Corona Vaccine: ಕೊವಿಡ್ ಲಸಿಕೆ ಪಡೆಯಲು ಆನ್​ಲೈನ್ ರಿಜಿಸ್ಟ್ರೇಶನ್ ಅಥವಾ ಬುಕಿಂಗ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

18 ವರ್ಷ ಮೇಲ್ಪಟ್ಟ ವ್ಯಕ್ತಿಗಳು ನೇರವಾಗಿ ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಬಹುದು. ಅಲ್ಲಿ ದಾಖಲೆ ಸಲ್ಲಿಸಿ ಲಸಿಕೆ ಪಡೆದುಕೊಳ್ಳಬಹುದು. ಈ ವ್ಯವಸ್ಥೆಯನ್ನು ‘ವಾಕ್ ಇನ್’ ಎಂದು ಕರೆಯಲಾಗುತ್ತದೆ.

Corona Vaccine: ಕೊವಿಡ್ ಲಸಿಕೆ ಪಡೆಯಲು ಆನ್​ಲೈನ್ ರಿಜಿಸ್ಟ್ರೇಶನ್ ಅಥವಾ ಬುಕಿಂಗ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ
ಕೊವಿನ್ ಪೋರ್ಟಲ್
Follow us
| Updated By: ganapathi bhat

Updated on: Jun 15, 2021 | 5:47 PM

ದೆಹಲಿ: ಕೊರೊನಾ ವಿರುದ್ಧದ ಲಸಿಕೆ ಪಡೆಯಲು ರಿಜಿಸ್ಟ್ರೇಶನ್ ಮಾಡಿಕೊಳ್ಳುವುದು ಅಥವಾ ಅಪಾಯಿಂಟ್​ಮೆಂಟ್ ಪಡೆದುಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಇಂದು (ಜೂನ್ 15) ಮಾಹಿತಿ ನೀಡಿದೆ. ಗ್ರಾಮೀಣ ಭಾಗದ ಹಲವು ಮಂದಿ ಲಸಿಕೆ ಪಡೆಯುವಲ್ಲಿ ಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ, ಬುಕಿಂಗ್ ಅವಶ್ಯಕತೆ ಇಲ್ಲ ಎಂದು ಸರ್ಕಾರ ತಿಳಿಸಿದೆ.

18 ವರ್ಷ ಮೇಲ್ಪಟ್ಟ ವ್ಯಕ್ತಿಗಳು ನೇರವಾಗಿ ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಬಹುದು. ಅಲ್ಲಿ ದಾಖಲೆ ಸಲ್ಲಿಸಿ ಲಸಿಕೆ ಪಡೆದುಕೊಳ್ಳಬಹುದು. ಈ ವ್ಯವಸ್ಥೆಯನ್ನು ‘ವಾಕ್ ಇನ್’ ಎಂದು ಕರೆಯಲಾಗುತ್ತದೆ. ಈಗ ಈ ಮಾದರಿಯ ಲಸಿಕೆ ನೀಡಿಕೆಯನ್ನು ಕೇಂದ್ರ ಸರ್ಕಾರ ಸೂಚಿಸಿದೆ.

ಕೊವಿನ್ ಪೋರ್ಟಲ್ ಮೂಲಕ ರಿಜಿಸ್ಟ್ರೇಷನ್ ನಡೆಸಿ ಲಸಿಕೆ ಪಡೆದುಕೊಳ್ಳುವುದು ಕೂಡ ಒಂದು ಮಾರ್ಗವಾಗಿದೆ ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಗ್ರಾಮೀಣ ಭಾಗದಲ್ಲಿ ಲಸಿಕೆ ನೀಡಿಕೆಯನ್ನು ಆಶಾ ಕಾರ್ಯಕರ್ತೆಯರು ಗಮನಿಸುತ್ತಿದ್ದಾರೆ. ಈಗ ನೇರವಾಗಿ ಲಸಿಕಾ ಕೇಂದ್ರಕ್ಕೆ ಭೇಟಿನೀಡಿ ಲಸಿಕೆ ಪಡೆಯಬಹುದು. ಲಸಿಕೆ ಸಹಾಯವಾಣಿ ಸಂಖ್ಯೆ 1075 ಕೂಡ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಲಾಗಿದೆ.

ಜೂನ್ 13ರ ಮಾಹಿತಿ ಪ್ರಕಾರ, ಕೊವಿನ್ ಪೋರ್ಟಲ್​ನಲ್ಲಿ ಲಸಿಕೆ ರಿಜಿಸ್ಟ್ರೇಷನ್ ಮಾಡಿಸಿಕೊಂಡಿರುವ 28.36 ಕೋಟಿ ಜನರ ಪೈಕಿ, 16.45 ಕೋಟಿ ಮಂದಿ (ಶೇಕಡಾ 58ರಷ್ಟು) ನೇರವಾಗಿ ವಾಕ್​ಇನ್ ಮೂಲಕ ಲಸಿಕೆ ಪಡೆದುಕೊಂಡವರಾಗಿದ್ದಾರೆ. ಜೊತೆಗೆ, ಜೂನ್ 13ರಂತೆ ಲಸಿಕೆ ಪಡೆದಿರುವ ಒಟ್ಟು 24.84 ಕೋಟಿ ಲಸಿಕೆ ಡೋಸ್​ಗಳಲ್ಲಿ 19.84 ಕೋಟಿ ಕೋಟಿ ಲಸಿಕೆ ಡೋಸ್ (ಸುಮಾರು ಶೇಕಡಾ 80ರಷ್ಟು) ಲಸಿಕೆ ನೀಡಿಕೆ ವಾಕ್​ಇನ್ ಮೂಲಕ ಆಗಿದೆ.

ಆರೋಗ್ಯ ಸಚಿವಾಲಯದ ಮಾಹಿತಿಯಂತೆ, ಒಟ್ಟು 69,995 ಲಸಿಕಾ ಕೇಂದ್ರಗಳಲ್ಲಿ 49,883 ಅಂದರೆ ಶೇಕಡಾ 71ರಷ್ಟು ಲಸಿಕಾ ಕೇಂದ್ರಗಳು ಗ್ರಾಮೀಣ ಭಾಗಗಳಲ್ಲಿ ಇವೆ. ಹೀಗಾಗಿ, ಲಸಿಕೆ ನಿಡಿಕೆಗೆ ವಾಕ್ ಇನ್ ಕ್ರಮ ಅನುಸರಿಸುವ ಬಗ್ಗೆ ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: Corona Vaccine: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ; ಶೇಕಡಾ 100ರಷ್ಟು ಲಸಿಕೆ ನೀಡಿಕೆ ಸಾಧಿಸಿದ ಮೊದಲ ಗ್ರಾಮವಿದು!

ಕೊವಿಡ್​ 19 ಲಸಿಕೆಯಿಂದ ಭಾರತದಲ್ಲಿ ಮೃತಪಟ್ಟವರು ಎಷ್ಟು ಮಂದಿ?..ಕೊನೆಗೂ ಸಂಖ್ಯೆ ದೃಢಪಡಿಸಿದ ಎಇಎಫ್​ಐ ಸಮಿತಿ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?