AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿಗೆ ಇಂಥ ಭಾಷಣ ಶೋಭೆಯಲ್ಲ; ಅರವಿಂದ್ ಕೇಜ್ರಿವಾಲ್​, ಪ್ರಿಯಾಂಕಾ ಗಾಂಧಿ ವಾಗ್ದಾಳಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಕೂಡ ಪ್ರಧಾನಿ ಮೋದಿಯವರ ಆರೋಪಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಲೋಕಸಭೆಯಲ್ಲಿ ಪ್ರಧಾನಿ ಮಾಡಿದ ಭಾಷಣದ ತುಣುಕನ್ನು ಶೇರ್​ ಮಾಡಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಇಂಥ ಭಾಷಣ ಶೋಭೆಯಲ್ಲ; ಅರವಿಂದ್ ಕೇಜ್ರಿವಾಲ್​, ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅರವಿಂದ್ ಕೇಜ್ರಿವಾಲ್​
Follow us
TV9 Web
| Updated By: Lakshmi Hegde

Updated on: Feb 08, 2022 | 1:35 PM

ನಿನ್ನೆ ಲೋಕಸಭೆಯಲ್ಲಿ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಕಾಂಗ್ರೆಸ್​ ಸೇರಿ ಇನ್ನಿತರ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು 100 ವರ್ಷ ಕಾಂಗ್ರೆಸ್​ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ಕೊವಿಡ್​ 19 ಮೊದಲನೇ ಅಲೆಯಲ್ಲಿ (Covid 19 1st Wave) ಸೋಂಕಿನ ಪ್ರಮಾಣ ಹೆಚ್ಚಲು ಕಾರಣ ಕಾಂಗ್ರೆಸ್​ ಮತ್ತು ದೆಹಲಿಯ ಆಮ್​ ಆದ್ಮಿ ಪಕ್ಷದ ಸರ್ಕಾರ ಎಂದೂ ಗಂಭೀರ ಆರೋಪ ಮಾಡಿದ್ದರು. ಕೊವಿಡ್​ 19 ಮೊದಲ ಅಲೆಯಲ್ಲಿ ಮುಂಬೈನಲ್ಲಿದ್ದ ವಲಸೆ ಕಾರ್ಮಿಕರಿಗೆ ಕಾಂಗ್ರೆಸ್​ ಉಚಿತವಾಗಿ ರೈಲು ಟಿಕೆಟ್​ ನೀಡಿ, ನಗರ ತೊರೆಯುವಂತೆ ಹೇಳಿತು. ಅತ್ತ ದೆಹಲಿ ಸರ್ಕಾರ, ಅಲ್ಲಿರುವ ವಲಸೆ ಕಾರ್ಮಿಕರಿಗೆ ನಗರ ತೊರೆಯುವಂತೆ ಹೇಳಿ, ಬಸ್​ ವ್ಯವಸ್ಥೆ ಮಾಡಿತು. ಹಾಗಾಗಿ ಅವರೆಲ್ಲ ತಮ್ಮ ಸ್ವಂತ ರಾಜ್ಯವಾದ ಪಂಜಾಬ್​, ಉತ್ತರಾಖಂಡ್​ ಮತ್ತು ಉತ್ತರಪ್ರದೇಶಕ್ಕೆ ಬರಬೇಕಾಯಿತು. ಹೀಗಾಗಿ ಈ ಮೂರು ರಾಜ್ಯಗಳಲ್ಲೂ ಕೊರೊನಾ ಸಿಕ್ಕಾಪಟೆ ಹರಡಿತು ಎಂದು ಪ್ರಧಾನಿ ಮೋದಿ ನಿನ್ನೆ ಭಾಷಣದ ವೇಳೆ ಹೇಳಿದ್ದರು. 

ಪ್ರಧಾನಿಯವರ ಈ ಆರೋಪಕ್ಕೆ ಇದೀಗ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಿರುಗೇಟು ನೀಡಿದ್ದಾರೆ. ಈ ವಲಸೆ ಕಾರ್ಮಿಕರೆಲ್ಲ ಪ್ರಧಾನಿ ನರೇಂದ್ರ ಮೋದಿಯವರಿಂದ ನಿರ್ಲಕ್ಷ್ಯಕ್ಕೆ ಒಳಗಾದವರಾಗಿದ್ದರು. ಕೊವಿಡ್​ 19ನಿಂದಾಗಿ ಕೆಲಸ ಕಳೆದುಕೊಂಡು ವಾಪಸ್​ ಮನೆಗೆ ಹೋಗಲು ಸಾಧ್ಯವಾಗದೆ ಅತಂತ್ರರಾಗಿದ್ದವರು. ದೂರದ ತಮ್ಮೂರಿಗೆ ಕಾಲ್ನಡಿಗೆಯಲ್ಲಿ ಹೊರಟಿದ್ದರು. ಪ್ರಧಾನಿ ಮೋದಿ ಹೀಗೆ ಹೇಳುತ್ತಿದ್ದಾರೆ ಎಂದರೆ, ವಲಸೆ ಕಾರ್ಮಿಕರಿಗೆ ಯಾರೂ ಸಹಾಯ ಮಾಡುವುದು ಅವರಿಗೆ ಇಷ್ಟವಿರಲಿಲ್ಲವಾ? ಮೋದಿಯವರು ಬಯಸುತ್ತಿರುವುದಾದರೂ ಏನನ್ನು ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, 2021ರ ಏಪ್ರಿಲ್​​ನಲ್ಲಿ ದೊಡ್ಡದೊಡ್ಡ ರ್ಯಾಲಿಗಳನ್ನು ನಡೆಸಿದರಲ್ಲ ಪ್ರಧಾನಿ ಮೋದಿ, ಆ ಬಗ್ಗೆ ಅವರೇನು ಹೇಳುತ್ತಾರೆ?  ಪಶ್ಚಿಮ ಬಂಗಾಳದ ಅಸಾನ್ಸೋಲ್​​ನಲ್ಲಿ ಜನಸಾಗರವೇ ಸೇರಿತ್ತು. ಆ ಸಮಯದಲ್ಲಿ ದೇಶದಲ್ಲಿ ಎರಡನೇ ಅಲೆ ಇತ್ತು, ದಿನಕ್ಕೆ 2 ಲಕ್ಷದಷ್ಟು ಕೊವಿಡ್​ 19 ಕೇಸ್​ಗಳು ದಾಖಲಾಗುತ್ತಿದ್ದವು ಎಂದು ಪ್ರಿಯಾಂಕಾ ಗಾಂಧಿ ನೆನಪಿಸಿದ್ದಾರೆ.

ಹಾಗೇ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಕೂಡ ಪ್ರಧಾನಿ ಮೋದಿಯವರ ಆರೋಪಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಲೋಕಸಭೆಯಲ್ಲಿ ಪ್ರಧಾನಿ ಮಾಡಿದ ಭಾಷಣದ ತುಣುಕನ್ನು ಶೇರ್​ ಮಾಡಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಈ ಹೇಳಿಕೆ ಸಂಪೂರ್ಣವಾಗಿ ತಪ್ಪಾದದ್ದು. ಕೊರೊನಾದಿಂದ ತಮ್ಮ ಜೀವನದಲ್ಲಿ ಕೆಲಸ ಕಳೆದುಕೊಂಡವರು, ಪ್ರೀತಿ ಪಾತ್ರರನ್ನು ಕಳೆದುಕೊಂಡು ನೋವು ಅನುಭವಿಸಿದವರ ಬಗ್ಗೆ ಪ್ರಧಾನಿ ತುಂಬ ಸೂಕ್ಷ್ಮವಾಗಿ ವರ್ತಿಸಬೇಕು ಎಂದು ದೇಶ ಬಯಸುತ್ತದೆ. ಆದರೆ ಪ್ರಧಾನಿ ಇಂಥ ಮಾತುಗಳನ್ನಾಡುವುದು ಸೂಕ್ತವಲ್ಲ ಎಂದಿದ್ದಾರೆ.

ಇದನ್ನೂ ಓದಿ: PM Modi in Parliament: ಇನ್ನು 100 ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ; ಸಂಸತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಲೇವಡಿ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?