AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೊದಲ ಹಂತದ ಮತದಾನಕ್ಕೆ ಪ್ರಚಾರ ಮುಕ್ತಾಯವಾದ ಬೆನ್ನಲ್ಲೇ ಯಮುನಾ ಪೂಜೆ ನೆರವೇರಿಸಿದ ಪ್ರಿಯಾಂಕಾ ಗಾಂಧಿ; ವೇದ ಮಂತ್ರ ಪಠಣ

ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭೆ ಕ್ಷೇತ್ರಗಳಿಗೆ ಚುನಾಣೆ ನಡೆಯಲಿದ್ದು, ಏಳು ಹಂತದಲ್ಲಿ ಮತದಾನವಿದೆ. ನಾಳೆ (ಫೆ.10) ಮೊದಲ ಹಂತದಲ್ಲಿ, 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತದೆ.

Video: ಮೊದಲ ಹಂತದ ಮತದಾನಕ್ಕೆ ಪ್ರಚಾರ ಮುಕ್ತಾಯವಾದ ಬೆನ್ನಲ್ಲೇ ಯಮುನಾ ಪೂಜೆ ನೆರವೇರಿಸಿದ ಪ್ರಿಯಾಂಕಾ ಗಾಂಧಿ; ವೇದ ಮಂತ್ರ ಪಠಣ
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Updated By: Lakshmi Hegde|

Updated on:Feb 09, 2022 | 11:14 AM

Share

ಲಖನೌ: ಉತ್ತರ ಪ್ರದೇಶ ಚುನಾವಣೆ (Uttar Pradesh Assembly Election 2022) ಸಮೀಪಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ನಿನ್ನೆ ಮಂಗಳವಾರ ಮಥುರಾದ ವಿಶ್ರಮ್​ ಘಾಟ್​​ನಲ್ಲಿ ಯಮುನಾ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಅಲ್ಲಿ ಉಪಸ್ಥಿತರಿದ್ದ ಅರ್ಚಕರು ದೊಡ್ಡದಾಗಿ ವೇದ ಮಂತ್ರ ಪಠಿಸಿದ್ದಾರೆ. ಉತ್ತರ ಪ್ರದೇಶದ ಮೊದಲ ಹಂತದ ಮತದಾನಕ್ಕೆ ಪ್ರಚಾರ ಮುಗಿದ ಬೆನ್ನಲ್ಲೇ  ಈ ಪೂಜೆ ಮಾಡಿದ್ದಾರೆ. ಅಂದಹಾಗೇ, ಪ್ರಿಯಾಂಕಾ ಗಾಂಧಿ ವಾದ್ರಾ ನಿನ್ನೆ ಮೀರತ್​, ಆಗ್ರಾ ಮತ್ತು ಮಥುರಾ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಮೀರತ್​ನ ಮಾವಾನಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್​ ಪರ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಟ್ರ್ಯಾಕ್ಟರ್​​ನಲ್ಲಿ ತೆರಳಿದ್ದಾರೆ. ಹಾಗೇ, ಅಲ್ಲಿದ್ದ ಮಹಿಳೆಯರೊಂದಿಗೆ ಸೆಲ್ಫೀ ಕೂಡ ತೆಗೆಸಿಕೊಂಡಿದ್ದಾರೆ. 

ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭೆ ಕ್ಷೇತ್ರಗಳಿಗೆ ಚುನಾಣೆ ನಡೆಯಲಿದ್ದು, ಏಳು ಹಂತದಲ್ಲಿ ಮತದಾನವಿದೆ. ನಾಳೆ (ಫೆ.10) ಮೊದಲ ಹಂತದಲ್ಲಿ, 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತದೆ. ಪ್ರಿಯಾಂಕಾ ಗಾಂಧಿ ಈಗಾಗಲೇ ಪಕ್ಷದ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್​ನ ಶ್ರಮಕ್ಕೆ ಈ ಚುನಾವಣೆಯಲ್ಲಿ ತಕ್ಕ ಪ್ರತಿಫಲ ದೊರೆಯುತ್ತದೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ನಿನ್ನೆ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೊವಿಡ್ 19 ಮೂರನೇ ಅಲೆ ಸಂದರ್ಭದಲ್ಲಿ ಮುಂಬೈನಲ್ಲಿ ವಲಸೆ ಕಾರ್ಮಿಕರಿಗೆ ಕಾಂಗ್ರೆಸ್​ ಉಚಿತ ಬಸ್ ಟಿಕೆಟ್ ನೀಡುವ ಮೂಲಕ ಕೊರೊನಾ ಹೆಚ್ಚಳಕ್ಕೆ ಕಾರಣವಾಯಿತು ಎಂದು ಸಂಸತ್ತಿನಲ್ಲಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರತಿಕ್ರಿಯಿಸಿದ್ದ ಅವರು, ಈ ವಲಸೆ ಕಾರ್ಮಿಕರೆಲ್ಲ ಪ್ರಧಾನಿ ನರೇಂದ್ರ ಮೋದಿಯವರಿಂದ ನಿರ್ಲಕ್ಷ್ಯಕ್ಕೆ ಒಳಗಾದವರಾಗಿದ್ದರು. ಕೊವಿಡ್​ 19ನಿಂದಾಗಿ ಕೆಲಸ ಕಳೆದುಕೊಂಡು ವಾಪಸ್​ ಮನೆಗೆ ಹೋಗಲು ಸಾಧ್ಯವಾಗದೆ ಅತಂತ್ರರಾಗಿದ್ದವರು. ದೂರದ ತಮ್ಮೂರಿಗೆ ಕಾಲ್ನಡಿಗೆಯಲ್ಲಿ ಹೊರಟಿದ್ದರು. ಪ್ರಧಾನಿ ಮೋದಿ ಹೀಗೆ ಹೇಳುತ್ತಿದ್ದಾರೆ ಎಂದರೆ, ವಲಸೆ ಕಾರ್ಮಿಕರಿಗೆ ಯಾರೂ ಸಹಾಯ ಮಾಡುವುದು ಅವರಿಗೆ ಇಷ್ಟವಿರಲಿಲ್ಲವಾ? ಮೋದಿಯವರು ಬಯಸುತ್ತಿರುವುದಾದರೂ ಏನನ್ನು ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, 2021ರ ಏಪ್ರಿಲ್​​ನಲ್ಲಿ ದೊಡ್ಡದೊಡ್ಡ ರ್ಯಾಲಿಗಳನ್ನು ನಡೆಸಿದರಲ್ಲ ಪ್ರಧಾನಿ ಮೋದಿ, ಆ ಬಗ್ಗೆ ಅವರೇನು ಹೇಳುತ್ತಾರೆ?  ಪಶ್ಚಿಮ ಬಂಗಾಳದ ಅಸಾನ್ಸೋಲ್​​ನಲ್ಲಿ ಜನಸಾಗರವೇ ಸೇರಿತ್ತು. ಆ ಸಮಯದಲ್ಲಿ ದೇಶದಲ್ಲಿ ಎರಡನೇ ಅಲೆ ಇತ್ತು, ದಿನಕ್ಕೆ 2 ಲಕ್ಷದಷ್ಟು ಕೊವಿಡ್​ 19 ಕೇಸ್​ಗಳು ದಾಖಲಾಗುತ್ತಿದ್ದವು ಎಂದು ಹೇಳಿದ್ದರು.

ಇದನ್ನೂ ಓದಿ: ‘ಪ್ರೀತಿಗಿಂತ ದೊಡ್ಡ ಅಮಲು ಯಾವುದೂ ಇಲ್ಲ’; ಲವ್​ ಬಗ್ಗೆ ‘ಲವ್​ ಮಾಕ್ಟೇಲ್​ 2’ ವೇದಿಕೆಯಲ್ಲಿ ಕ್ರೇಜಿಸ್ಟಾರ್ ಮಾತು

Published On - 9:57 am, Wed, 9 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ