AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಬಾರಿ ನೋಟಿಸ್ ಕೊಟ್ರೂ ಡೋಂಟ್ ಕೇರ್ ಎಂದ ಆಳ್ವಾ, CCB ಎದುರಿರುವ ಆಯ್ಕೆಗಳೇನು?

ಬೆಂಗಳೂರು: ಡ್ರಗ್ಸ್ ಕೇಸ್​ನಲ್ಲಿ ಆದಿತ್ಯ ಆಳ್ವಾ ಎಸ್ಕೇಪ್ ಆಗಿದ್ದಕ್ಕೆ ಸಹೋದರಿ ಪ್ರಿಯಾಂಕ ಆಳ್ವಾಗೆ ಸಂಕಷ್ಟ ಎದುರಾಗಿದೆ. ಆದಿತ್ಯ ಎಸ್ಕೇಪ್ ಆಗಲು ಸಹಾಯ ಮಾಡಿದ ಆರೋಪದಡಿ ಪ್ರಿಯಾಂಕ ಆಳ್ವಾಗೆ ಈಗಾಗಲೇ 2 ಬಾರಿ ಸಿಸಿಬಿ ನೋಟಿಸ್ ನೀಡಿದೆ. ಆದರೆ ಸಿಸಿಬಿ ನೋಟಿಸ್​ಗೆ ಪ್ರಿಯಾಂಕ ಇ-ಮೇಲ್ ಮೂಲಕ ಉತ್ತರ ನೀಡಿದ್ದಾರೆ. ನಾನು ಸದ್ಯಕ್ಕೆ ವಿಚಾರಣೆಗಾಗಿ ಬೆಂಗಳೂರಿಗೆ ಬರಲು ಸಾಧ್ಯವಿಲ್ಲ. ಇಬ್ಬರು ಚಿಕ್ಕ ಮಕ್ಕಳಿದ್ದಾರೆ, ಮಕ್ಕಳನ್ನು ಬಿಟ್ಟು ಬರಲು ಸಾಧ್ಯವಿಲ್ಲ. ಒಂದು ವೇಳೆ ಬಂದರೆ ಮಕ್ಕಳನ್ನು ಕರೆದುಕೊಂಡು ಬರಬೇಕು. ಬೆಂಗಳೂರಿನಲ್ಲಿ ಕೊರೊನಾ […]

2 ಬಾರಿ ನೋಟಿಸ್ ಕೊಟ್ರೂ ಡೋಂಟ್ ಕೇರ್ ಎಂದ ಆಳ್ವಾ, CCB ಎದುರಿರುವ ಆಯ್ಕೆಗಳೇನು?
ಆಯೇಷಾ ಬಾನು
| Edited By: |

Updated on:Oct 28, 2020 | 10:20 AM

Share

ಬೆಂಗಳೂರು: ಡ್ರಗ್ಸ್ ಕೇಸ್​ನಲ್ಲಿ ಆದಿತ್ಯ ಆಳ್ವಾ ಎಸ್ಕೇಪ್ ಆಗಿದ್ದಕ್ಕೆ ಸಹೋದರಿ ಪ್ರಿಯಾಂಕ ಆಳ್ವಾಗೆ ಸಂಕಷ್ಟ ಎದುರಾಗಿದೆ. ಆದಿತ್ಯ ಎಸ್ಕೇಪ್ ಆಗಲು ಸಹಾಯ ಮಾಡಿದ ಆರೋಪದಡಿ ಪ್ರಿಯಾಂಕ ಆಳ್ವಾಗೆ ಈಗಾಗಲೇ 2 ಬಾರಿ ಸಿಸಿಬಿ ನೋಟಿಸ್ ನೀಡಿದೆ. ಆದರೆ ಸಿಸಿಬಿ ನೋಟಿಸ್​ಗೆ ಪ್ರಿಯಾಂಕ ಇ-ಮೇಲ್ ಮೂಲಕ ಉತ್ತರ ನೀಡಿದ್ದಾರೆ.

ನಾನು ಸದ್ಯಕ್ಕೆ ವಿಚಾರಣೆಗಾಗಿ ಬೆಂಗಳೂರಿಗೆ ಬರಲು ಸಾಧ್ಯವಿಲ್ಲ. ಇಬ್ಬರು ಚಿಕ್ಕ ಮಕ್ಕಳಿದ್ದಾರೆ, ಮಕ್ಕಳನ್ನು ಬಿಟ್ಟು ಬರಲು ಸಾಧ್ಯವಿಲ್ಲ. ಒಂದು ವೇಳೆ ಬಂದರೆ ಮಕ್ಕಳನ್ನು ಕರೆದುಕೊಂಡು ಬರಬೇಕು. ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಿರುವುದರಿಂದ ಮಕ್ಕಳನ್ನು ಕರೆದುಕೊಂಡು ಮುಂಬೈನಿಂದ ಬೆಂಗಳೂರಿಗೆ ಬರಲು ಸಾಧ್ಯವಿಲ್ಲ. ಸ್ವಲ್ಪ ದಿನಗಳ ನಂತರ ಬಂದು ವಿಚಾರಣೆಗೆ ಹಾಜರಾಗುತ್ತೇನೆ. ಆಗ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಗೆ ಇ-ಮೇಲ್ ಮೂಲಕ ಉತ್ತರಿಸಿದ್ದಾರೆ.

ನೋಟಿಸ್ ಕೊಟ್ಟರೂ ಸಿಸಿಬಿ ಮುಂದೆ ಹಾಜರಾಗದ ಪ್ರಿಯಾಂಕ ಆಳ್ವಾ ವಿರುದ್ಧ ಸಿಸಿಬಿ ಮುಂದಿನ ನಡೆ ಏನು? ಸಾಧ್ಯತೆ -1: ಪ್ರಿಯಾಂಕ ಆಳ್ವಾ ವಿಚಾರಣೆಗೆ ಹಾಜರಾಗುವ ತನಕ ಕಾಯುವುದು. ಸಾಧ್ಯತೆ -2: ಮೂರನೇ ಬಾರಿ ಪ್ರಿಯಾಂಕ ಆಳ್ವಾಗೆ ನೋಟಿಸ್ ಜಾರಿ ಮಾಡುವುದು. ಸಾಧ್ಯತೆ -3: ಮುಂಬೈಗೆ ತೆರಳಿ ಸ್ಥಳೀಯ ಠಾಣೆಗೆ ಕರೆಸಿ ವಿಚಾರಣೆ ನಡೆಸುವುದು. ಸಾಧ್ಯತೆ -4: ಕೇಸ್ ಹೈಕೋರ್ಟ್ ನಲ್ಲಿರುವುದರಿಂದ ತೀರ್ಮಾನ ಆಗುವವರೆಗೂ ಕಾಯುವುದು. ಸಾಧ್ಯತೆ -5: ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳುವುದು

Published On - 8:19 am, Wed, 28 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್