AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Right to Disconnect Bill: ಕೆಲಸ ಮುಗಿದ ನಂತರವೂ ಉದ್ಯೋಗಿಗಳಿಗೆ ಬಾಸ್​​​​ ಫೋನ್​​ ಮಾಡುವಂತಿಲ್ಲ! ಲೋಕಸಭೆಯಲ್ಲಿ ಹೊಸ ಮಸೂದೆ ಮಂಡನೆ

ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಹಲವು ಖಾಸಗಿ ಸದಸ್ಯರ ಮಸೂದೆಗಳನ್ನು ಮಂಡಿಸಲಾಗಿದೆ. ಕೆಲಸದ ನಂತರ ಕರೆ, ಇಮೇಲ್‌ಗಳಿಗೆ ಪ್ರತಿಕ್ರಿಯಿಸದಿರುವ 'ರೈಟ್ ಟು ಡಿಸ್ಕನೆಕ್ಟ್ ಬಿಲ್ 2025' ಹಾಗೂ ಮಹಿಳೆಯರಿಗೆ ‘ಮುಟ್ಟಿನ ರಜೆ’ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮಸೂದೆಗಳನ್ನು ಮಂಡನೆ ಮಾಡಲಾಗಿದೆ. ಇವು ನೌಕರರ ಒತ್ತಡ ಕಡಿಮೆ ಮಾಡಿ, ಅವರ ಹಕ್ಕುಗಳನ್ನು ರಕ್ಷಿಸುವ ಹಾಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಆರೋಗ್ಯಕ್ಕೆ ಆದ್ಯತೆ ನೀಡುವ ಗುರಿ ಹೊಂದಿವೆ.

Right to Disconnect Bill: ಕೆಲಸ ಮುಗಿದ ನಂತರವೂ ಉದ್ಯೋಗಿಗಳಿಗೆ ಬಾಸ್​​​​ ಫೋನ್​​ ಮಾಡುವಂತಿಲ್ಲ! ಲೋಕಸಭೆಯಲ್ಲಿ ಹೊಸ ಮಸೂದೆ ಮಂಡನೆ
ಲೋಕಸಭೆ
ಅಕ್ಷಯ್​ ಪಲ್ಲಮಜಲು​​
|

Updated on:Dec 06, 2025 | 3:11 PM

Share

ಚಳಿಗಾಲದ ಸಂಸತ್​​ ಅಧಿವೇಶನದಲ್ಲಿ ಕೆಲವೊಂದು ಮಹತ್ವ ಮಸೂದೆಗಳನ್ನು ಶುಕ್ರವಾರ (ಡಿ.5) ರಾಜ್ಯಸಭಾ ಹಾಗೂ ಲೋಕಸಭಾ ಸದಸ್ಯರು ಮಂಡನೆ ಮಾಡಿದ್ದಾರೆ. ಅದರಲ್ಲಿ ಪ್ರಮುಖವಾದದ್ದು ಖಾಸಗಿ ಸದಸ್ಯರ ಮಸೂದೆ (Private Member Bills). ಕೆಲಸದ ಸಮಯದ ನಂತರ ಕಚೇರಿಯ ಕರೆಗಳು ಮತ್ತು ಇಮೇಲ್‌ಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯ ಇಲ್ಲ. ಇದಕ್ಕಾಗಿ “ರೈಟ್ ಟು ಡಿಸ್ಕನೆಕ್ಟ್ ಬಿಲ್ 2025” (ದೂರವಾಣಿ ಸಂಪರ್ಕ ಕಡಿತಗೊಳಿಸುವ ಹಕ್ಕು)ನ್ನು ಪರಿಚಯಿಸುತ್ತಿದೆ. ಈ ಮೂಲಕ ಉದ್ಯೋಗಿಗಳಿಗೆ ಕೆಲಸದ ವಿಚಾರದಲ್ಲಾಗುವ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶವಾಗಿದೆ. ಈ ಮಸೂದೆಯನ್ನು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಮಂಡಿಸಿದ್ದಾರೆ .ಸರ್ಕಾರವು ಕಾನೂನನ್ನು ತರಬೇಕೆಂದು ಭಾವಿಸುವ ವಿಷಯಗಳ ಕುರಿತು ಮಸೂದೆಗಳನ್ನು ಮಂಡಿಸಲು ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಿಗೆ ಅವಕಾಶವಿದೆ.

ಇದು ಕೆಲಸದ ಸಮಯ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ದೂರವಾಣಿ ಕರೆಗಳು ಮತ್ತು ಇಮೇಲ್‌ಗಳಿಂದ “ರೈಟ್ ಟು ಡಿಸ್ಕನೆಕ್ಟ್ ಬಿಲ್ 2025” ನ್ನು ಪ್ರತಿಯೊಬ್ಬ ಉದ್ಯೋಗಿಗೆ ನೀಡಲು ನೌಕರರ ಕಲ್ಯಾಣ ಪ್ರಾಧಿಕಾರವನ್ನು ರಚಿಸಲು ಪ್ರಸ್ತಾಪಿಸುತ್ತದೆ.ಈ ಮೂಲಕ ಖಾಸಗಿ ಉದ್ಯೋಗಿಗಳ ಹಕ್ಕುಗಳ ರಕ್ಷಣೆಯನ್ನು ಮಾಡಲಾಗುತ್ತದೆ. ಒಂದು ವೇಳೆ ಕಚೇರಿ ಉತನ್ನ ಅಧಿಕಾರಿ ಕೆಲಸ ಸಮಯದ ನಂತರವು ಕೆಲಸಕ್ಕೆ ಸಂಬಂಧಿಸಿದ ಕರೆ ಅಥವಾ ಇಮೇಲ್​​ಗಳನ್ನು ಮಾಡಿದ್ರೆ, ಅವರಿಗೆ ಈ ಮಸೂದೆಯಲ್ಲಿ ಅಥವಾ ಕಾನೂನಿನ ಅಡಿಯಲ್ಲಿ ದಂಡನೀಯ ಶಿಕ್ಷೆಗೆ ಗುರಿಪಡಿಸಬೇಕು ಎಂದು ಹೇಳಲಾಗಿದೆ. ಇದರ ಜತೆಗೆ ಹಲವು ಮಸೂದೆಯನ್ನು ಈ ವೇಳೆ ಮಂಡನೆ ಮಾಡಲಾಗಿದೆ.

ಮುಟ್ಟಿನ ಪ್ರಯೋಜನ ಮಸೂದೆ:

ಕಾಂಗ್ರೆಸ್ ಸಂಸದೆ ಕಡಿಯಂ ಕಾವ್ಯ ಅವರು ಮುಟ್ಟಿನ ಪ್ರಯೋಜನ ಮಸೂದೆಯನ್ನು ಪರಿಚಯಸಿದ್ದರೆ. ಈ ಮೂಲಕ ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ನೀಡಿಬೇಕಾದ ಸೌಲಭ್ಯಗಳು ಹಾಗೂ ಬೆಂಬಲದ ಬಗ್ಗೆ ಈ ಮಸೂದೆ ಪ್ರಸ್ತಾಪಿಸುತ್ತದೆ. ಮುಟ್ಟಿನ ಸಮಯದಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಕೆಲವು ಪ್ರಯೋಜನಗಳನ್ನು ಒದಗಿಸಲು ಕಾನೂನು ಚೌಕಟ್ಟನ್ನು ರೂಪಿಸಲು ಈ ಮಸೂದೆ ಪ್ರಯತ್ನಿಸುತ್ತದೆ. ಇದೇ ವೇಳೆ ಈ ವಿಚಾಕ್ಕೆ ಸಂಬಂಧಿಸಿದಂತೆ ಎಲ್‌ಜೆಪಿ ಪಕ್ಷ ಸಂಸದೆ ಶಾಂಭವಿ ಚೌಧರಿ ಅವರು, ಕೆಲಸ ಮಾಡುವ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆಯನ್ನು ನೀಡುವುದನ್ನು ಮತ್ತಷ್ಟು ಭದ್ರಪಡಿಸಲು ಹಾಗೂ ಮುಟ್ಟಿನ ಸಮಯದಲ್ಲಿ ಮುಟ್ಟಿನ ನೈರ್ಮಲ್ಯ ಸೌಲಭ್ಯಗಳು ಮತ್ತು ಇತರ ಆರೋಗ್ಯ ಸೌಲಭ್ಯಗಳನ್ನು ಪಡೆಯಲು ಒಂದು ಶಾಸನವನ್ನು ಪರಿಚಯಿಸಿದರು.

NEET ವಿನಾಯಿತಿ ಮಸೂದೆ

ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಯಿಂದ ತಮಿಳುನಾಡಿಗೆ ವಿನಾಯಿತಿ ನೀಡುವ ಮಸೂದೆಯನ್ನು ಮಂಡಿಸಿದರು.ನೀಟ್ ಮೂಲಕ ವೈದ್ಯಕೀಯ ಪ್ರವೇಶ ನೀಡುವುದರಿಂದ ರಾಜ್ಯಕ್ಕೆ ವಿನಾಯಿತಿ ನೀಡುವ ಪ್ರಸ್ತಾವಿತ ಕಾನೂನಿಗೆ ರಾಷ್ಟ್ರಪತಿಗಳು ಒಪ್ಪಿಗೆ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಕಳೆದ ತಿಂಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು ಎಂದು ಹೇಳಿದ್ದಾರೆ.

ಮರಣದಂಡನೆ ರದ್ದುಗೊಳಿಸುವ ಮಸೂದೆ

ಇದರ ಜತೆಗೆ ಡಿಎಂಕೆ ಸಂಸದೆ ಕನಿಮೋಳಿ ಕರುಣಾನಿಧಿ ದೇಶದಲ್ಲಿ ಮರಣದಂಡನೆಯನ್ನು ರದ್ದುಗೊಳಿಸುವ ಮಸೂದೆಯನ್ನು ಮಂಡಿಸಿದರು. ದೇಶದಲ್ಲಿ ಮರಣದಂಡನೆಯನ್ನು ರದ್ದುಗೊಳಿಸಬೇಕೆಂಬ ಬೇಡಿಕೆಗಳು ಬಂದಿವೆ ಆದರೆ ಕೇಂದ್ರದಲ್ಲಿ ಸತತವಾಗಿ ಅಧಿಕಾರಕ್ಕೆ ಬಂದ ಸರ್ಕಾರಗಳು ಈ ಅಭಿಪ್ರಾಯವನ್ನು ತಿರಸ್ಕರಿಸಿವೆ, ಕೆಲವು ಸಂದರ್ಭಗಳಲ್ಲಿ ಅದನ್ನು ತಡೆಗಟ್ಟುವ ಸಲುವಾಗಿ ಅದು ಅಗತ್ಯವಾಗಿತ್ತು ಎಂದು ಹೇಳಿಕೊಂಡಿವೆ. ಸುಮಾರು ಒಂದು ದಶಕದ ಹಿಂದೆ, ಕಾನೂನು ಆಯೋಗವು ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ, ಮರಣದಂಡನೆಯನ್ನು ತ್ವರಿತವಾಗಿ ರದ್ದುಗೊಳಿಸುವಂತೆ ಶಿಫಾರಸು ಮಾಡಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಕಲಿ ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಳವಳ

ಪತ್ರಕರ್ತ ಮಸೂದೆ

ಪತ್ರಕರ್ತ (ಹಿಂಸೆ ತಡೆಗಟ್ಟುವಿಕೆ ಮತ್ತು ರಕ್ಷಣೆ) ಮಸೂದೆ, 2024 ಕೆಳಮನೆಯಲ್ಲಿ ವಿಶಾಲದಾದ ಪ್ರಕಾಶ್‌ಬಾಪು ಪಾಟೀಲ್ ಅವರು ಈ ಮಸೂದೆಯನ್ನು ಮಂಡಿಸಿದರು. ಇದು “ಪತ್ರಕರ್ತರ ಮೇಲಿನ ಹಿಂಸಾಚಾರವನ್ನು ತಡೆಗಟ್ಟುವುದು ಮತ್ತು ಪತ್ರಕರ್ತರು, ಅವರ ಆಸ್ತಿಗಳ ರಕ್ಷಣೆ ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಪ್ರಾಸಂಗಿಕ ವಿಷಯಗಳಿಗೆ ರಕ್ಷಣೆ ನೀಡುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. ಈ ಹಲವು ವಿಚಾರಗಳಿಗೆ ಸಂಬಂಧಿಸಿದ ಮಸೂದೆಗಳನ್ನು ರಾಜ್ಯಸಭಾ ಹಾಗೂ ಲೋಕಸಭಾ ಸದಸ್ಯರು ಮಂಡಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Sat, 6 December 25

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್