AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿಗೆ ಇಂಥ ಭಾಷಣ ಶೋಭೆಯಲ್ಲ; ಅರವಿಂದ್ ಕೇಜ್ರಿವಾಲ್​, ಪ್ರಿಯಾಂಕಾ ಗಾಂಧಿ ವಾಗ್ದಾಳಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಕೂಡ ಪ್ರಧಾನಿ ಮೋದಿಯವರ ಆರೋಪಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಲೋಕಸಭೆಯಲ್ಲಿ ಪ್ರಧಾನಿ ಮಾಡಿದ ಭಾಷಣದ ತುಣುಕನ್ನು ಶೇರ್​ ಮಾಡಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಇಂಥ ಭಾಷಣ ಶೋಭೆಯಲ್ಲ; ಅರವಿಂದ್ ಕೇಜ್ರಿವಾಲ್​, ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on: Feb 08, 2022 | 1:35 PM

Share

ನಿನ್ನೆ ಲೋಕಸಭೆಯಲ್ಲಿ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಕಾಂಗ್ರೆಸ್​ ಸೇರಿ ಇನ್ನಿತರ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು 100 ವರ್ಷ ಕಾಂಗ್ರೆಸ್​ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ಕೊವಿಡ್​ 19 ಮೊದಲನೇ ಅಲೆಯಲ್ಲಿ (Covid 19 1st Wave) ಸೋಂಕಿನ ಪ್ರಮಾಣ ಹೆಚ್ಚಲು ಕಾರಣ ಕಾಂಗ್ರೆಸ್​ ಮತ್ತು ದೆಹಲಿಯ ಆಮ್​ ಆದ್ಮಿ ಪಕ್ಷದ ಸರ್ಕಾರ ಎಂದೂ ಗಂಭೀರ ಆರೋಪ ಮಾಡಿದ್ದರು. ಕೊವಿಡ್​ 19 ಮೊದಲ ಅಲೆಯಲ್ಲಿ ಮುಂಬೈನಲ್ಲಿದ್ದ ವಲಸೆ ಕಾರ್ಮಿಕರಿಗೆ ಕಾಂಗ್ರೆಸ್​ ಉಚಿತವಾಗಿ ರೈಲು ಟಿಕೆಟ್​ ನೀಡಿ, ನಗರ ತೊರೆಯುವಂತೆ ಹೇಳಿತು. ಅತ್ತ ದೆಹಲಿ ಸರ್ಕಾರ, ಅಲ್ಲಿರುವ ವಲಸೆ ಕಾರ್ಮಿಕರಿಗೆ ನಗರ ತೊರೆಯುವಂತೆ ಹೇಳಿ, ಬಸ್​ ವ್ಯವಸ್ಥೆ ಮಾಡಿತು. ಹಾಗಾಗಿ ಅವರೆಲ್ಲ ತಮ್ಮ ಸ್ವಂತ ರಾಜ್ಯವಾದ ಪಂಜಾಬ್​, ಉತ್ತರಾಖಂಡ್​ ಮತ್ತು ಉತ್ತರಪ್ರದೇಶಕ್ಕೆ ಬರಬೇಕಾಯಿತು. ಹೀಗಾಗಿ ಈ ಮೂರು ರಾಜ್ಯಗಳಲ್ಲೂ ಕೊರೊನಾ ಸಿಕ್ಕಾಪಟೆ ಹರಡಿತು ಎಂದು ಪ್ರಧಾನಿ ಮೋದಿ ನಿನ್ನೆ ಭಾಷಣದ ವೇಳೆ ಹೇಳಿದ್ದರು. 

ಪ್ರಧಾನಿಯವರ ಈ ಆರೋಪಕ್ಕೆ ಇದೀಗ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಿರುಗೇಟು ನೀಡಿದ್ದಾರೆ. ಈ ವಲಸೆ ಕಾರ್ಮಿಕರೆಲ್ಲ ಪ್ರಧಾನಿ ನರೇಂದ್ರ ಮೋದಿಯವರಿಂದ ನಿರ್ಲಕ್ಷ್ಯಕ್ಕೆ ಒಳಗಾದವರಾಗಿದ್ದರು. ಕೊವಿಡ್​ 19ನಿಂದಾಗಿ ಕೆಲಸ ಕಳೆದುಕೊಂಡು ವಾಪಸ್​ ಮನೆಗೆ ಹೋಗಲು ಸಾಧ್ಯವಾಗದೆ ಅತಂತ್ರರಾಗಿದ್ದವರು. ದೂರದ ತಮ್ಮೂರಿಗೆ ಕಾಲ್ನಡಿಗೆಯಲ್ಲಿ ಹೊರಟಿದ್ದರು. ಪ್ರಧಾನಿ ಮೋದಿ ಹೀಗೆ ಹೇಳುತ್ತಿದ್ದಾರೆ ಎಂದರೆ, ವಲಸೆ ಕಾರ್ಮಿಕರಿಗೆ ಯಾರೂ ಸಹಾಯ ಮಾಡುವುದು ಅವರಿಗೆ ಇಷ್ಟವಿರಲಿಲ್ಲವಾ? ಮೋದಿಯವರು ಬಯಸುತ್ತಿರುವುದಾದರೂ ಏನನ್ನು ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, 2021ರ ಏಪ್ರಿಲ್​​ನಲ್ಲಿ ದೊಡ್ಡದೊಡ್ಡ ರ್ಯಾಲಿಗಳನ್ನು ನಡೆಸಿದರಲ್ಲ ಪ್ರಧಾನಿ ಮೋದಿ, ಆ ಬಗ್ಗೆ ಅವರೇನು ಹೇಳುತ್ತಾರೆ?  ಪಶ್ಚಿಮ ಬಂಗಾಳದ ಅಸಾನ್ಸೋಲ್​​ನಲ್ಲಿ ಜನಸಾಗರವೇ ಸೇರಿತ್ತು. ಆ ಸಮಯದಲ್ಲಿ ದೇಶದಲ್ಲಿ ಎರಡನೇ ಅಲೆ ಇತ್ತು, ದಿನಕ್ಕೆ 2 ಲಕ್ಷದಷ್ಟು ಕೊವಿಡ್​ 19 ಕೇಸ್​ಗಳು ದಾಖಲಾಗುತ್ತಿದ್ದವು ಎಂದು ಪ್ರಿಯಾಂಕಾ ಗಾಂಧಿ ನೆನಪಿಸಿದ್ದಾರೆ.

ಹಾಗೇ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಕೂಡ ಪ್ರಧಾನಿ ಮೋದಿಯವರ ಆರೋಪಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಲೋಕಸಭೆಯಲ್ಲಿ ಪ್ರಧಾನಿ ಮಾಡಿದ ಭಾಷಣದ ತುಣುಕನ್ನು ಶೇರ್​ ಮಾಡಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಈ ಹೇಳಿಕೆ ಸಂಪೂರ್ಣವಾಗಿ ತಪ್ಪಾದದ್ದು. ಕೊರೊನಾದಿಂದ ತಮ್ಮ ಜೀವನದಲ್ಲಿ ಕೆಲಸ ಕಳೆದುಕೊಂಡವರು, ಪ್ರೀತಿ ಪಾತ್ರರನ್ನು ಕಳೆದುಕೊಂಡು ನೋವು ಅನುಭವಿಸಿದವರ ಬಗ್ಗೆ ಪ್ರಧಾನಿ ತುಂಬ ಸೂಕ್ಷ್ಮವಾಗಿ ವರ್ತಿಸಬೇಕು ಎಂದು ದೇಶ ಬಯಸುತ್ತದೆ. ಆದರೆ ಪ್ರಧಾನಿ ಇಂಥ ಮಾತುಗಳನ್ನಾಡುವುದು ಸೂಕ್ತವಲ್ಲ ಎಂದಿದ್ದಾರೆ.

ಇದನ್ನೂ ಓದಿ: PM Modi in Parliament: ಇನ್ನು 100 ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ; ಸಂಸತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಲೇವಡಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ