬ್‌ಸೈಟ್‌ಗಳು, ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ನಲ್ಲಿ ಈ ಬಗ್ಗೆ ಯಾವುದೇ ಸುದ್ದಿ ಇಲ್ಲ ಅಥವಾ ಅಧಿಕೃತ ಸಾಮಾಜಿಕ ಹ್ಯಾಂಡಲ್‌ಗಳಲ್ಲಿ ಅಂತಹ ಯಾವುದೇ ಪೋಸ್ಟ್ ಕಂಡುಬಂದಿಲ್ಲ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಮಂಗಳವಾರ ಸಂಜೆ ಈ ಸಂಬಂಧ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

20ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಬುಧವಾರ ರಾತ್ರಿ ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ.

ರಾಷ್ಟ್ರಪತಿ ಭವನದಿಂದ ಸೆಪ್ಟೆಂಬರ್ 9ರಂದು ಕಳುಹಿಸಲಾದ ಜಿ20 ಔತಣಕೂಟದ ಆಹ್ವಾನದಲ್ಲಿ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲು ಪ್ರೆಸಿಡೆಂಟ್ ಆಫ್ ಭಾರತ್ ಎಂದು ಉಲ್ಲೇಖಿಸಲಾಗಿತ್ತು.

ಮತ್ತಷ್ಟು ಓದಿ: G20 ಶೃಂಗಸಭೆಯ ಭೋಜನಕೂಟದ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲು ಭಾರತದ ರಾಷ್ಟ್ರಪತಿ; ಏನಿದು ಹೊಸ ಚರ್ಚೆ?

ಬಿಜೆಪಿ ರಾಜ್ಯಸಭಾ ಸಂಸದ ಹರನಾಥ್ ಸಿಂಗ್ ಯಾದವ್ ಕೂಡ ಈ ವಿಚಾರ ಕುರಿತು ಮಾತನಾಡಿ ಇಂಡಿಯಾ ಬದಲಿಗೆ ಭಾರತ ಪದವನ್ನು ಬಳಸಬೇಕೆಂದು ಇಡೀ ದೇಶ ಒತ್ತಾಯಿಸುತ್ತಿದೆ ಎಂದು ಹೇಳಿದ್ದಾರೆ.

ಇಂಡಿಯಾ ಎಂಬ ಪದವು ಬ್ರಿಟಿಷರು ನಮಗೆ ನೀಡಿದ ನಿಂದನೆಯಾಗಿದೆ ಆದರೆ ಭಾರತ್ ಎಂಬ ಪದವು ನಮ್ಮ ಸಂಸ್ಕೃತಿಯ ಸಂಕೇತವಾಗಿದೆ. ನಮ್ಮ ಸಂವಿಧಾನದಲ್ಲಿ ಬದಲಾವಣೆಯಾಗಬೇಕು. ಅದಕ್ಕೆ ‘ಭಾರತ್’ ಎಂಬ ಪದವನ್ನು ಸೇರಿಸಬೇಕು ಎಂದು ನಾನು ಬಯಸುತ್ತೇನೆ ಎಂದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಇಂಡಿಯಾ ಎಂದು ಹೇಳುವುದ ಬಿಡಿ, ಬದಲು ಭಾರತ್ ಎಂದು ಹೇಳಿ ಎಂದು ಮನವಿ ಮಾಡಿಕೊಂಡ ನಂತರ ಈ ವಿಷಯ ತುಂಬಾ ಚರ್ಚೆಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:07 am, Wed, 6 September 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ