Priyanka Gandhi: ಉತ್ತರ ಪ್ರದೇಶದ ಹರಗಾಂವ್​ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ

ಉತ್ತರ ಪ್ರದೇಶದ ಹರಗಾಂವ್​ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶದ ಪೊಲೀಸರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಗೃಹ ಬಂಧನದಲ್ಲಿರಿಸಿದ್ದಾರೆ.

Priyanka Gandhi: ಉತ್ತರ ಪ್ರದೇಶದ ಹರಗಾಂವ್​ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ
ಪ್ರಿಯಾಂಕಾ ಗಾಂಧಿ (ಸಂಗ್ರಹ ಚಿತ್ರ)
Follow us
| Updated By: shivaprasad.hs

Updated on:Oct 04, 2021 | 8:06 AM

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆಯ ಸಂದರ್ಭದಲ್ಲಿನ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿರುವ ಲಖಿಂಪುರ ಖೇರಿಗೆ ತೆರಳುವಾಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಲಾಗಿದೆ ಎಂದು ಎಎನ್​ಐ ವರದಿ ಮಾಡಿದೆ. ಲಖೀಮ್‌ಪುರ್ ಖೇರಿಗೆ ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಸೀತಾಪುರದ ಹರಗಾಂವ್‌ ಬಳಿ ಇಂದು ಮುಂಜಾನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಎಎನ್​ಐ ಹಂಚಿಕೊಂಡಿರುವ ಟ್ವೀಟ್:

ಈ ಕುರಿತು ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಟ್ವೀಟ್ ಟ್ವೀಟ್ ಮಾಡಿದ್ದು, ಅದರಲ್ಲಿ ಪ್ರಿಯಾಂಕಾ ಪೊಲೀಸರೊಂದಿಗೆ ಮಾತನಾಡುತ್ತಿರುವ ವಿಡಿಯೊವಿದೆ. ಇದನ್ನು ಹಂಚಿಕೊಂಡಿರುವ ಅವರು, ‘ಈ ದೇಶದಲ್ಲಿ ಏನಾಗುತ್ತಿದೆ?  Z+ ಭದ್ರತೆಯಿರುವ ನಾಯಕಿಯನ್ನು ಯಾವುದೇ ವಾರಂಟ್ ಇಲ್ಲದೇ ಪೊಲೀಸರು ಬಂಧಿಸಿದ್ದಾರೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಆ ಟ್ವೀಟ್ ಇಲ್ಲಿದೆ:

ಪ್ರಿಯಾಂಕಾರನ್ನು ಬಂಧಿಸಿರುವ ಕುರಿತು ಉತ್ತರ ಪ್ರದೇಶ ಕಾಂಗ್ರೆಸ್ ಟ್ವೀಟ್ ಇಲ್ಲಿದೆ:

ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಗೃಹಬಂಧನದಲ್ಲಿರಿಸಿದ್ದರು. ಪ್ರಿಯಾಂಕಾ ಆ ಆದೇಶವನ್ನು ಧಿಕ್ಕರಿಸಿ ಭಾನುವಾರ ರಾತ್ರಿ ಲಖನೌದಿಂದ ಲಖಿಂಪುರ್ ಖೇರಿಗೆ ತೆರಳಿದರು. ಉತ್ತರ ಪ್ರದೇಶ ಪೊಲೀಸರು ಇಂದು (ಸೋಮವಾರ) ಬೆಳಗಿನ ಜಾವ 5.30 ರ ಸುಮಾರಿಗೆ ಹರಗಾಂವ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಪ್ರಿಯಾಂಕಾರನ್ನು ಬಂಧಿಸಿದ್ದಾರೆ. ಅವರನ್ನು ಸೀತಾಪುರ ಜಿಲ್ಲೆಯ ಅತಿಥಿ ಗೃಹಕ್ಕೆ ಕರೆದೊಯ್ಯಲಾಗಿದೆ. ಜನರು ಬೆಂಬಲ ನೀಡಲು ಆ ಪ್ರದೇಶವನ್ನು ತಲುಪುವಂತೆ ಯುಪಿ ಕಾಂಗ್ರೆಸ್ ಟ್ವೀಟ್ ಮಾಡಿದ. ಈ ಕುರಿತು ಇಂಡಿಯಾ ಟುಡೆ ವರದಿ ಮಾಡಿದೆ.

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಗೃಹಬಂಧನ:

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಗೃಹಬಂಧನದಲ್ಲಿರಸಲಾಗಿದೆ. ಅವರನ್ನು ಲಕ್ನೋದಲ್ಲಿರುವ ಅವರ ಮನೆಯಲ್ಲಿ ಬಂಧನದಲ್ಲಿರಸಲಾಗಿದೆ.

ಲಖಿಂಪುರ- ಖೇರಿಯಲ್ಲಿ ಏನಾಗಿತ್ತು? ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಉಪಮುಖ್ಯಮಂತ್ರಿ ಕೇಶವ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿಗಾಗಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಇಬ್ಬರು ರೈತರ ಮೇಲೆ ಸಚಿವರ ಬೆಂಗಾವಲು ವಾಹನ ಹರಿದು ಸಾವಿಗೀಡಾಗಿದ್ದಾರೆ ಎಂದು ರೈತರು ಹೇಳಿರುವುದಾಗಿ ಎನ್​​​ಡಿಟಿವಿ ವರದಿ ಮಾಡಿತ್ತು. ವಾಹನಗಳಿಗೆ ಬೆಂಕಿ ಹಚ್ಚಿ ಉರಿಯುತ್ತಿರುವುದು, ಗಾಯಗೊಂಡವರು ನೆಲದ ಮೇಲೆ ಮಲಗಿರುವುದು ವಿಡಿಯೊದಲ್ಲಿದೆ. ಪ್ರಕರಣದಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ:

ಶಾರುಖ್​ ಪುತ್ರನ ಅರೆಸ್ಟ್​ ಬೆನ್ನಲ್ಲೇ ಓಡೋಡಿ ಬಂದ ಸಲ್ಮಾನ್​ ಖಾನ್​; ‘ಮನ್ನತ್​’ನಲ್ಲಿ ನಡೆದಿದ್ದು ಏನು?

Karnataka Weather Today: ಬೆಂಗಳೂರಿನಲ್ಲಿ ಇಂದೂ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ

Published On - 7:46 am, Mon, 4 October 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು