AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇ ತಿಂಗಳ ಅಂತ್ಯದೊಳಗೆ ಏರ್​ ಇಂಡಿಯಾ ಖಾಸಗೀಕರಣ ನಿಶ್ಚಿತ.. ಇಲ್ಲದಿದ್ದರೆ ಮುಚ್ಚಬೇಕಾಗುತ್ತದೆ’-ಸಚಿವ ಹರ್ದೀಪ್​ ಸಿಂಗ್ ಪುರಿ

Air India: 2007ರಲ್ಲಿ ಇಂಡಿಯನ್ ಏರ್​ಲೈನ್​​ನೊಂದಿಗೆ ವಿಲೀನಗೊಂಡಾಗಿನಿಂದಲೂ ನಷ್ಟದಲ್ಲಿರುವ ಏರ್​ ಇಂಡಿಯಾ ಕಡೆಗೂ ಚೇತರಿಸಿಕೊಳ್ಳಲೇ ಇಲ್ಲ. ಈಗ ಏರ್​ ಇಂಡಿಯಾ ಹಣ ಗಳಿಸುತ್ತಿದ್ದರೂ ದಿನಕ್ಕೆ 20 ಕೋಟಿ ರೂ.ನಷ್ಟು ನಷ್ಟವಾಗುತ್ತಲೇ ಇದೆ.

‘ಮೇ ತಿಂಗಳ ಅಂತ್ಯದೊಳಗೆ ಏರ್​ ಇಂಡಿಯಾ ಖಾಸಗೀಕರಣ ನಿಶ್ಚಿತ.. ಇಲ್ಲದಿದ್ದರೆ ಮುಚ್ಚಬೇಕಾಗುತ್ತದೆ’-ಸಚಿವ ಹರ್ದೀಪ್​ ಸಿಂಗ್ ಪುರಿ
ಏರ್​ ಇಂಡಿಯಾ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Mar 27, 2021 | 7:29 PM

Share

ನವದೆಹಲಿ: ಏರ್​ ಇಂಡಿಯಾ (Air India) ವನ್ನು ಒಂದೋ ಮಾರಾಟ ಮಾಡಬೇಕು.. ಇಲ್ಲ ಮುಚ್ಚಬೇಕು. ಇದರ ಹೊರತಾಗಿ ಬೇರೆಯಾವುದೇ ದಾರಿ ಕಾಣುತ್ತಿಲ್ಲ. ನಮ್ಮ ಬಳಿ ಬಂಡವಾಳ ಹೂಡಿಕೆ ಸಾಧ್ಯವಿಲ್ಲ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್​ ಸಿಂಗ್​ ಪುರಿ ಇಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಏರ್​ ಇಂಡಿಯಾವನ್ನು ಮೇ ಅಂತ್ಯದ ಒಳಗೆ ಖಾಸಗೀಕರಣ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಕಳೆದ ಸೋಮವಾರ ನಡೆದ ಸಭೆಯಲ್ಲಿ ಏರ್​ ಇಂಡಿಯಾ ಖಾಸಗೀಕರಣದ ನಿರ್ಧಾರವಾಗಿದೆ. ಇನ್ನು 64 ದಿನಗಳಲ್ಲಿ ಅದಕ್ಕೆ ಸಂಬಂಧಪಟ್ಟ ಪ್ರಕ್ರಿಯೆಗಳನ್ನು ಮುಗಿಸಲು ಸರ್ಕಾರ ತೀರ್ಮಾನಿಸಿದೆ. ಹಲವು ಹರಾಜುದಾರರು ಮುಂದೆ ಬಂದಿದ್ದಾರೆ. ಅದರಲ್ಲೂ ಶಾರ್ಟ್​ಲಿಸ್ಟ್ ಮಾಡಲಾಗಿದೆ ಎಂದು ವಿವರಿಸಿದ ಸಚಿವರು, ಏರ್​ ಇಂಡಿಯಾಕ್ಕೆ ಈಗಲೂ 60 ಸಾವಿರ ಕೋಟಿ ರೂ.ಸಾಲ ಇದೆ ಎಂದೂ ತಿಳಿಸಿದ್ದಾರೆ.

2007ರಲ್ಲಿ ಇಂಡಿಯನ್ ಏರ್​ಲೈನ್​​ನೊಂದಿಗೆ ವಿಲೀನಗೊಂಡಾಗಿನಿಂದಲೂ ನಷ್ಟದಲ್ಲಿರುವ ಏರ್​ ಇಂಡಿಯಾ ಕಡೆಗೂ ಚೇತರಿಸಿಕೊಳ್ಳಲೇ ಇಲ್ಲ. ಈಗ ಏರ್​ ಇಂಡಿಯಾ ಹಣ ಗಳಿಸುತ್ತಿದ್ದರೂ ದಿನಕ್ಕೆ 20 ಕೋಟಿ ರೂ.ನಷ್ಟು ನಷ್ಟವಾಗುತ್ತಲೇ ಇದೆ. ನಾನಂತೂ ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಳಿ ಹೇಳಿಬಿಟ್ಟಿದ್ದೇನೆ. ನಿರ್ಮಲಾ ಜೀ, ನನಗಂತೂ ಏರ್​ ಇಂಡಿಯಾವನ್ನು ಮುಂದುವರಿಸಿಕೊಂಡು ಹೋಗುವ ಸಾಮರ್ಥ್ಯವಿಲ್ಲ.. ಸ್ವಲ್ಪ ಹಣಕೊಡಿ ಎಂದು ಕೇಳಿದ್ದೆ ಎಂದೂ ಹರ್ದೀಪ್​ ಸಿಂಗ್ ಪುರಿ ಹೇಳಿದ್ದಾರೆ. ಇನ್ನು ಈ ಹಿಂದೆ ಕೂಡ ಕೆಲವು ಬಾರಿ ಏರ್​ ಇಂಡಿಯಾ ಖಾಸಗೀಕರಣಕ್ಕೆ ಮುಂದಾಗಿದ್ದರೂ ಅದು ಯಶಸ್ವಿಯಾಗಿರಲಿಲ್ಲ. ಆದರೆ ಈ ಬಾರಿ ಹಾಗೇ ಬಿಟ್ಟರೆ ಮುಚ್ಚುವುದೊಂದೇ ದಾರಿ ಇರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು

ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ‘ ಮಾತಾಡಿದ್ದಾರೆ, ಇದು ಹೊಲಸುತನದ ಪರಮಾವಧಿ: ಕರ್ನಾಟಕ ಕಾಂಗ್ರೆಸ್

Published On - 7:25 pm, Sat, 27 March 21

ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ