AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AICC ಅಧ್ಯಕ್ಷೆಯಾಗಲು ಪ್ರಿಯಾಂಕಾ ನಿರಾಸಕ್ತಿ, ಅಸಲಿ ಕಾರಣ ಇದು!

ದೆಹಲಿ: ಹಾಲಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಯವರು ತಮ್ಮ ಸ್ಥಾನದಿಂದ ಕೆಳಗಿಳಿಯುವ ಸೂಚನೆ ನೀಡಿದ್ದು ಈ ನಡುವೆ ಮುಂದಿನ ಎಐಸಿಸಿ ಅಧ್ಯಕ್ಷರು ಯಾರಾಗುತ್ತಾರೆ ಎಂಬ ವಿಷಯ ಕುತೂಹಲ ಕೆರಳಿಸಿದೆ. ಈ ನಡುವೆ ಎಐಸಿಸಿ ಅಧ್ಯಕ್ಷೆಯಾಗಲು ಪ್ರಿಯಾಂಕಾ ಗಾಂಧಿ ನಿರಾಸಕ್ತಿ ತೋರಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದತ್ತ ಮಾತ್ರ ಪ್ರಿಯಾಂಕಾ ಗಾಂಧಿ ಚಿತ್ತವಿದ್ದು ಅಲ್ಲಿ ಹೆಚ್ಚು ಗಮನ ಹರಿಸಲು ಇಚ್ಛಿಸುತ್ತಿದ್ದಾರಂತೆ. ಕಳೆದ ಲೋಕಸಭೆ ಚುನಾವಣೆ ವೇಳೆ Upಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಬೇಕಾಯಿತು. ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ […]

AICC ಅಧ್ಯಕ್ಷೆಯಾಗಲು ಪ್ರಿಯಾಂಕಾ ನಿರಾಸಕ್ತಿ, ಅಸಲಿ ಕಾರಣ ಇದು!
KUSHAL V
| Updated By: ಸಾಧು ಶ್ರೀನಾಥ್​|

Updated on: Aug 24, 2020 | 11:38 AM

Share

ದೆಹಲಿ: ಹಾಲಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಯವರು ತಮ್ಮ ಸ್ಥಾನದಿಂದ ಕೆಳಗಿಳಿಯುವ ಸೂಚನೆ ನೀಡಿದ್ದು ಈ ನಡುವೆ ಮುಂದಿನ ಎಐಸಿಸಿ ಅಧ್ಯಕ್ಷರು ಯಾರಾಗುತ್ತಾರೆ ಎಂಬ ವಿಷಯ ಕುತೂಹಲ ಕೆರಳಿಸಿದೆ. ಈ ನಡುವೆ ಎಐಸಿಸಿ ಅಧ್ಯಕ್ಷೆಯಾಗಲು ಪ್ರಿಯಾಂಕಾ ಗಾಂಧಿ ನಿರಾಸಕ್ತಿ ತೋರಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದತ್ತ ಮಾತ್ರ ಪ್ರಿಯಾಂಕಾ ಗಾಂಧಿ ಚಿತ್ತವಿದ್ದು ಅಲ್ಲಿ ಹೆಚ್ಚು ಗಮನ ಹರಿಸಲು ಇಚ್ಛಿಸುತ್ತಿದ್ದಾರಂತೆ. ಕಳೆದ ಲೋಕಸಭೆ ಚುನಾವಣೆ ವೇಳೆ Upಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಬೇಕಾಯಿತು. ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ಉಸ್ತುವಾರಿ ಹೊತ್ತು ಪ್ರಧಾನ ಕಾರ್ಯದರ್ಶಿಯಾದರೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿತ್ತು. ಹೀಗಾಗಿ, 2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ ಉತ್ತರಪ್ರದೇಶದಲ್ಲಿ ಬಹುಮತದಿಂದ ಗೆಲ್ಲಿಸಲು ಪ್ರಿಯಾಂಕಾ ಅದರ ಬಗ್ಗೆ ಗಮನ ಹರಿಸಲು ಇಚ್ಛಿಸಿದ್ದಾರೆ.

ಜೊತೆಗೆ, ಪ್ರಿಯಾಂಕಾ ಗಾಂಧಿಗೆ ತಮ್ಮ ಪತಿ ರಾಬರ್ಟ್ ವಾದ್ರಾನೇ ಹೊರೆಯಾಗುವ ಸಾಧ್ಯತೆಯಿದೆ. ಪ್ರಿಯಾಂಕಾ ಒಂದು ವೇಳೆ ಎಐಸಿಸಿ ಅಧ್ಯಕ್ಷರಾದರೇ ರಾಬರ್ಟ್ ವಾದ್ರಾ ವಿರುದ್ಧದ ಭೂ ಹಗರಣ ವಿಚಾರ ಪ್ರಸ್ತಾಪವಾಗುತ್ತೆ. ಇದರಿಂದ ಪ್ರಿಯಾಂಕಾಗೆ ಇರಿಸು-ಮುರಿಸಾಗುವ ಆಗುವ ಸಾಧ್ಯತೆಯಿದೆ. ಇದಲ್ಲದೆ, ಹರಿಯಾಣದ ಭೂ ಹಗರಣ ತನಿಖೆಯು ಸಹ ಚುರುಕು ಆಗಬಹುದು. ಆದ್ದರಿಂದ ಇದು ರಾಬರ್ಟ್ ವಾದ್ರಾಗೆ ಸಂಕಷ್ಟ ತರಲಿದೆ ಎಂದು ಪ್ರಿಯಾಂಕಾರಿಗೆ ಭಾಸವಾಗಿದೆ.

ರಾಬರ್ಟ್ ವಾದ್ರಾ ಹರಿಯಾಣಾದಲ್ಲಿ ಭೂ ಪರಿವರ್ತನೆ ಮಾಡಿಸಿಕೊಂಡು ಭಾರಿ ಲಾಭ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಹೀಗಾಗಿ, ಅದರ ಕುರಿತು ED ತನಿಖೆ ನಡೆಯುತ್ತಿದ್ದು ತನಿಖೆ ಪೂರ್ಣಗೊಳಿಸಿ ವಾದ್ರಾರನ್ನು ಇಕ್ಕಟ್ಟಿಗೆ ಸಿಲುಕಿಸಬಹುದು. ಹೀಗಾಗಿ ಎಐಸಿಸಿ ಅಧ್ಯಕ್ಷೆಯಾಗಲು ಪ್ರಿಯಾಂಕಾ ನಿರಾಸಕ್ತಿ ತೋರುತ್ತಿದ್ದಾರೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!