AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢದಲ್ಲಿ ಬೆಟ್ಟಕ್ಕೆ ಡಿಕ್ಕಿಯಾಗಿ ವಿಮಾನ ಪತನ; ಇಬ್ಬರು ಪೈಲಟ್​ ಸಾವು

ಛತ್ತೀಸ್​ಗಢದ ಜಶ್‌ಪುರದಲ್ಲಿ ಭೀಕರ ವಿಮಾನ ಅಪಘಾತ ನಡೆದಿದೆ. ಇಲ್ಲಿನ ಬೆಟ್ಟದ ಇಳಿಜಾರಿನಲ್ಲಿ ಖಾಸಗಿ ಜೆಟ್ ಡಿಕ್ಕಿ ಹೊಡೆದುಪತನವಾಗಿದೆ. ಈ ವಿಮಾನದೊಳಗಿದ್ದ ಪೈಲಟ್ ಮತ್ತು ಸಹ ಪೈಲಟ್ ಸಾವನ್ನಪ್ಪಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಜೆಟ್ ಪತನಗೊಂಡಿದೆ ಎನ್ನಲಾಗಿದೆ. ಜಶ್ಪುರ್-ನಾರಾಯಣಪುರ್ ಪ್ರದೇಶದ ಬೆಟ್ಟದ ಇಳಿಜಾರಿನಲ್ಲಿ ಅಪಘಾತಕ್ಕೀಡಾದ ಜೆಟ್‌ನಿಂದ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಕಾಣಿಸಿಕೊಂಡ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಛತ್ತೀಸ್‌ಗಢದಲ್ಲಿ ಬೆಟ್ಟಕ್ಕೆ ಡಿಕ್ಕಿಯಾಗಿ ವಿಮಾನ ಪತನ; ಇಬ್ಬರು ಪೈಲಟ್​ ಸಾವು
Chhattisgarh Plane Crash
ಸುಷ್ಮಾ ಚಕ್ರೆ
|

Updated on:Apr 20, 2026 | 6:11 PM

Share

ಜಶ್​ಪುರ, ಏಪ್ರಿಲ್ 20: ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಇಂದು ಖಾಸಗಿ ವಿಮಾನವೊಂದು ಪತನಗೊಂಡಿದ್ದು (Plane Crash), ಇಬ್ಬರು ಪೈಲಟ್ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜಶ್‌ಪುರ-ನಾರಾಯಣಪುರ ಪ್ರದೇಶದ ಅರಾ ಬೆಟ್ಟದ ಇಳಿಜಾರಿನಲ್ಲಿ ಪತನಗೊಂಡ ಜೆಟ್‌ನಿಂದ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಕಾಣಿಸಿಕೊಂಡಿವೆ. ಈ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ಖಚಿತವಾಗಿಲ್ಲ.

ಜಶ್ಪುರ್-ನಾರಾಯಣಪುರ್ ಪ್ರದೇಶದ ಬೆಟ್ಟದ ಇಳಿಜಾರಿನಲ್ಲಿ ಅಪಘಾತಕ್ಕೀಡಾದ ಜೆಟ್‌ನಿಂದ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಕಾಣಿಸಿಕೊಂಡ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆಯ ನಂತರ ಪೊಲೀಸರು ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಇದನ್ನೂ ಓದಿ: ‘ಅದು ಕೊನೆಯ ಸಂದೇಶ’: ವಿಮಾನದೊಳಗೆ ನಡೆದಿದ್ದೇನು? ಸ್ಫೋಟಕ ಹೇಳಿಕೆ ನೀಡಿದ ಪ್ರಯಾಣಿಕ

ಈ ವಿಮಾನವು ಅರಾ ಬೆಟ್ಟಕ್ಕೆ ಡಿಕ್ಕಿ ಹೊಡೆದ ನಂತರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಆರಂಭಿಕ ವರದಿಗಳ ಪ್ರಕಾರ, ಘಟನೆಯಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಇಬ್ಬರೂ ಸಾವನ್ನಪ್ಪಿದ್ದಾರೆ. ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಬೇರೆ ಯಾವುದೇ ಪ್ರಯಾಣಿಕರು ಇದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಎನ್‌ಡಿಟಿವಿ ವರದಿಯ ಪ್ರಕಾರ, ಖುರಾಸಗರ್ಹ ಗ್ರಾಮದ ಬಳಿಯ ರತನ್‌ಪಹ್ಲಿ ಕಾಡಿನಲ್ಲಿ ಈ ಘಟನೆ ಸಂಭವಿಸಿದೆ. ಈ ವಿಮಾನ ನೆಲದಿಂದ ಸುಮಾರು 30 ಅಡಿ ಎತ್ತರದಲ್ಲಿ ಹಾರುತ್ತಿತ್ತು. ಮೃತಪಟ್ಟ ಪೈಲಟ್​ಗಳ ಗುರುತುಗಳು ಇನ್ನೂ ಬಹಿರಂಗಗೊಂಡಿಲ್ಲ. ಸ್ಥಳೀಯ ಪೊಲೀಸರು ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Mon, 20 April 26

Follow Us
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!
ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!