AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತೀಶ್​​​ಗೆ ಇಂಡಿಯಾ ಬಣದಿಂದ ಬಂದಿತ್ತು ಪ್ರಧಾನಿ ಆಫರ್​, ಆದರೆ NDA, ಹುದ್ದೆಗಿಂತ ಗೌರವ ನೀಡಿದೆ: ಕೆಸಿ ತ್ಯಾಗಿ

ಪ್ರಧಾನಿ ಮೋದಿ ಅವರು ಜೂ.9ರಂದು ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಆದರೆ ಇದರ ಮಧ್ಯೆ ಜೆಡಿಯು ನಾಯಕರೊಬ್ಬರು ಸತ್ಯವನ್ನು ಬಯಲು ಮಾಡಿದ್ದಾರೆ. ಇಂಡಿಯಾ ಒಕ್ಕೂಟದಿಂದ ನಿತೀಶ್​​​ ಅವರಿಗೆ ಪ್ರಧಾನಿ ಹುದ್ದೆಯ ಆಫರ್​​ ಬಂದಿತ್ತು. ಆದರೆ ಇದನ್ನು ಅವರು ತಿರಸ್ಕರ ಮಾಡಿದ್ದಾರೆ, ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ನಿತೀಶ್​​​ಗೆ ಇಂಡಿಯಾ ಬಣದಿಂದ ಬಂದಿತ್ತು ಪ್ರಧಾನಿ ಆಫರ್​, ಆದರೆ NDA, ಹುದ್ದೆಗಿಂತ ಗೌರವ ನೀಡಿದೆ: ಕೆಸಿ ತ್ಯಾಗಿ
ಅಕ್ಷಯ್​ ಪಲ್ಲಮಜಲು​​
|

Updated on: Jun 08, 2024 | 2:44 PM

Share

ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ (Nitish Kumar) ಅವರು ಇದೀಗ ಡಿಮ್ಯಾಂಡ್​​​ ಮ್ಯಾನ್​​​​, ಇವರು ಇಂಡಿಯಾಕ್ಕೂ ಬೇಕು ಎನ್​ಡಿಎಗೂ ಬೇಕು, ಆದರೆ ನಿತೀಶ್ ಕುಮಾರ್ ಮಾತ್ರ ಎನ್​​ಡಿಎಗೆ ತಮ್ಮ ಬೆಂಬಲ ನೀಡಿದ್ದಾರೆ. ಪ್ರಧಾನಿ ಮೋದಿ ಆಡಳಿತವನ್ನು ಮೆಚ್ಚಿಕೊಂಡು, ಜತೆಯಾಗಿ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಎನ್​​ಡಿಎ ಸೇರಿಕೊಂಡಿದ್ದಾರೆ, ಆದರೆ ಇತ್ತ ಇಂಡಿಯಾ ಒಕ್ಕೂಟ ಅವರಿಗೆ ಪ್ರಧಾನಿ ಸ್ಥಾನ ನೀಡುತ್ತೇವೆ ಎಂದು ಹೇಳಿದ್ದಾರೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ. ಈ ಹಿಂದೆ ನಿತೀಶ್ ಕುಮಾರ್ ನಮ್ಮ ಜತೆಗೆ ನಿಂತರೇ ನಾವು ಅವರಿಗೆ ಉಪಪ್ರಧಾನಿ ಸ್ಥಾನ ನೀಡುತ್ತೇವೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇದೀಗ ಜೆಡಿಯು ಪಕ್ಷದ ನಾಯಕ ಕೆಸಿ ತ್ಯಾಗಿ ಅವರು ನಿತೀಶ್ ಅವರಿಗೆ ಇಂಡಿಯಾ ಒಕ್ಕೂಟ ಪ್ರಧಾನಿ ಆಫರ್​​​ ನೀಡಿದ್ದರು ಎಂದು ಹೇಳಿದ್ದಾರೆ. ಆದರೆ ಅದನ್ನು ನಿತೀಶ್ ದಿಕ್ಕಾರಿಸಿದ್ದಾರೆ. ನಾವು ಎನ್‌ಡಿಎ ಜತೆಗೆ ಹೋಗುತ್ತೇವೆ ಎಂದು ಹೇಳಿದ್ದಾರೆ ಎಂದು ಕೆಸಿ ತ್ಯಾಗಿ ಸಂದರ್ಶನ ಒಂದರಲ್ಲಿ ಹೇಳಿದ್ದಾರೆ.

ಇಂಡಿಯಾ ಒಕ್ಕೂಟಕ್ಕೆ ಸರಿಯಾದ ಸಂಖ್ಯಾ ಬಲ ಇಲ್ಲ. ಆ ಕಾರಣಕ್ಕೆ ಎನ್​​ಡಿಎ ಪಕ್ಷವನ್ನು ಹೊಡೆದು ನಿತೀಶ್ ಮತ್ತು ಚಂದ್ರಬಾಬು ನಾಯ್ಡು ಅವರನ್ನು ತಮ್ಮ ಬಳಿ ಸೆಳೆಯಬೇಕು ಎಂಬ ಪ್ರಯತ್ನ ಮಾಡಿದರು ಎಂಬ ಮಾತಿನ ಮಧ್ಯೆ ಈ ಸತ್ಯ ಹೊರಬಂದಿದೆ. ಚುನಾವಣೆ ಫಲಿತಾಂಶದ ನಂತರ ಇಂಡಿಯಾ ಬಣ ಸರ್ಕಾರ ರಚನೆ ಮಾಡಬೇಕು ಎಂಬ ಕಸರತ್ತು ಮಾಡಿತ್ತು. ಆದರೆ ಅದು ತಲೆಕೆಳಗಾಗಿದೆ. 543 ಸ್ಥಾನಗಳಲ್ಲಿ 234 ಸ್ಥಾನ ಪಡೆದ ಇಂಡಿಯಾ ಒಕ್ಕೂಟಕ್ಕೆ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಆದರೆ ಎನ್​​ಡಿಎ 293 ಸ್ಥಾನಗಳನ್ನು ಪಡೆದುಕೊಂಡಿದ್ದು, ಅದರಲ್ಲಿ ಬಿಜೆಪಿ 240 ಸ್ಥಾನಗಳನ್ನು ಗಳಿಸಿದ್ದು, ಬಹುಮತಕ್ಕೆ 32 ಸ್ಥಾನಗಳ ಕೊರತೆ ಇತ್ತು ಅದಕ್ಕಾಗಿ ನಿತೀಶ್ ಹಾಗೂ ಚಂದ್ರಬಾಬು ನಾಯ್ಡು ಅವರ ಬೆಂಬಲವನ್ನು ಪಡೆದಿದೆ.

ಇನ್ನು ನಿತೀಶ್​​ ಕುಮಾರ್​​​ಗೆ ಇಂಡಿಯಾ ಬಣ ನೀಡಿದ ಆಫರ್​​​ ಬಗ್ಗೆ ಕೆಸಿ ತ್ಯಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ನಿತೀಶ್​​​ ಕುಮಾರ್​​ ಅವರಿಗೆ ಇಂಡಿಯಾ ಬಣದ ಒಬ್ಬ ನಾಯಕ ಪ್ರಧಾನಿ ಸ್ಥಾನ ನೀಡುವುದಾಗಿ ಹೇಳಿದರು. ಆದರೆ ನಮಗೆ ಚುನಾವಣೆ ಸಮಯದಲ್ಲಿ ಇಂಡಿಯಾ ಒಕ್ಕೂಟ ಮಾಡಿದ ಮೋಸಕ್ಕೆ ಆ ಒಕ್ಕೂಟದಿಂದ ಹೊರಬಂದಿದ್ದೇವೆ. ಇದೀಗ ನಾವು ಎನ್‌ಡಿಎಗೆ ಸೇರಿದ್ದೇವೆ, ಈಗ ಹಿಂತಿರುಗಿ ನೋಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಭರವಸೆ​​ ನೀಡಿದ್ದ 1 ಲಕ್ಷ ರೂ. ಗ್ಯಾರಂಟಿ ನೀಡಿ, ಚಡ್ಡಾ, ಸಂಜಯ್ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಆಗಾಗ ಮೈತ್ರಿ ಬದಲಾಯಿಸಲು ಹೆಸರುವಾಸಿಯಾದ ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟ ವಾಸ್ತುಶಿಲ್ಪಿ, ಅವರ ನೇತೃತ್ವದಲ್ಲಿ ಪಾಟ್ನಾದಲ್ಲಿ ಮೊದಲ ಇಂಡಿಯಾ ಸಭೆ ನಡೆಯಿತು. ಆದರೆ ಅಲ್ಲಿ ನಡೆದ ಕುತಂತ್ರದಿಂದ ಇಂಡಿಯಾ ತೊರೆದು, ಎನ್​ಡಿಎ ಸೇರಿಕೊಂಡರು. ನೆನ್ನೆ (ಜೂ.7) ನಡೆದ ಎನ್​​ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಎನ್‌ಡಿಎ ಸಂಸದೀಯ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ನಾಳೆ (ಜೂ.9) ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?