AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇ ತಿಂಗಳ ಅಂತ್ಯದೊಳಗೆ ಏರ್​ ಇಂಡಿಯಾ ಖಾಸಗೀಕರಣ ನಿಶ್ಚಿತ.. ಇಲ್ಲದಿದ್ದರೆ ಮುಚ್ಚಬೇಕಾಗುತ್ತದೆ’-ಸಚಿವ ಹರ್ದೀಪ್​ ಸಿಂಗ್ ಪುರಿ

Air India: 2007ರಲ್ಲಿ ಇಂಡಿಯನ್ ಏರ್​ಲೈನ್​​ನೊಂದಿಗೆ ವಿಲೀನಗೊಂಡಾಗಿನಿಂದಲೂ ನಷ್ಟದಲ್ಲಿರುವ ಏರ್​ ಇಂಡಿಯಾ ಕಡೆಗೂ ಚೇತರಿಸಿಕೊಳ್ಳಲೇ ಇಲ್ಲ. ಈಗ ಏರ್​ ಇಂಡಿಯಾ ಹಣ ಗಳಿಸುತ್ತಿದ್ದರೂ ದಿನಕ್ಕೆ 20 ಕೋಟಿ ರೂ.ನಷ್ಟು ನಷ್ಟವಾಗುತ್ತಲೇ ಇದೆ.

‘ಮೇ ತಿಂಗಳ ಅಂತ್ಯದೊಳಗೆ ಏರ್​ ಇಂಡಿಯಾ ಖಾಸಗೀಕರಣ ನಿಶ್ಚಿತ.. ಇಲ್ಲದಿದ್ದರೆ ಮುಚ್ಚಬೇಕಾಗುತ್ತದೆ’-ಸಚಿವ ಹರ್ದೀಪ್​ ಸಿಂಗ್ ಪುರಿ
ಏರ್​ ಇಂಡಿಯಾ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Mar 27, 2021 | 7:29 PM

Share

ನವದೆಹಲಿ: ಏರ್​ ಇಂಡಿಯಾ (Air India) ವನ್ನು ಒಂದೋ ಮಾರಾಟ ಮಾಡಬೇಕು.. ಇಲ್ಲ ಮುಚ್ಚಬೇಕು. ಇದರ ಹೊರತಾಗಿ ಬೇರೆಯಾವುದೇ ದಾರಿ ಕಾಣುತ್ತಿಲ್ಲ. ನಮ್ಮ ಬಳಿ ಬಂಡವಾಳ ಹೂಡಿಕೆ ಸಾಧ್ಯವಿಲ್ಲ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್​ ಸಿಂಗ್​ ಪುರಿ ಇಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಏರ್​ ಇಂಡಿಯಾವನ್ನು ಮೇ ಅಂತ್ಯದ ಒಳಗೆ ಖಾಸಗೀಕರಣ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಕಳೆದ ಸೋಮವಾರ ನಡೆದ ಸಭೆಯಲ್ಲಿ ಏರ್​ ಇಂಡಿಯಾ ಖಾಸಗೀಕರಣದ ನಿರ್ಧಾರವಾಗಿದೆ. ಇನ್ನು 64 ದಿನಗಳಲ್ಲಿ ಅದಕ್ಕೆ ಸಂಬಂಧಪಟ್ಟ ಪ್ರಕ್ರಿಯೆಗಳನ್ನು ಮುಗಿಸಲು ಸರ್ಕಾರ ತೀರ್ಮಾನಿಸಿದೆ. ಹಲವು ಹರಾಜುದಾರರು ಮುಂದೆ ಬಂದಿದ್ದಾರೆ. ಅದರಲ್ಲೂ ಶಾರ್ಟ್​ಲಿಸ್ಟ್ ಮಾಡಲಾಗಿದೆ ಎಂದು ವಿವರಿಸಿದ ಸಚಿವರು, ಏರ್​ ಇಂಡಿಯಾಕ್ಕೆ ಈಗಲೂ 60 ಸಾವಿರ ಕೋಟಿ ರೂ.ಸಾಲ ಇದೆ ಎಂದೂ ತಿಳಿಸಿದ್ದಾರೆ.

2007ರಲ್ಲಿ ಇಂಡಿಯನ್ ಏರ್​ಲೈನ್​​ನೊಂದಿಗೆ ವಿಲೀನಗೊಂಡಾಗಿನಿಂದಲೂ ನಷ್ಟದಲ್ಲಿರುವ ಏರ್​ ಇಂಡಿಯಾ ಕಡೆಗೂ ಚೇತರಿಸಿಕೊಳ್ಳಲೇ ಇಲ್ಲ. ಈಗ ಏರ್​ ಇಂಡಿಯಾ ಹಣ ಗಳಿಸುತ್ತಿದ್ದರೂ ದಿನಕ್ಕೆ 20 ಕೋಟಿ ರೂ.ನಷ್ಟು ನಷ್ಟವಾಗುತ್ತಲೇ ಇದೆ. ನಾನಂತೂ ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಳಿ ಹೇಳಿಬಿಟ್ಟಿದ್ದೇನೆ. ನಿರ್ಮಲಾ ಜೀ, ನನಗಂತೂ ಏರ್​ ಇಂಡಿಯಾವನ್ನು ಮುಂದುವರಿಸಿಕೊಂಡು ಹೋಗುವ ಸಾಮರ್ಥ್ಯವಿಲ್ಲ.. ಸ್ವಲ್ಪ ಹಣಕೊಡಿ ಎಂದು ಕೇಳಿದ್ದೆ ಎಂದೂ ಹರ್ದೀಪ್​ ಸಿಂಗ್ ಪುರಿ ಹೇಳಿದ್ದಾರೆ. ಇನ್ನು ಈ ಹಿಂದೆ ಕೂಡ ಕೆಲವು ಬಾರಿ ಏರ್​ ಇಂಡಿಯಾ ಖಾಸಗೀಕರಣಕ್ಕೆ ಮುಂದಾಗಿದ್ದರೂ ಅದು ಯಶಸ್ವಿಯಾಗಿರಲಿಲ್ಲ. ಆದರೆ ಈ ಬಾರಿ ಹಾಗೇ ಬಿಟ್ಟರೆ ಮುಚ್ಚುವುದೊಂದೇ ದಾರಿ ಇರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು

ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ‘ ಮಾತಾಡಿದ್ದಾರೆ, ಇದು ಹೊಲಸುತನದ ಪರಮಾವಧಿ: ಕರ್ನಾಟಕ ಕಾಂಗ್ರೆಸ್

Published On - 7:25 pm, Sat, 27 March 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ