AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPಗೆ ತೆರಳುತ್ತಿದ್ದ ಪ್ರಿಯಾಂಕಾ, ರಾಹುಲ್ ಗಾಂಧಿ ಪೊಲೀಸರ ವಶಕ್ಕೆ

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದ್ದ ಗ್ಯಾಂಗ್‌ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಹತ್ರಾಸ್​ಗೆ ತೆರಳುತ್ತಿದ್ದ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾರನ್ನು ರಾಜ್ಯದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ರಾಸ್‌ನಲ್ಲಿ ನಡೆದಿದ್ದ ದಲಿತ ಯುವತಿಯ ಮೇಲೆ ಗ್ಯಾಂಗ್‌ ರೇಪ್ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಇಂದು ರಾಹುಲ್​ ಮತ್ತು ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗುವುದಕ್ಕೆ ದೆಹಲಿಯಿಂದ ಹತ್ರಾಸ್​ಗೆ ತೆರಳುತ್ತಿದ್ದರು. ಇದೇ ವೇಳೆ ಇಬ್ಬರನ್ನೂ ಉತ್ತರ ಪ್ರದೇಶದ ಪೊಲೀಸರು ರಾಜ್ಯದಲ್ಲಿರುವ ಯಮುನಾ ಎಕ್ಸ್‌ಪ್ರೆಸ್​ ವೇ ಮೇಲೆ […]

UPಗೆ ತೆರಳುತ್ತಿದ್ದ ಪ್ರಿಯಾಂಕಾ, ರಾಹುಲ್ ಗಾಂಧಿ ಪೊಲೀಸರ ವಶಕ್ಕೆ
KUSHAL V
|

Updated on:Oct 01, 2020 | 4:03 PM

Share

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದ್ದ ಗ್ಯಾಂಗ್‌ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಹತ್ರಾಸ್​ಗೆ ತೆರಳುತ್ತಿದ್ದ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾರನ್ನು ರಾಜ್ಯದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹತ್ರಾಸ್‌ನಲ್ಲಿ ನಡೆದಿದ್ದ ದಲಿತ ಯುವತಿಯ ಮೇಲೆ ಗ್ಯಾಂಗ್‌ ರೇಪ್ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಇಂದು ರಾಹುಲ್​ ಮತ್ತು ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗುವುದಕ್ಕೆ ದೆಹಲಿಯಿಂದ ಹತ್ರಾಸ್​ಗೆ ತೆರಳುತ್ತಿದ್ದರು.

ಇದೇ ವೇಳೆ ಇಬ್ಬರನ್ನೂ ಉತ್ತರ ಪ್ರದೇಶದ ಪೊಲೀಸರು ರಾಜ್ಯದಲ್ಲಿರುವ ಯಮುನಾ ಎಕ್ಸ್‌ಪ್ರೆಸ್​ ವೇ ಮೇಲೆ ತಡೆದರು. ಕೂಡಲೇ ವಾಹನದಿಂದ ಇಳಿದ ರಾಹುಲ್​ ಮತ್ತು ಪ್ರಿಯಾಂಕಾ ಕಾರ್ಯಕರ್ತರ ಜೊತೆ ಪಾದಯಾತ್ರೆಯ ಮೂಲಕ ತೆರಳಲು ಮುಂದಾದರು. ಇದೇ ವೇಳೆ ಪೊಲೀಸರು ಅವರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ರಾಹುಲ್​ ಗಾಂಧಿ ನಾನು ಹತ್ರಾಸ್​ಗೆ ಒಬ್ಬನೇ ಕಾಲ್ನಡಿಗೆಯಲ್ಲಿ ಹೋಗಲು ಬಯಸುತ್ತೇನೆ. ಆದರೆ, ನನ್ನನ್ನ ಯಾವ ಸೆಕ್ಷನ್​ ಅಡಿಯಲ್ಲಿ ನೀವು ವಶಕ್ಕೆ ಪಡೆಯುತ್ತಿದ್ದೀರಾ ಎಂದು ಪ್ರಶ್ನಿಸಿದರು. ಆಗ ಪೊಲೀಸರು ನಿಮ್ಮನ್ನು IPC ಸೆಕ್ಷನ್​ 188 ಅಡಿಯಲ್ಲಿ ವಶಕ್ಕೆ ಪಡೆಯುತ್ತಿದ್ದೇವೆ ಎಂದು ಹೇಳಿದರು.

Published On - 3:30 pm, Thu, 1 October 20

VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು