AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPಗೆ ತೆರಳುತ್ತಿದ್ದ ಪ್ರಿಯಾಂಕಾ, ರಾಹುಲ್ ಗಾಂಧಿ ಪೊಲೀಸರ ವಶಕ್ಕೆ

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದ್ದ ಗ್ಯಾಂಗ್‌ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಹತ್ರಾಸ್​ಗೆ ತೆರಳುತ್ತಿದ್ದ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾರನ್ನು ರಾಜ್ಯದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ರಾಸ್‌ನಲ್ಲಿ ನಡೆದಿದ್ದ ದಲಿತ ಯುವತಿಯ ಮೇಲೆ ಗ್ಯಾಂಗ್‌ ರೇಪ್ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಇಂದು ರಾಹುಲ್​ ಮತ್ತು ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗುವುದಕ್ಕೆ ದೆಹಲಿಯಿಂದ ಹತ್ರಾಸ್​ಗೆ ತೆರಳುತ್ತಿದ್ದರು. ಇದೇ ವೇಳೆ ಇಬ್ಬರನ್ನೂ ಉತ್ತರ ಪ್ರದೇಶದ ಪೊಲೀಸರು ರಾಜ್ಯದಲ್ಲಿರುವ ಯಮುನಾ ಎಕ್ಸ್‌ಪ್ರೆಸ್​ ವೇ ಮೇಲೆ […]

UPಗೆ ತೆರಳುತ್ತಿದ್ದ ಪ್ರಿಯಾಂಕಾ, ರಾಹುಲ್ ಗಾಂಧಿ ಪೊಲೀಸರ ವಶಕ್ಕೆ
KUSHAL V
|

Updated on:Oct 01, 2020 | 4:03 PM

Share

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದ್ದ ಗ್ಯಾಂಗ್‌ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಹತ್ರಾಸ್​ಗೆ ತೆರಳುತ್ತಿದ್ದ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾರನ್ನು ರಾಜ್ಯದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹತ್ರಾಸ್‌ನಲ್ಲಿ ನಡೆದಿದ್ದ ದಲಿತ ಯುವತಿಯ ಮೇಲೆ ಗ್ಯಾಂಗ್‌ ರೇಪ್ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಇಂದು ರಾಹುಲ್​ ಮತ್ತು ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗುವುದಕ್ಕೆ ದೆಹಲಿಯಿಂದ ಹತ್ರಾಸ್​ಗೆ ತೆರಳುತ್ತಿದ್ದರು.

ಇದೇ ವೇಳೆ ಇಬ್ಬರನ್ನೂ ಉತ್ತರ ಪ್ರದೇಶದ ಪೊಲೀಸರು ರಾಜ್ಯದಲ್ಲಿರುವ ಯಮುನಾ ಎಕ್ಸ್‌ಪ್ರೆಸ್​ ವೇ ಮೇಲೆ ತಡೆದರು. ಕೂಡಲೇ ವಾಹನದಿಂದ ಇಳಿದ ರಾಹುಲ್​ ಮತ್ತು ಪ್ರಿಯಾಂಕಾ ಕಾರ್ಯಕರ್ತರ ಜೊತೆ ಪಾದಯಾತ್ರೆಯ ಮೂಲಕ ತೆರಳಲು ಮುಂದಾದರು. ಇದೇ ವೇಳೆ ಪೊಲೀಸರು ಅವರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ರಾಹುಲ್​ ಗಾಂಧಿ ನಾನು ಹತ್ರಾಸ್​ಗೆ ಒಬ್ಬನೇ ಕಾಲ್ನಡಿಗೆಯಲ್ಲಿ ಹೋಗಲು ಬಯಸುತ್ತೇನೆ. ಆದರೆ, ನನ್ನನ್ನ ಯಾವ ಸೆಕ್ಷನ್​ ಅಡಿಯಲ್ಲಿ ನೀವು ವಶಕ್ಕೆ ಪಡೆಯುತ್ತಿದ್ದೀರಾ ಎಂದು ಪ್ರಶ್ನಿಸಿದರು. ಆಗ ಪೊಲೀಸರು ನಿಮ್ಮನ್ನು IPC ಸೆಕ್ಷನ್​ 188 ಅಡಿಯಲ್ಲಿ ವಶಕ್ಕೆ ಪಡೆಯುತ್ತಿದ್ದೇವೆ ಎಂದು ಹೇಳಿದರು.

Published On - 3:30 pm, Thu, 1 October 20

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ