AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜಾಮರ ಕಾಲದ ಪೆಟ್ರೋಲ್ ಪಂಪ್ ಹೈದರಾಬಾದ್ ಜುಬಿಲಿ ಹಿಲ್ಸ್ ಅರಣ್ಯ ಪ್ರದೇಶದಲ್ಲಿ ಪತ್ತೆ!

ಹೈದರಾಬಾದ್‌ನಲ್ಲಿರುವ ಕೆಬಿಆರ್ ರಾಷ್ಟ್ರೀಯ ಉದ್ಯಾನವನವು 142.5 ಹೆಕ್ಟೇರ್ ಪ್ರದೇಶವನ್ನು ಒಳಗೊಂಡಿದೆ. ಮೊದಲು ಇದನ್ನು ಜುಬಿಲಿ ಹಿಲ್ಸ್ ಫಾರೆಸ್ಟ್ ಬ್ಲಾಕ್ ಎಂದು ಕರೆಯಲಾಗುತ್ತಿತ್ತು. ಈ ಹಿಂದೆ ಹೈದರಾಬಾದ್ ನಿಜಾಮ್ ಒಡೆತನದಲ್ಲಿದ್ದ ಈ ಉದ್ಯಾನವನವನ್ನು ನಗರ ಭೂ ಸೀಲಿಂಗ್ ಕಾಯ್ದೆಯಡಿ ಸರ್ಕಾರ ಸ್ವಾಧೀನಪಡಿಸಿಕೊಂಡಿತು.

ನಿಜಾಮರ ಕಾಲದ ಪೆಟ್ರೋಲ್ ಪಂಪ್ ಹೈದರಾಬಾದ್ ಜುಬಿಲಿ ಹಿಲ್ಸ್ ಅರಣ್ಯ ಪ್ರದೇಶದಲ್ಲಿ ಪತ್ತೆ!
ನಿಜಾಮರ ಕಾಲದ ಪೆಟ್ರೋಲ್ ಪಂಪ್ ಪತ್ತೆ!
ಸಾಧು ಶ್ರೀನಾಥ್​
|

Updated on:Feb 29, 2024 | 1:26 PM

Share

ಹೈದರಾಬಾದ್ ನಲ್ಲಿ ಅಪರೂಪದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಾನಗರದ ಕೆಬಿಆರ್ ಪಾರ್ಕ್‌ನಲ್ಲಿ ನಿಜಾಮರ ಕಾಲದ ಪೆಟ್ರೋಲ್ ಪಂಪ್ ಪತ್ತೆಯಾಗಿದೆ! ಉದ್ಯಾನದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಅದನ್ನು ಗಮನಿಸಿದ್ದಾರೆ. ಅವರು ಪೆಟ್ರೋಲ್ ಬಂಕ್‌ನ ಫೋಟೋಗಳನ್ನು (Hyderabad Nizam Private Petrol Pump) ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಅದು ವೈರಲ್ ಆಗಿದೆ. ಇಷ್ಟು ವರ್ಷ ಗಿಡ ಮರಗಳ ಮಧ್ಯೆ ಮರೆಯಾಗಿದ್ದ ಈ ಪೆಟ್ರೋಲ್ ಪಂಪ್ ಬೇಸಿಗೆ ಬಂದಾಗ… ಆ ಗಿಡಮರಗಳು ಒಣಗಿದಾಗ ಅದು ಪತ್ತೆಯಾಗಿದೆ.

ನಿಜಾಮ ತನ್ನ ಕಾರುಗಳು, ಮೋಟಾರು ಯಂತ್ರಗಳು ಮತ್ತು ಇತರ ವಾಹನಗಳಿಗೆ ಇಂಧನ ತುಂಬಲು ಇದನ್ನು ಬಳಸುತ್ತಿದ್ದ ಎಂದು ಹೇಳಲಾಗುತ್ತದೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಕೆಬಿಆರ್ ಪಾರ್ಕ್‌ಗೆ (Kasu Brahmananda Reddy National Park) ಬರುವ ಜನರು ಪೆಟ್ರೋಲ್ ಪಂಪ್ ನೋಡಲು ಆಸಕ್ತಿ ತೋರುತ್ತಿದ್ದಾರೆ. ಮೀರ್ ಉಸ್ಮಾನ್ ಅಲಿ ಖಾನ್ ಎಂಬಾತ ಹೈದರಾಬಾದ್ ರಾಜ್ಯವನ್ನು ಆಳಿದ ಕೊನೆಯ ನವಾಬ. ಆ ಸಮಯದಲ್ಲಿ ಅವರು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದು ಗುರುತಿಸಲ್ಪಟ್ಟಿದ್ದರು.

ಹೈದರಾಬಾದ್‌ನಲ್ಲಿರುವ ಕೆಬಿಆರ್ ರಾಷ್ಟ್ರೀಯ ಉದ್ಯಾನವನವು 142.5 ಹೆಕ್ಟೇರ್ ಪ್ರದೇಶವನ್ನು ಒಳಗೊಂಡಿದೆ. ಮೊದಲು ಇದನ್ನು ಜುಬಿಲಿ ಹಿಲ್ಸ್ ಫಾರೆಸ್ಟ್ ಬ್ಲಾಕ್ ಎಂದು ಕರೆಯಲಾಗುತ್ತಿತ್ತು.

ಇದನ್ನೂ ಓದಿ: ಭಾರತದ ಟಾಪ್ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಮೋದಿ ನಂಬರ್​ 1, ಟಾಪ್ 10 ರಲ್ಲಿ ಸಿಜೆಐ ಚಂದ್ರಚೂಡ್

ಈ ಹಿಂದೆ ಹೈದರಾಬಾದ್ ನಿಜಾಮ್ ಒಡೆತನದಲ್ಲಿದ್ದ ಈ ಉದ್ಯಾನವನವನ್ನು ನಗರ ಭೂ ಸೀಲಿಂಗ್ ಕಾಯ್ದೆಯಡಿ ಸರ್ಕಾರ ಸ್ವಾಧೀನಪಡಿಸಿಕೊಂಡಿತು. ಆದರೆ, 2.4 ಹೆಕ್ಟೇರ್ ಭೂಮಿಯನ್ನು ನಿಜಾಮರ ಕುಟುಂಬ ಇಟ್ಟುಕೊಳ್ಳಲು ಅವಕಾಶ ಮಾಡಿಕೊಟ್ಟಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:12 pm, Thu, 29 February 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ